ಜಾತ್ರೆ ಹಿಂದೂ ಧರ್ಮ-ಸಂಸ್ಕಾರದ ಪ್ರತೀಕ

ನಮ್ಮಂತ ಪ್ರಾಮಾಣಿಕ ರಾಜಕಾರಣಿಗಳಿಗೆ ಸರ್ಕಾರದಲ್ಲಿ ಬಾಗಿಲು ತೆರೆದಿಲ್ಲ.

Team Udayavani, May 18, 2022, 4:45 PM IST

ಜಾತ್ರೆ ಹಿಂದೂ ಧರ್ಮ-ಸಂಸ್ಕಾರದ ಪ್ರತೀಕ

ಬಾಗಲಕೋಟೆ: ಧರ್ಮ, ಸಂಸ್ಕೃತಿ, ಮಾನವೀಯತೆ ಉಳಿಯಬೇಕಾದರೆ ದೇಗುಲಗಳು ಬೇಕು. ಹಿಂದೂ ಧರ್ಮದ ಶ್ರೇಯೋಭಿವೃದ್ಧಿಗೆ ಸಾವಿರಾರು ಮಹಾತ್ಮರು ಶ್ರಮಿಸಿದ್ದಾರೆ. ಆದ್ದರಿಂದ ಜಾತ್ರೆಗಳು ಹಿಂದೂ ಧರ್ಮದ ಮತ್ತು ಸಂಸ್ಕಾರದ ಪ್ರತೀಕವಾಗಿವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಬೇವೂರ ಆದಿಶಕ್ತಿ ಜಗನ್ಮಾತೆ ದುಗ್ಗಮ್ಮದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಗ್ರಾಮದ ಸಮಸ್ತ ದೈವ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಟ್ರಾಕ್ಟರ್‌ ಜಗ್ಗುವ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದು ಹಿಂದೂ ದೇಗುಲಗಳ ಜೀರ್ಣೋದ್ಧಾರ ಕೆಲಸ ನಡೆಯಬೇಕಾಗಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದೂ ದೇಗುಲಗಳ ರಕ್ಷಣೆ ಮಾಡುವಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇವೆ. ಸುಮಾರು 3500 ದೇಗುಲಗಳ ಜೀರ್ಣೋದ್ಧಾರ ಕೆಲಸ ಮಾಡಿದ್ದು ಹೆಮ್ಮೆಯ ಕೆಲಸ. ಎಲ್ಲ ಸಮುದಾಯಕ್ಕೂ ನ್ಯಾಯ ಸಿಗುವಂತೆ ಸರ್ಕಾರ ಪ್ರಾಮಾಣಿಕ ಕೆಲಸ ಮಾಡುತ್ತಿದ್ದು ಅದರಲ್ಲೂ ದೇಶದ ಭದ್ರತೆ ಕಾಪಾಡುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ನಮ್ಮಂತ ಪ್ರಾಮಾಣಿಕ ರಾಜಕಾರಣಿಗಳಿಗೆ ಸರ್ಕಾರದಲ್ಲಿ ಬಾಗಿಲು ತೆರೆದಿಲ್ಲ. ಚರಂತಿಮಠರು ನಾವು ಒಂದೇ ವೇದಿಕೆಯಲ್ಲಿ ಸಾಗುತ್ತಿದ್ದೇವೆ. ನೇರವಾಗಿ ಮಾತನಾಡುವುದೇ ನಮ್ಮ ಕರ್ತವ್ಯ, ನಾನು ಭ್ರಷ್ಟನಲ್ಲ, ಚರಂತಿಮಠರು ಭ್ರಷ್ಟರಲ್ಲ. ಹೀಗಾಗಿ ನಾವು ಅವಕಾಶಗಳಿಂದ ವಂಚಿತರಾಗಿ ಶಾಸಕರಾಗಿ ಮುಂದುವರಿಯುತ್ತಿದ್ದೇವೆ ಎಂದರು.

ಶಾಸಕ ಡಾ|ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದೂ ದೇಗುಲಗಳನ್ನು ರಕ್ಷಣೆ ಮಾಡಿ ಜೀರ್ಣೋದ್ಧಾರ ಮಾಡಿದರೆ ಸೋನಿಯಾಗಾಂಧಿ ಮತ್ತು ರಾಹುಲಗಾಂಧಿಗೆ ಏಕೆ ತೊಂದರೆಯಾಗುತ್ತಿದೆ. ಹಿಂದೂ ದೇಗುಲಗಳನ್ನು ರಕ್ಷಣೆ ಮಾಡುವುದು ಮೋದಿ ಸರ್ಕಾರದ ಧ್ಯೇಯ, ಈ ನಿಟ್ಟಿನಲ್ಲಿ ಸರ್ಕಾರ ಸಾಗುತ್ತಿದೆ. ಕೋವಿಡ್‌ ಮಹಾಮಾರಿಯಿಂದ ಕಷ್ಟ ಅನುಭವಿಸಿ ಮತ್ತೇ ದೇಗುಲಗಳ ಪೂಜೆ ಸಾಗುತ್ತಿವೆ ಎಂದು ಹೇಳಿದರು.

ಶ್ರೀ ಗ್ಯಾನಪ್ಪಜ್ಜನವರು ಸಾನಿಧ್ಯ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷ ತುಕಾರಾಮ ಮಾಗಿ, ಮುಖಂಡ ಮುತ್ತು ಬೈರಮಟ್ಟಿ, ಪ್ರಭುಸ್ವಾಮಿ ಸರಗಣಾಚಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಾಜು ಮುದೇನೂರ, ಸುರೇಶ ಕೊಣ್ಣೂರ, ನಿಂಗಪ್ಪ ಮಾಗನೂರ, ಎಂ ಎಸ್‌. ವೈಜಾಪುರ, ಪಿ.ಎಸ್‌. ಗುನ್ನಿ, ಉಮೇಶ ಜುಮನಾಳ, ಕಲ್ಲಪ್ಪ ಭಗವತಿ, ಶೇಖಪ್ಪ ಹೆರಕಲ್‌, ಜಿ.ವೈ. ಹೆರಕಲ್‌, ಕೃಷ್ಣಾ ಲಮಾಣಿ, ವೆಂಕನಗೌಡ ಮಾಗನೂರ, ಬಸವರಾಜ ಪಾಟೀಲ ಉಪಸ್ಥಿತರಿದ್ದರು.

ಕಳೆದ ಮೂರು ವರ್ಷಗಳಲ್ಲಿ ಪ್ರಾಮಾಣಿಕವಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಗ್ರಾಮೀಣ ರಸ್ತೆ, ಭಗವತಿ, ಶಿರೂರ ಗ್ರಾಮಗಳ ನೀರಾವರಿ ಯೋಜನೆಗಳ ಮಂಜೂರಾತಿಗೆ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ಜನರಲ್‌ ಜಿ.ಜಿ. ಬೇವೂರ ಸ್ಮಾರಕ ಭವನ, ದ್ವಾರಬಾಗಿಲು
ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
ಡಾ| ವೀರಣ್ಣ ಚರಂತಿಮಠ, ಶಾಸಕ

ಭಾರತೀಯ ಸಂಸ್ಕೃತಿ ಅವಸಾನಕ್ಕೆ ಅವಕಾಶ ಕೊಡದೇ ಎಲ್ಲರೂ ಉಳಿಸಲು ಶ್ರಮಿಸಬೇಕಿದೆ. ಇಂದು ಹಿಂದೂ ಸಂಸ್ಕೃತಿ ಉಳಿವಿಗೆ ಉತ್ತಮ ರಾಜಕಾರಣದ ಅವಶ್ಯಕತೆ ಇದೆ. ತಲೆ ಹಿಡಿಯುವ ರಾಜಕಾರಣಿಗಳು ಬೇಕಾಗಿಲ್ಲ. ದೇಶ ಮತ್ತು ಧರ್ಮವನ್ನು ಕಾಪಾಡುವ ವ್ಯಕ್ತಿಗಳು ನಮಗೆ ಬೇಕು. ಅಂತಹವರಿಗೆ ಮಾತ್ರ ಅವಕಾಶ ದೊರೆಯಬೇಕು.
ಬಸನಗೌಡ ಪಾಟೀಲ ಯತ್ನಾಳ, ಶಾಸಕ

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.