ಕೋಟಿ ಹಣ ಸುರಿದರೂ ನಿಲ್ಲದ ಬಯಲು ಶೌಚ


Team Udayavani, Apr 30, 2019, 1:00 PM IST

bag-1

ಹುನಗುಂದ: ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿ ಬಯಲು ಬಹಿರ್ದೆಸೆ ಮುಕ್ತ ದೇಶವನ್ನಾಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಿವೆ. ಬೆಳಗಲ್ಲ ಗ್ರಾಪಂ ವ್ಯಾಪ್ತಿಯ ಬಿಸನಾಳ ಗ್ರಾಮದಲ್ಲಿ ಸಮುದಾಯ ಶೌಚಾಲಯ ನಿರ್ಮಿಸಿ ಒಂದು ವರ್ಷವಾದರೂ ಮೂಲಭೂತ ಸೌಕರ್ಯವಿಲ್ಲದೇ ಅನಾಥ ಸ್ಥಿತಿಯಲ್ಲಿವೆ.

ಹೌದು, ಆರೋಗ್ಯಕರ ಜೀವನ ಮತ್ತು ಉತ್ತಮ ವಾತವಾರಣ ಹೊಂದಲು ಮನೆಗೊಂದು ಶೌಚಾಲಯ ಇರಲಿ ಎಂಬ ಉದ್ದೇಶದಿಂದ ಸರ್ಕಾರಗಳು ಶೌಚಾಲಯ ನಿರ್ಮಾಣಕ್ಕಾಗಿ ಒತ್ತು ನೀಡುತ್ತಿವೆ. ಈ ಶೌಚಾಲಯ ನಿರ್ಮಾಣದ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳಿಗೆ ವಹಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ, ಪಟ್ಟಣ ಪಂಚಾಯತ, ಪುರಸಭೆ, ನಗರಸಭೆಗಳ ಅಧಿಕಾರಿಗಳು ಸರ್ಕಾರ ಕೊಟ್ಟ ಟಾರ್ಗೆಟ್ ಮುಗಿಸುವ ಸಲುವಾಗಿ ನಾಮಕವಾಸ್ತೆ ಶೌಚಾಲಯ ನಿರ್ಮಿಸಿಕೊಟ್ಟು ಕೈ ತೊಳೆದುಕೊಳ್ಳುತ್ತಿದ್ದಾರೆ.

ಶೌಚಾಲಯ ನಿರ್ಮಿಸುವುದಷ್ಟೇ ಆಗಬಾರದು. ಅದಕ್ಕೆ ಬೇಕಾದ ಸೆಪ್ಟಿಕ್‌ ಟ್ಯಾಂಕ್‌, ನೀರಿನ ವ್ಯವಸ್ಥೆ, ವಿದ್ಯುತ್‌ ಸಂಪರ್ಕ ಮೊದಲಾದ ಮೂಲಭೂತ ಸೌಲಭ್ಯ ಒದಗಿಸುವುದು ಮುಖ್ಯವಾಗಿದೆ. ಅವುಗಳ ಬಳಕೆ ಕುರಿತು ಜನರಲ್ಲಿ ತಿಳಿವಳಿಕೆ ಮೂಡಿಸಬೇಕು.

ಮುಳ್ಳು ಕಂಟಿ ಮತ್ತು ತಿಪ್ಪಿಗುಂಡಿಯಲ್ಲಿ ಮರೆಯಾದ ಸಮುದಾಯ ಶೌಚಾಲಯಗಳು: ಗ್ರಾಪಂ 14 ನೆಯ ಹಣಕಾಸು ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ 20 ಸಮುದಾಯ ಶೌಚಾಲಯ ನಿರ್ಮಿಸಲಾಗಿದೆ. ಸರಿಯಾದ ನಿರ್ವಹಣೆ ಇಲ್ಲದಿರುವುದರಿಂದ ಅವುಗಳ ಸುತ್ತ ಮುಳ್ಳು ಕಂಟಿ ಬೆಳೆದಿವೆ. ಶೌಚಾಲಯದ ಮುಂದೆ ತಿಪ್ಪೆಗುಂಡಿ ಹಾಕಲಾಗಿದೆ. ಇದರ

ಮಧ್ಯೆದಲ್ಲಿ ಶೌಚಾಲಯ ಮರೆಯಾಗಿ ಹೋಗಿವೆ. ಇದನ್ನು ನೋಡಿದರೇ ಜನರ ಮರ್ಯಾದೆ ಉಳಿಸುವ ಸಮುದಾಯ ಶೌಚಾಲಯವೋ ಅಥವಾ ತಿಪ್ಪಿಗುಂಡಿಯ ಸ್ಥಳವೂ ಎನ್ನುವ ಮನೋಭಾವನೆ ಗ್ರಾಮಸ್ಥರಲ್ಲ್ಲಿ ಕಾಡುತ್ತಿದೆ.

ಶೌಚಾಲಯ ನಿರ್ಮಾಣ: ಬಯಲು ಶೌಚ ತಪ್ಪಿಸಲು ಸರ್ಕಾರ ತಮ್ಮ ಸ್ವಂತ ಜಾಗೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಎಸ್‌ಸಿ, ಎಸ್‌ಟಿ ಜನಾಂಗದವರಿಗೆ 15 ಸಾವಿರ, ಇತರೆ ಜನಾಂಗಕ್ಕೆ 12 ಸಾವಿರ ಸಹಾಯ ಧನ ನೀಡಿದೆ. ಇನ್ನು ಜಾಗೆ ಇಲ್ಲದೇ ಇರುವ ಜನರಿಗೆ ಗ್ರಾಮ ಪಂಚಾಯತಗಳೇ ಎಷ್ಟು ಜನರಿಗೆ ಸ್ವಂತ ಜಾಗವಿಲ್ಲ ಎಂಬುದನ್ನು ತಿಳಿದುಕೊಂಡು ಅಂತಹ ಜನರಿಗೆ ಸಮುದಾಯ ಶೌಚಾಲಯ ನಿರ್ಮಾಣ ಮಾಡಬೇಕು ಎಂಬ ನಿಯಮವಿದೆ.

ಸರ್ಕಾರದ ವಿವಿಧ ಯೋಜನೆ ಅನುದಾನದಲ್ಲಿ ಸಮುದಾಯ ಶೌಚಾಲಯ ನಿರ್ಮಿಸಲು ಹಣಕಾಸಿನ ನೇರವು ನೀಡಿದರೂ ಬೇಕಾಬಿಟ್ಟಿಯಾಗಿ ಶೌಚಾಲಯ ಕಟ್ಟಿrಸಿ ಅದರ ಅನುದಾನ ತೆಗೆಯುವುದರಲ್ಲಿ ಜಾಣರಾಗಿದ್ದಾರೆ. ಅದಕ್ಕೆ ಬೇಕಾದ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಮೂಕರಾಗಿದ್ದಾರೆ. ಸರ್ಕಾರ ಕೊಡುವ ಸಹಾಯ ಧನದ ಆಸೆಗಾಗಿ ಶೌಚ ನಿರ್ಮಿಸಿ ಅದನ್ನು ಬಳಕೆ ಮಾಡದೇ ಅದರಲ್ಲಿ ಕಟ್ಟಿಗೆ ಕುಳ್ಳು ಇಟ್ಟು ಮತ್ತೇ ಬಯಲು ಶೌಚಕ್ಕೆ ಹೋಗುವುದು ಮಾತ್ರ ಗ್ರಾಮದಲ್ಲಿ ತಪ್ಪಿಲ್ಲ.

ಬಿಸನಾಳದಲ್ಲಿ ಸಮುದಾಯ ಶೌಚಾಲಯ ಕಟ್ಟಿಸಿ ಒಂದು ವರ್ಷವಾಗಿದೆ. ಇಲ್ಲಿವರೆಗೆ ಅವುಗಳಿಗೆ ನೀರಿನ ವ್ಯವಸ್ಥೆಯಿಲ್ಲ. ಕರೆಂಟ್ ಸಹಿತ ಹಾಕಿಲ್ಲ. ಗ್ರಾಮದ ಜನರಿಗೆ ರಸ್ತೆ, ಹೊಲಗಳೇ ಶೌಚಾಲಯಗಳಾಗಿವೆ. ಈ ಶೌಚಾಲಯಗಳಿಗೆ ಮೂಲಭೂತ ಸೌಲಭ್ಯ ಒದಗಿಸಬೇಕು.
•ಮಹಾಂತಪ್ಪ ವಾಲೀಕಾರ, ಬಿಸನಾಳ ಗ್ರಾಮಸ್ಥ.

ಬೆಳಗಲ್ಲ ಗ್ರಾ.ಪಂ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಸಮುದಾಯ ಶೌಚಾಲಯ ಮೂಲಭೂತ ವ್ಯವಸ್ಥೆ ಬಗ್ಗೆ ನಾನು ಅಲ್ಲಿನ ಪಿಡಿಒ ಜೊತೆ ಮಾತನಾಡುತ್ತೇನೆ. ಸ್ವತಃ ನಾನೇ ಅಲ್ಲಿಗೆ ಹೋಗಿ ಅದಕ್ಕೆ ಬೇಕಾಗಿರುವ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡುತ್ತೇನೆ.
•ಪುಷ್ಪಾ ಕಮ್ಮಾರ,ಹುನಗುಂದ ತಾಪಂ ಇಒ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.