ಬಂಡಿಗೆ ಹಿಂಬದಿಯಿಂದ ಬಸ್ ಢಿಕ್ಕಿ; ಮಹಿಳೆ, ಎತ್ತು ಸ್ಥಳದಲ್ಲೇ ಸಾವು
ಯುವಕ, ಮತ್ತೊಂದು ಎತ್ತಿಗೆ ಗಂಭೀರ ಗಾಯ
Team Udayavani, Apr 5, 2024, 11:14 PM IST
ಕುಳಗೇರಿ ಕ್ರಾಸ್:(ಬಾಗಲಕೋಟೆ) ಹೊಲಕ್ಕೆ ಹೋಗಿ ಬರುತ್ತಿದ್ದ ರೈತನ ಬಂಡಿಗೆ ಹಿಂಬದಿಯಿಂದ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಹಾಗೂ ಒಂದು ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಬಾದಾಮಿ ತಾಲೂಕಿನ ಚಿಮ್ಮನಕಟ್ಟಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರು ಚಿಮ್ಮನಕಟ್ಟಿ ಗ್ರಾಮದ ನಿವಾಸಿ ತಂಗೆವ್ವ ಹನಮಪ್ಪ ಗಂಜೆಪ್ಪನವರ(65) ಎಂದು ತಿಳಿದುಬಂದಿದ್ದು ಒಂದು ಎತ್ತು ಸಹ ಸ್ಥಳದಲ್ಲೇ ಮೃತಪಟ್ಟಿದೆ ಎತ್ತಿನ ಬಂಡಿ ಹೊಡೆಯುತ್ತಿದ್ದ 35 ವಯಸ್ಸಿನ ಯುವಕ ಹೇಮಂತ ಹನಮಂತ ಗಂಜೆಪ್ಪನವರಗೆ ತಿವ್ರ ಪೆಟ್ಟಾಗಿದ್ದು ಚಿಕಿತ್ಸೆಗಾಗಿ ತಾಲೂಕು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎತ್ತಿನ ಬಂಡಿ ಮುರಿದಿದ್ದು ಇನ್ನೊಂದು ಎತ್ತಿಗೆ ತಿವ್ರ ಪೆಟ್ಟಾಗಿದೆ.
ರೈತ ಹೇಮಂತ ತನ್ನ ಹೊಲದ ಕೆಲಸ ಮುಗಿಸಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ರಾಮದುರ್ಗ ಘಟಕದ ಬೆಳಗಾವಿ ಬಾದಾಮಿ ಬಸ್ ಎತ್ತಿನ ಚಕ್ಕಡಿಯ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಬಾದಾಮಿ ಪಿಎಸ್ಐ ವಿಟ್ಠಲ್ ನಾಯಕ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್