ಕೋವಿಡ್ ಹೊಸ ಪ್ರಭೇದದ ಭೀತಿ: ಬ್ರಿಟನ್ ನಿಂದ ಜಮಖಂಡಿಗೆ ಬಂದ ಮಹಿಳೆಯ ಆರೋಗ್ಯ ತಪಾಸಣೆ
Team Udayavani, Dec 22, 2020, 7:29 PM IST
ಬಾಗಲಕೋಟೆ: ಬ್ರಿಟನ್ ನಲ್ಲಿ ರೂಪಾಂತರ ಹೊಂದಿದ ನೂತನ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವುದು ಪತ್ತೆಯಾದ ಬೆನ್ನಲ್ಲೇ, ಅಲ್ಲಿಂದ ಜಿಲ್ಲೆಗೆ ಆಗಮಿಸಿದ್ದ ಮಹಿಳೆಯ ಬಗ್ಗೆ ಜಿಲ್ಲಾಡಳಿತ, ತೀವ್ರ ತಪಾಸಣೆ ನಡೆಸುತ್ತಿದ್ದು, ಆ ಮಹಿಳೆಯ ಸಂಪರ್ಕಕ್ಕೆ ಬಂದವರ ಗಂಟಲು ಮಾದರಿ ತಪಾಸಣೆಗೆ ಕಳುಹಿಸಿದೆ.
ಪತಿ, ಇಬ್ಬರು ಮಕ್ಕಳೊಂದಿಗೆ ಬ್ರಿಟನ್ನಲ್ಲಿ ನೆಲೆಸಿರುವ ಜಮಖಂಡಿ ತಾಲೂಕು ತೊದಲಬಾಗಿ (ತವರು ಮನೆ ಬೆಳಗಾವಿ)ಯ 35 ವರ್ಷದ ಮಹಿಳೆ, ಡಿ. 14ರಂದು ಬೆಂಗಳೂರಿಗೆ ಬಂದಿದ್ದರು. ಅಲ್ಲಿಂದ ತೊದಲಬಾಗಿಗೆ ಆಗಮಿಸಿ, ಅತ್ತೆ-ಮಾವನ ಜತೆಗೆ ನಾಲ್ಕೈದು ದಿನಗಳ ಕಾಲ ತಂಗಿದ್ದರು. ಬಳಿಕ ತಮ್ಮ ತವರು ಮನೆ, ಬೆಳಗಾವಿಗೆ ತೆರಳಿದ್ದು, ಈ ಕುರಿತು ಜಿಲ್ಲಾಡಳಿತ ಖಚಿತ ಮಾಹಿತಿ ದೊರೆತಿದೆ.
ಬೆಳಗಾವಿಯಲ್ಲಿ ಮಹಿಳೆಯ ಗಂಟಲು ಮಾದರಿ ತಪಾಸಣೆ ಮಾಡಿದ್ದು, ಇತ್ತ ತೊದಲಬಾಗಿಯಲ್ಲಿ ಆ ಮಹಿಳೆಯ ಮಾವ ಹಾಗೂ ಅತ್ತೆಯ ಗಂಟಲು ಮಾದರಿಯನ್ನೂ ಪಡೆದು ತಪಾಸಣೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ: ಮಾರ್ಚ್-2021ರಲ್ಲಿ SSLC ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲ: ಸುರೇಶ್ ಕುಮಾರ್
ಅಲ್ಲದೇ ಆರೋಗ್ಯ ಇಲಾಖೆಯ ಸಿಬ್ಬಂದಿ, ತೊದಲಬಾಗಿ ಗ್ರಾಮಕ್ಕೆ ತೆರಳಿ, ಆ ಮಹಿಳೆ ತಂಗಿದ್ದ ಮನೆಯವರ ವಿವರ, ಸಂಪರ್ಕಕ್ಕೆ ಬಂದವರ ವಿವರ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬ್ರಿಟನ್ನಿಂದ ಮಹಿಳೆಯೊಬ್ಬರು ಬೆಂಗಳೂರಿಗೆ ಬಂದು ಅಲ್ಲಿಂದ ಜಿಲ್ಲೆಯ ಜಮಖಮಡಿಗೆ ಆಗಮಿಸಿದ್ದಾರೆ. ಆನಂತರ ಬೆಳಗಾವಿಗೆ ತೆರಳಿ, ಅಲ್ಲಿಯೇ ಇದ್ದ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ದೊರೆತಿದೆ. ಮುನ್ನೆಚ್ಚರಿಕೆ ದೃಷ್ಠಿಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ: ಮತದಾನದ ವೇಳೆ ಅಭ್ಯರ್ಥಿಗಳ ಬೆಂಬಲಿಗರ ಹೊಡೆದಾಟ: ನಾಲ್ವರು ಆಸ್ಪತ್ರೆಗೆ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ