ಕೃಷಿ ಸಂಸ್ಕೃತಿಯಿಂದ ಜಾನಪದ ಉಗಮ; ಎಸ್.ಬಾಲಾಜಿ
ಕಲಾವಿದರು ಸಂಕಷ್ಟದಲ್ಲಿ ಬದುಕುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಕಲಾವಿದರು ಜೀವ ಬಿಟ್ಟರು.
Team Udayavani, Mar 30, 2022, 3:50 PM IST
ಬಾಗಲಕೋಟೆ: ಕೃಷಿ ಸಂಸ್ಕೃತಿಯಿಂದ ಜಾನಪದ ಉಗಮವಾಗಿದ್ದು ಜಾನಪದ ಕಲಾವಿದರ ಬಗ್ಗೆ ಸರಕಾರ ನಿರ್ಲಕ್ಷ ಭಾವನೆ ತೋರುತ್ತಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ|ಎಸ್.ಬಾಲಾಜಿ ಆರೋಪಿಸಿದರು.
ತಾಲೂಕಿನ ಅನಗವಾಡಿ ಬಿ.ಎನ್. ಖೋತ ಇಂಟರ್ನ್ಯಾಶನಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ತಾಲೂಕ ಘಟಕ ಉದ್ಘಾಟನೆ, ಪದಗ್ರಹಣ, ಕೃತಿ ಬಿಡುಗಡೆ ಮತ್ತು ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಜಾನಪದ ಪರಿಷತ್ ಕಲಾವಿದರ ದಾಖಲೀಕರಣ, ಕಲೆ ಮತ್ತು ಕಲಾವಿದರ ಸಂರಕ್ಷಣೆ ಮೂಲ ಉದ್ದೇಶವಾಗಿದೆ ಎಂದು ಜಾನಪದ ಆಯಾಮಗಳ ಉಳಿವಿಗಾಗಿ ನಾಡಿನಾದ್ಯಂತ ಜಾನಪದ ಪರಿಷತ್ ಸುಮಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಪಕ್ಕದ ರಾಜ್ಯಗಳಲ್ಲಿ ಸರಕಾರಗಳು ಕಲಾವಿದರಿಗೆ 10 ಸಾವಿರ ರೂ. ವರೆಗೆ ಮಾಸಾಶನ ನೀಡುತ್ತಿದ್ದಾರೆ. ನಮ್ಮ ರಾಜ್ಯ ಸರಕಾರ 2 ಸಾವಿರ ಮಾತ್ರ ನೀಡುತ್ತಿದ್ದು, ಅದನ್ನು 5 ಸಾವಿರವರೆಗೆ ವಿಸ್ತರಿಸಬೇಕೆಂದು ಆಗ್ರಹಿಸುತ್ತದೆ.
ಕಲಾವಿದರು ಸಂಕಷ್ಟದಲ್ಲಿ ಬದುಕುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಕಲಾವಿದರು ಜೀವ ಬಿಟ್ಟರು. ಅವರ ಕಡೆಗೆ ಸರಕಾರ ಗಮನ ಹರಿಸಲಿಲ್ಲ. ಕಲಾವಿದರಿಗೆ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದ ಸರಕಾರ ಸಹಾಯವೇ ಮಾಡಲಿಲ್ಲ. ರಾಜ್ಯದಲ್ಲಿ ಎಷ್ಟು ರಂಗಭೂಮಿ, ವೃತ್ತ ರಂಗಭೂಮಿ ಕಲಾವಿದರು ಇದ್ದಾರೆ. ಅವರ ಸಾಮಾಜಿಕ ಮತ್ತು ಆರ್ಥಿಕತೆಯ ಕುರಿತು ಸರಕಾರ ಸಮೀಕ್ಷೆ ಮಾಡಬೇಕೆಂದು ಜಾನಪದ ಪರಿಷತ್ ಆಗ್ರಹಿಸುತ್ತದೆ ಎಂದರು.
ಸಾಹಿತಿ-ಪತ್ರಕರ್ತ ಡಿ. ಎಂ. ಸಾವಕಾರ ರಚಿತ ರಾಜಪಥ ಹಾಗೂ ಹೊಸ ಹೆಜ್ಜೆ ಕೃತಿಯನ್ನು ಮಾಜಿ ಸಚಿವ ಎಸ್. ಆರ್. ಪಾಟೀಲ ಬಿಡುಗಡೆ ಮಾಡಿ ಮಾತನಾಡಿದರು. ಕುಂದರಗಿ ಚರಂತಿಮಠದ ವಿಶ್ವನಾಥ ದೇವರು ಸಾನ್ನಿಧ್ಯ ವಹಿಸಿದ್ದರು. ಬನಶಂಕರಿದೇವಿ ವಿದ್ಯಾ ಸಂಸ್ಥೆಯ ಕಾರ್ಯಾಧ್ಯಕ್ಷ ಬಸವರಾಜ ಖೋತ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ|ರಾಜಶೇಖರ ಮಠಪತಿ (ರಾಗಂ) ಕೃತಿಗಳ
ಪರಿಚಯ ಮಾಡಿ ಮಾತನಾಡಿದರು.
ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ, ತಾಲೂಕಾಧ್ಯಕ್ಷ ಬಸವರಾಜ ದಾವಣಗೇರಿ, ಆನಂದ್ ಜಡಿಮಠ, ಸಿ.ಆರ್.ಸೋರಗಾವಿ, ಕಸಾಪ ರಾಜ್ಯ ಕಾರ್ಯಕಾರಿಣಿ ಸದಸ್ಯ ಜಿ.ಕೆ. ತಳವಾರ್, ತಾಪಂ ಮಾಜಿ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ವೀರೇಂದ್ರ ಶೀಲವಂತ, ಎಸ್.ಎಂ. ಕಟಗೇರಿ, ಸಿದ್ದಪ್ಪ ಬಿದರಿ, ಕೆ.ಎಸ್. ಸೋಮನಕಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ