ಮತ್ತೆ ಐತಿಹಾಸಿಕ ಐಹೊಳೆ ದೇವಾಲಯ, ಚಿತ್ತರಗಿ ಸಂಸ್ಥಾನ ಮಠ ಜಲಾವೃತ
Team Udayavani, Oct 23, 2019, 10:51 AM IST
ಬಾಗಲಕೋಟೆ: ಕರ್ನಾಟಕದಾದ್ಯಂತ ಮಳೆಯ ರುದ್ರ ನರ್ತನ ಮುಂದುವರಿದಿದ್ದು .ಮಲಪ್ರಭೆ ನದಿಯ ಪ್ರತಾಪಕ್ಕೆ ಐತಿಹಾಸಿಕ ಪ್ರವಾಸಿ ತಾಣ ಐಹೊಳೆ ಗ್ರಾಮದಲ್ಲಿರುವ ಮಾರುತೇಶ್ವರ ದೇವಾಲಯ,ಅಳ್ಳಿಬಸಪ್ಪ ದೇವಾಲಯ,ಕೊರವರ್ ದೇವಾಲಯ ( ವೆನಿಯರ್), ಹುಚ್ಚಪ್ಪಯ್ಯ ದೇವಾಸ್ಥಾನ, ಗಳಗನಾಥ ದೇವಾಲಯಗಳು ಮತ್ತೆ ಜಲಾವೃತಗೊಂಡಿವೆ.
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಾಗೂ ಮಲಪ್ರಭಾ ನದಿಯ ಪ್ರವಾಹದ ನೀರು ಹೆಚ್ಚಳವಾಗಿರುವುದರಿಂದ ಜನರು ಕಂಗಾಲಾಗಿದ್ದಾರೆ.
ಚಿತ್ತರಗಿ ಮಠ ಜಲಾವೃತ:
ಇತಿಹಾಸ ಪ್ರಸಿದ್ಧ ಸುಕ್ಷೇತ್ರ ವಿಜಯ ಮಹಾಂತೇಶ್ವರ ಸಂಸ್ಥಾನಮಠ (ಮೂಲಮಠ) ವಿರುವ ಚಿತ್ತರಗಿ ಗ್ರಾಮದಲ್ಲಿ ಮತ್ತೊಮ್ಮೆ ಮಲಪ್ರಭಾ ನದಿಯ ಭೋರ್ಗರೆತ ಪ್ರವಾಹ ಬಂದ ಹಿನ್ನೆಲೆಯಲ್ಲಿ ವಿಜಯ ಮಹಾಂತೇಶ್ವರ ಮೂಲಮಠ ಜಲಾವೃತಗೊಂಡಿದೆ. ವಿಜಯಮಹಾಂತೇಶ ಶ್ರೀಗಳು ಮೂಲತಃ ಚಿತ್ತರಗಿಯವರಾಗಿದ್ದು ಇಳಕಲ್ ಮಠದ ಸ್ಥಾಪಕರೆಂದು ಪ್ರತೀತಿ ಇದೆ, ಚಿತ್ತರಗಿ ವಿಜಯ ಮಹಾಂತೇಶ ಮಠವು ನಾಡಿನ ಪ್ರತಿಷ್ಟಿತ ಮಠಗಳಲ್ಲಿ ಒಂದು, ನಾಡಿನುದ್ದಕ್ಕೂ 63 ಶಾಖಾಮಠಗಳನ್ನು ಹೊಂದಿದೆ ಮತ್ತು ನಾಡಿನುದ್ದಕ್ಕೂ ಅಪಾರ ಭಕ್ತ ಸಮೂಹ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?