![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಎರಡು ದಿನ ಕಾದ ಮಕ್ಕಳು!
35 ಜನ ವಿದ್ಯಾರ್ಥಿಗಳು-ಪಾಲಕರಿಂದ ಗುರುವಾರ ಮಧ್ಯಾಹ್ನ ದಿಢೀರ್ ಪ್ರತಿಭಟನೆ
Team Udayavani, May 3, 2019, 1:15 PM IST
![bagalkote-3-tdy..](https://www.udayavani.com/wp-content/uploads/2019/05/bagalkote-3-tdy..-1-620x274.jpg)
ಬಾಗಲಕೋಟೆ: ಫಲಿತಾಂಶಕ್ಕಾಗಿ ನವನಗರದ ಆದರ್ಶ ವಿದ್ಯಾಲಯದ ಎದುರು ಕಾದು ಕುಳಿತಿದ್ದ ವಿದ್ಯಾರ್ಥಿಗಳು-ಪಾಲಕರು.
ಬಾಗಲಕೋಟೆ: ಪ್ರಸಕ್ತ ಎಸ್ಸೆಸ್ಸೆಲ್ಸಿ ಫಲಿತಾಂಶ ರಾಜ್ಯಾದ್ಯಂತ ಎರಡು ದಿನಗಳ ಹಿಂದೆಯೇ ಬಹಿರಂಗಗೊಂಡರೂ ಇಲ್ಲಿನ ಆದರ್ಶ ವಿದ್ಯಾಲಯದ 35 ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಎರಡು ದಿನ ಕಾಯಬೇಕಾದ ಪರಿಸ್ಥಿತಿ ಎದುರಾಗಿತ್ತು. ಎರಡು ದಿನಗಳಿಂದ ನವನಗರದ ಆದರ್ಶ ವಿದ್ಯಾಲಯಕ್ಕೆ ಅಲೆದಾಡಿದಾಗ ಶಿಕ್ಷಕರು, ತಾಂತ್ರಿಕ ಸಮಸ್ಯೆ ಆಗಿದೆ. ಸದ್ಯದಲ್ಲೇ ಫಲಿತಾಂಶ ಬರುತ್ತದೆ ಎಂದು ಹೇಳುತ್ತಲೇ ಇದ್ದರು. ಎರಡು ದಿನಗಳಾದರೂ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ 35 ಜನ ವಿದ್ಯಾರ್ಥಿಗಳು ಹಾಗೂ ಪಾಲಕರು ಗುರುವಾರ ಮಧ್ಯಾಹ್ನ ದಿಢೀರ್ ಪ್ರತಿಭಟನೆ ನಡೆಸಿದರು. ಇದೇ ವೇಳೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಶಿಕ್ಷಕರ ಎದುರು ಕಣ್ಣೀರು ಹಾಕಿದರು. ಈ ಘಟನೆ ನಡೆದ ಮೂರು ಗಂಟೆಯಲ್ಲಿ ಫಲಿತಾಂಶ ಕೂಡ ಬಂತು. ಬೆಳಗ್ಗೆ ಕಣ್ಣೀರು ಹಾಕಿ, ಪ್ರತಿಭಟನೆ ನಡೆಸಿದ್ದ ಮಕ್ಕಳು ಸಂಜೆಯ ಹೊತ್ತಿಗೆ ಖುಷಿಪಟ್ಟರು. ಆದರೆ, ಕೆಲವು ವಿದ್ಯಾರ್ಥಿಗಳು ನಾವು ನಿರೀಕ್ಷಿಸಿದ್ದ ಅಂಕ ಬಂದಿಲ್ಲ. ಹೀಗಾಗಿ ಮರು ಮೌಲ್ಯಮಾಪಕನಕ್ಕೆ ಹಾಕುತ್ತೇವೆ ಎಂದರು.
ರಾಜ್ಯದಲ್ಲಿ ಎರಡು ದಿನಗಳ ಹಿಂದೆಯೇ ಫಲಿತಾಂಶ ಬಂದಿದೆ. ಆದರೆ, ಆದರ್ಶ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ ನಮ್ಮ ಪುತ್ರಿಯ ಫಲಿತಾಂಶ ನೋಡಲು ಇಂಟರ್ನೆಟ್ಗೆ ಹೋದರೆ ಬರುತ್ತಿರಲಿಲ್ಲ. ಶಿಕ್ಷಕರು, ಅಧಿಕಾರಿಗಳ ಗಮನಕ್ಕೆ ತಂದಿದ್ದೇವು. ಪ್ರತಿಭಟನೆಯೂ ಮಾಡಿದ್ದೇವೆ. ಗುರುವಾರ ಸಂಜೆ ಫಲಿತಾಂಶ ಬಂದಿದೆ. ಆದರೆ, ನಮ್ಮ ಪುತ್ರಿ ಸೃಷ್ಟಿ ಪಾಟೀಲಗೆ ಶೇ.67.84 ಫಲಿತಾಂಶ ಬಂದಿದ್ದು, ಅದನ್ನು ಮರು ಮೌಲ್ಯಮಾಪನಕ್ಕೆ ಹಾಕಲು ಸಿದ್ಧತೆ ಮಾಡಿದ್ದೇವೆ.- ಶಿವನಗೌಡ ಪಾಟೀಲ,ವಿದ್ಯಾರ್ಥಿ ಸೃಷ್ಟಿ ಪಾಟೀಲ ತಂದೆ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.