ನೂತನ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ
•ನಾನಾ ಕಾರಣಗಳಿಂದ ಮುಚ್ಚಿರುವ ಅಂಗನವಾಡಿ ಕಟ್ಟಡ •ಇಕ್ಕಟ್ಟಾದ ಕೊಠಡಿಯಲ್ಲೇ ಮಕ್ಕಳು
Team Udayavani, Jun 14, 2019, 11:14 AM IST
ತೇರದಾಳ: ಸಮೀಪದ ಹಳಿಂಗಳಿ ಗ್ರಾಮದ ಲೋಕನ್ನವರ ವಸ್ತಿ ತೋಟದಲ್ಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಭಾಗ್ಯವಿಲ್ಲದೇ ಬಾಗಿಲು ಹಾಕಲಾಗಿದೆ.
ತೇರದಾಳ: ಸಮೀಪದ ಹಳಿಂಗಳಿ ಗ್ರಾಮದ ಲೋಕನ್ನವರ ವಸ್ತಿ ತೋಟದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ನೂತನ ಕಟ್ಟಡ ನಿರ್ಮಾಣವಾಗಿದ್ದರೂ ಉದ್ಘಾಟನೆ ಭಾಗ್ಯ ಇಲ್ಲದಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿದೆ.
ಸರಕಾರದ ಲಕ್ಷಾಂತರ ರೂ.ಗಳ ಅನುದಾನದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದ್ದರೂ ನಾನಾ ಕಾರಣಗಳಿಂದ ಉದ್ಘಾಟನೆ ಭಾಗ್ಯವಿಲ್ಲದೇ ಬಾಗಿಲು ಮುಚ್ಚಿದೆ. ಇದರಿಂದ ಸಣ್ಣಪುಟ್ಟ ಮಕ್ಕಳು ಇಕ್ಕಟ್ಟಾದ ಸ್ಥಳಾವಕಾಶ ಹೊಂದಿದ ಸಮೀಪದ ದೇವಸ್ಥಾನವೊಂದರ ಕೊಠಡಿಯಲ್ಲೇ ಹಾಜರಾಗಬೇಕಾದ ದುಃಸ್ಥಿತಿ ಬಂದಿದೆ. ಮಕ್ಕಳ ಪಾಠ-ಊಟೋಪಚಾರಗಳು ಇಲ್ಲಿಯೇ ನಡೆದಿವೆ. ಇಂತಹ ಚಿಕ್ಕ ಕೊಠಡಿಯಲ್ಲೇ ಬಾಣಂತಿಯರು, ಗರ್ಭಿಣಿಯರು ಬಂದು ಊಟ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಪ್ರಸಕ್ತ ವರ್ಷದಲ್ಲಿ ಅಂದಾಜು ಹತ್ತು ಮಕ್ಕಳಿದ್ದು, ನಾಲ್ಕು ಜನ ಗರ್ಭಿಣಿಯರು, ಓರ್ವ ಬಾಣಂತಿ ಇದ್ದಾರೆ. ಹೀಗಾಗಿ ಅತಿ ಚಿಕ್ಕ ಸಂಖ್ಯೆಯನ್ನು ಹೊಂದಿದ ಅಂಗನವಾಡಿ ಕೇಂದ್ರದ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂಬುದು ಅನೇಕರ ಅಭಿಪ್ರಾಯವಾಗಿದೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈವರೆಗೂ ಅಂಗನವಾಡಿಯ ನೂತನ ಕಟ್ಟಡ ಉದ್ಘಾಟನೆ ಮಾಡಲಾಗಿಲ್ಲ. ಈಗಾಗಲೇ ಸ್ಥಳಿಯರೊಂದಿಗೆ ಮಾತನಾಡಿದ್ದೇವೆ. ಬರುವ ವಾರದಲ್ಲಿ ಕಟ್ಟಡ ಉದ್ಘಾಟನೆಯಾಗಲಿದೆ ಎನ್ನುತ್ತಾರೆ ಅಂಗನವಾಡಿ ಮೇಲ್ವಿಚಾರಕಿ ಉಮಾ ಹಡಗಲಿ.
ಅಂಗನವಾಡಿಗೆ ಮೇ 31ರವರೆಗೆ ರಜೆ ಇದ್ದು, ಜೂ.1ರಂದು ಕೇಂದ್ರವು ಪುನರ್ ಆರಂಭಗೊಂಡಿದೆ. ಈ ಭಾಗದಲ್ಲಿ ದೇವಿ ಜಾತ್ರೆ ಇರುವುದರಿಂದ ಹಿರಿಯರು ಖಾಲಿ ಇರಲಿಲ್ಲ. ಈಗಾಗಲೇ ಮೇಲಧಿಕಾರಿಗಳು ಸೂಚಿಸಿದಂತೆ ಹಿರಿಯರ ಸಮ್ಮುಖದಲ್ಲಿ ಸದ್ಯದಲ್ಲೇ ನೂತನ ಕಟ್ಟಡ ಉದ್ಘಾಟಿಸುವ ಕಾರ್ಯ ನಡೆಯಲಿದೆ ಎನ್ನುತ್ತಾರೆ ಹಳಿಂಗಳಿಯ ಅಂಗನವಾಡಿ ಕಾರ್ಯಕರ್ತೆ ಎಸ್.ಎಂ. ಮದಲಮಟ್ಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್