ಮುಖಂಡರ ಭರವಸೆ: ಸತ್ಯಾಗ್ರಹ ಅಂತ್ಯ
Team Udayavani, May 17, 2019, 1:33 PM IST
ಗುಳೇದಗುಡ್ಡ: ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ನೇಕಾರ ಮುಖಂಡ ಶ್ರೀಕಾಂತ ಹುನಗುಂದ ಪಟ್ಟಣದ ಸಾರ್ವಜನಿಕ ಕಟ್ಟೆಯ ಮೇಲೆ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಅಂತ್ಯಗೊಂಡಿದೆ.
ಜೆಡಿಎಸ್ ನೇಕಾರ ಘಟಕದ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಶೇಖಾ ಅವರು ಶ್ರೀಕಾಂತ ಹುನಗುಂದ ಅವರ ಮನವೊಲಿಸಿದರು. ಚಂದ್ರಕಾಂತ ಶೇಖಾ ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೃಷ್ಣಪ್ಪ ಬೆಂಗಳೂರಿನಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಅವಮಾನಿಸಿದ್ದು ಉದ್ದೇಶಪೂರ್ವಕವೇನಲ್ಲ. ಕೆಲಸದ ಒತ್ತಡದಲ್ಲಿ ಅಚಾತುರ್ಯ ನಡೆದಿದೆ.ಇಂತಹ ಘಟನೆ ಮರುಕಳಿಸದಂತೆ ನಾವೂ ಮುಖ್ಯಮಂತ್ರಿಗಳಿಗೆ ತಿಳಿಸುತ್ತೇವೆ. 18ರಂದು ನಾನು ಹಾಗೂ ಜಿಲ್ಲಾಧ್ಯಕ್ಷ ನವಲಿ ಹಿರೇಮಠ ಅವರು ಸೇರಿ ಶ್ರೀಕಾಂತ ಹುನಗುಂದ ಅವರನ್ನು ಬೆಂಗಳೂರಿಗೆ ಕರೆದೊಯ್ದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಿ ಈ ಭಾಗದ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದರು.
ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಶ್ರೀಕಾಂತ ಹುನಗುಂದ ಮಾತನಾಡಿ, ಪಕ್ಷದ ಹಿರಿಯ ಮುಖಂಡರು ಭರವಸೆ ನೀಡಿದ್ದಕ್ಕೆ ನಾನು ಒಪ್ಪಿಕೊಂಡು ಉಪವಾಸ ಸತ್ಯಾಗ್ರಹ ಹಿಂದಕ್ಕೆ ಪಡೆದಿದ್ದೇನೆ. ಭರವಸೆ ಈಡೇರದಿದ್ದರೆ ಅಂದೇ ವಿಧಾನಸೌಧದ ಎದುರಿಗೆ ಉಪವಾಸ ಸತ್ಯಾಗ್ರಹ ಮುಂದುವರಿಸುವುದಾಗಿ ಹೇಳಿದರು. ಹುಲಮನಿ ಶಂಕ್ರಪ್ಪ, ಸೋಮಶೇಖರರೆಡ್ಡಿ ಸೋಮನಾಳ, ಅನ್ವರಖಾನ ಪಠಾಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್