ಸರ್ಕಾರ ಪತನಗೊಂಡ್ರೆ ಬಿಜೆಪಿ ಸರ್ಕಾರ

•ಚುನಾವಣೆಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಮತ •ಬಾಗಲಕೋಟೆ -ಕುಡಚಿ ರೈಲು ಮಾರ್ಗ ಪೂರ್ಣಗೊಳಿಸುವೆ

Team Udayavani, Jun 9, 2019, 10:06 AM IST

bagalkote-tdy-3..

ಬನಹಟ್ಟಿ: ನಗರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹಾಗೂ ಶಾಸಕ ಸಿದ್ದು ಸವದಿ ಅವರನ್ನು ಕಾರ್ಯಕರ್ತರು ಸನ್ಮಾನಿಸಿದರು.

ಬನಹಟ್ಟಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ. ಅದು ತಾನಾಗಿಯೇ ಬೀಳಲಿದೆ. ಸರ್ಕಾರ ಪತನಗೊಂಡರೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಶನಿವಾರ ಸ್ಥಳೀಯ ಈಶ್ವರಲಿಂಗ ಮೈದಾನದಲ್ಲಿ ತೇರದಾಳ ಮತಕ್ಷೇತ್ರದ ಕಾರ್ಯಕರ್ತರು ಹಮ್ಮಿಕೊಂಡ ಪಿ.ಸಿ. ಗದ್ದಿಗೌಡರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸದ್ಯ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಿಸಲಿದೆ ಎಂದರು.

ದೇಶದ ಪ್ರಧಾನಿ ನರೇಂದ್ರ ಮೋದಿ ಪ್ರಪಂಚದ ನಾಯಕರಾಗಿದ್ದಾರೆ. 2019ರ ಚುನಾವಣೆಯಲ್ಲಿ ದೇಶದ ಜನತೆ ಯಾವುದೆ ಜಾತಿ ಧರ್ಮದ ಆಧಾರದ ಮೇಲೆ ಮತ ಚಲಾಯಿಸಿಲ್ಲ. ದೇಶದ ಅಭಿವೃದ್ಧಿ ಕಾರ್ಯ ನೋಡಿ ಮತ ಹಾಕಿದ್ದಾರೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಲು ಪೇಸ್‌ ಮತ್ತು ಬೂತ್‌ಮಟ್ಟದ ಕಾರ್ಯಕರ್ತರು ಶ್ರಮಿಸಬೇಕು ಎಂದು ಈಶ್ವರಪ್ಪ ಹೇಳಿದರು.

ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಮುಂಬರುವ ದಿನಗಳಲ್ಲಿ ಬಾಗಲಕೋಟೆ -ಕುಡಚಿ ರೈಲು ಮಾರ್ಗವನ್ನು ಪೂರ್ಣಗೊಳಿಸುವೆ. ಈ ಭಾಗದ ನೀರಾವರಿ ಕುರಿತು ಗಮನನೀಡುತ್ತೇನೆ. ನಾನು ಪ್ರಚಾರ ರಾಜಕಾರಣಿಯಲ್ಲ. ರಾಜಕಾರಣದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಈ ಬಾರಿಯ ಚುನಾವಣೆ ನನಗೆ ಪುನರ್‌ಜನ್ಮ ನೀಡಿದೆ. ಜಿಲ್ಲೆಯ ಕಾರ್ಯಕರ್ತರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದರಿಂದ ಭಾರೀ ಅಂತರದ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದರು.

ಶಾಸಕ ಸಿದ್ದು ಸವದಿ ಮಾತನಾಡಿ, ನಾಲ್ಕು ಬಾರಿಯ ಲೋಕಸಭೆಯ ಚುನಾವಣೆಯಲ್ಲಿ ಗದ್ದಿಗೌಡರ ಅವರಿಗೆ ತೇರದಾಳ ಕ್ಷೇತ್ರ ಹೆಚ್ಚು ಮತ ನೀಡಿದೆ. ಮುಂಬರುವ ದಿನಗಳಲ್ಲಿ ಈ ಭಾಗದ ಜನರ ಅಭಿವೃದ್ಧಿಗಾಗಿ ಶ್ರಮಿಸಬೇಕು. ರಾಜ್ಯದಲ್ಲಿ ಆಡಳಿತ ನಡೆಸುತ್ತಿರ ಸಮ್ಮಿಶ್ರ ಸರ್ಕಾರ ಜನಪ್ರಿಯ ಸರ್ಕಾರವಲ್ಲ, ಅದು ಜನದ್ರೋಹಿ ಸರ್ಕಾರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕ್ಷೇತ್ರ ಕಾರ್ಯಕರ್ತರು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸಂಸದ ಪಿ.ಸಿ.ಗದ್ದಿಗೌಡರ, ಕೆ.ಎಸ್‌.ಈಶ್ವರಪ್ಪ ಮತ್ತು ಶಾಸಕ ಸಿದ್ದು ಸವದಿ ಅವರನ್ನು ಸನ್ಮಾನಿಸಿದರು.

ನಗರ ಬಿಜೆಪಿ ಘಟಕದ ಅಧ್ಯಕ್ಷ ರಾಜು ಅಂಬಲಿ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ವಿಧಾನ ಪರಿಷತ್‌ ಸದಸ್ಯ ಹನಮಂತ ನಿರಾಣಿ, ಮಾಜಿ ವಿಧಾನ ಪರಷತ್‌ ಸದಸ್ಯ ಜಿ. ಎಸ್‌. ನ್ಯಾಮಗೌಡ, ನಾರಾಯಣಸಾ ಭಾಂಡಗೆ, ದೇವಲ ದೇಸಾಯಿ, ಮನೋಹರ ಶಿರೋಳ, ಬಸನಗೌಡ ಪಾಟೀಲ, ಸಿದ್ದಣ್ಣ ಪಾಟೀಲ, ಪ್ರಭು ಪೂಜಾರಿ, ಪುಂಡಲೀಕ ಪಾಲಭಾವಿ, ಪರಶುರಾಮ ಬಸವ್ವಗೋಳ, ಬಸವರಾಜ ತೆಗ್ಗಿ ಇದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.