ಅರಿಶಿನ ಬೀಜಗಳ ಕೊರತೆ: ಹೆಚ್ಚಿದ ಬೆಲೆ-ಬೇಡಿಕೆ

ಚಿನ್ನಾ ಸೇಲಂ ಬೀಜಗಳಿಗೆ ಭಾರಿ ಬೇಡಿಕೆ

Team Udayavani, May 6, 2022, 11:37 AM IST

10

ರಬಕವಿ-ಬನಹಟ್ಟಿ: ಈ ಬಾರಿ ಅರಿಶಿನಕ್ಕೆ ಮಾರುಕಟ್ಟೆಯಲ್ಲಿ ಬೇಡಿಕೆಯ ಉಂಟಾಗಿದ್ದು, ಅರಿಶಿನಕ್ಕೆ ಉತ್ತಮ ಬೆಲೆ ಇರುವುದರಿಂದ ಈ ಭಾಗದ ರೈತರು ಅರಿಶಿನ ಬೀಜ ಖರೀದಿಸಲು ಮುಂದಾಗಿದ್ದಾರೆ.

ಈ ಭಾಗಕ್ಕೆ ತಮಿಳುನಾಡಿನ ಸೇಲಂನಿಂದ ಅರಿಶಿನ ಬೀಜಗಳನ್ನು ತರಿಸಿಕೊಳ್ಳಲಾಗುತ್ತದೆ. ಈ ಬಾರಿ ತಮಿಳುನಾಡಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ತಮಿಳುನಾಡಿನ ಸೇಲಂನಲ್ಲಿ ಅರಿಶಿನ ಬೀಜಗಳ ಇಳುವರಿ ಕಡಿಮೆಯಾಗಿದೆ. ಜತೆಗೆ ಅಲ್ಲಿಯ ರೈತರು ಕೂಡಾ ಅರಿಶಿನ ಬೀಜಗಳ ಮಾರಾಟಕ್ಕೆ ಮುಂದಾಗುತ್ತಿಲ್ಲ. ಆದ್ದರಿಂದ ಸೇಲಂನಿಂದ ಬರುವ ಅರಿಸಿನ ಬೀಜಗಳ ಪೂರೈಕೆಯೂ ಕಡಿಮೆಯಾಗಿದೆ. ಅಲ್ಲಿಯ ರೈತರು ಮುಂದಿನ ದಿನಗಳಲ್ಲಿ ಬೀಜಗಳ ಬೆಲೆ ಹೆಚ್ಚಾಗುತ್ತದೆ ಎಂದು ಅವುಗಳನ್ನು ಸಂಗ್ರಹ ಮಾಡಿಟ್ಟುಕೊಂಡಿದ್ದಾರೆ. ಆದ್ದರಿಂದ ನಮ್ಮಲ್ಲಿ ಬೀಜಗಳ ಕೊರತೆಯಾಗಿದೆ ಮತ್ತು ಬೆಲೆಗಳಲ್ಲಿ ಕೂಡಾ ಹೆಚ್ಚಾಗಿದೆ. ಕಳೆದ ಸಲ ಒಂದು ಕ್ವಿಂಟಲ್‌ ಬೀಜಕ್ಕೆ 3500 ರೂ. ಇತ್ತು. ಆದರೆ, ಈ ಬಾರಿ 3900 ರೂ. ಗಳಿಗೆ ಮಾರಾಟವಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಂಭವವಿದೆ ಎನ್ನುತ್ತಾರೆ ರೈತ ದೇವರಾಜ ರಾಠಿ.

ಈಗಾಗಲೆ ಒಂದೆರಡು ಉತ್ತಮ ಮಳೆಗಳು ಆಗಿದ್ದು, ನದಿಯಲ್ಲಿ ಬೇಸಿಗೆಯ ಸಂದರ್ಭದಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ನೀರಿನ ಸಂಗ್ರಹವಿರುವುದರಿಂದ ಅರಿಶಿನ ನಾಟಿಗೆ ಸಜ್ಜಾಗುತ್ತಿದ್ದಾರೆ. ಜಾಗದಾಳ ಗ್ರಾಮದ ಸುತ್ತ ಮುತ್ತಲಿನ ಭಾಗದಲ್ಲಿ ಅಂದಾಜು 100ಕ್ಕೂ ಹೆಚ್ಚು ಲಾರಿಯಷ್ಟು ಅರಿಶಿನ ಬೀಜಗಳು ಮಾರಾಟವಾಗುತ್ತವೆ. ಒಂದು ಲಾರಿಯಲ್ಲಿ 16 ಟನ್‌ ಬೀಜಗಳು ಬರುತ್ತವೆ.

ಜಗದಾಳ ಗ್ರಾಮಕ್ಕೆ ಅರಿಶಿನ ಬೀಜ ಖರೀದಿಸಲು ರಬಕವಿ ಬನಹಟ್ಟಿ, ಜಮಖಂಡಿ, ಗೋಕಾಕ, ರಾಯಬಾಗ ಮತ್ತು ಅಥಣಿ ತಾಲ್ಲೂಕಿನ ವಿವಿಧ ನಗರ ಮತ್ತು ಗ್ರಾಮೀಣ ಪ್ರದೇಶಗಳಿಂದ ರೈತರು ಆಗಮಿಸುತ್ತಿದ್ದಾರೆ. ಅರಿಶಿನ ಬೀಜಗಳಲ್ಲಿಯೂ ಕೂಡಾ ಸಾಕಷ್ಟು ಕಲಬೆರೆಕೆಯ ಬೀಜಗಳು ಬರುತ್ತಿರುವುದರಿಂದ ರೈತರಿಗೆ ತೊಂದರೆಯಾಗಿದೆ ಎಂದು ರಾಯಬಾಗ ತಾಲ್ಲೂಕಿನ ರೈತರು ಪತ್ರಿಕೆಗೆ ತಿಳಿಸಿದರು.

ಒಟ್ಟಿನಲ್ಲಿ ಅರಿಶಿನ ಕೃಷಿ ರೈತರಿಗೆ ಪರಿಶ್ರಮದ ಬೆಳೆಯಾಗಿದ್ದರೂ, ಕೋವಿಡ್‌ ನಿಂದಾಗಿ ಸ್ಥಗಿತಗೊಂಡಿದ್ದ ಮಾರುಕಟ್ಟೆ ಮತ್ತೆ ಚುರುಕುಗೊಂಡಿದೆ. ಮುಂದಿನ ದಿನಗಳಲ್ಲಿ ಲಾಭವಾಗಬಹುದು ಎಂಬ ಭರವಸೆಯೊಂದಿಗೆ ರೈತರು ಅರಿಶಿನ ಬೆಳೆಗೆ ಸಜ್ಜಾಗಿದ್ದಾರೆ. „ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.