ಬೈಕಿನಿಂದ ನದಿಗೆ ಬಿದ್ದು ತಂದೆ, ಮಗಳು ಸಾವು
Team Udayavani, Jul 5, 2018, 7:05 AM IST
ಗಲಗಲಿ (ಬಾಗಲಕೋಟೆ): ಬೈಕ್ ಮೇಲೆ ತೆರಳುವಾಗ ಆಯತಪ್ಪಿ ಕೃಷ್ಣಾನದಿಗೆ ಬಿದ್ದ ಮಗಳನ್ನು ರಕ್ಷಿಸಲು ಹೋದ ತಂದೆ, ಮಗಳು ಇಬ್ಬರೂ ಮೃತಪಟ್ಟ ಘಟನೆ ಬೀಳಗಿ ತಾಲೂಕಿನ ಗಲಗಲಿಯ ಕೆಳ ಸೇತುವೆ ಬಳಿ ಬುಧವಾರ ನಡೆದಿದೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿ ಗ್ರಾಮದ ದಸ್ತಗೀರಸಾಬ ಚಾಂದಸಾಬ ಬೂದಿಹಾಳ (32), ಪುತ್ರಿ ಅನ್ನಮ್ಮು (3) ಮೃತರು.
ಇವರೊಂದಿಗೆ ದಸ್ತಗೀರಸಾಬ ತಂದೆ ಚಾಂದಸಾಬ ಕೂಡ ಬೈಕ್ನಲ್ಲಿದ್ದು, ಪಾರಾಗಿದ್ದಾರೆ.
ದಸ್ತಗೀರಸಾಬ ಪುತ್ರಿಯನ್ನು ಬೈಕ್ ಮುಂಭಾಗದ ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿದ್ದರು. ತಂದೆ ಚಾಂದಸಾಬ ಹಿಂದೆ ಕುಳಿತಿದ್ದರು. ತಡೆಗೋಡೆ ಇಲ್ಲದ ಚಿಕ್ಕ ಸೇತುವೆ ಮೇಲೆ ಹಾದು ಹೋಗುತ್ತಿದ್ದಾಗ ಪುತ್ರಿ ಅನ್ನಮ್ಮು ಗಾಳಿಯ ರಭಸ ಮತ್ತು ಹದಗೆಟ್ಟಿರುವ ಸೇತುವೆಯ ರಸ್ತೆಯಿಂದ ಪುಟಿದು ಬೀಳುತ್ತಿದ್ದಳು. ಆಗ ಮಗಳನ್ನು ಹಿಡಿದುಕೊಳ್ಳಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಪಕ್ಕಕ್ಕೆ ಬಿದ್ದಿದ್ದಾರೆ. ಆಗ ಪುತ್ರಿ ನದಿಯಲ್ಲಿ ಬಿದ್ದಿದ್ದು, ಆಕೆಯನ್ನು ರಕ್ಷಿಸಲು ದಸ್ತಗೀರಸಾಬ ಕೂಡ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೀಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!