ಯೋಧ ಜಾಪಾಳ ಮೂರ್ತಿ ಪ್ರತಿಷ್ಠಾಪನೆ

•ವೀರ ಯೋಧನ ಗೌರವಿಸಿದ ಕಮತಪುರ•ಹುತಾತ್ಮನ ಸ್ಮಾರಕಕ್ಕಾಗಿ ಗ್ರಾಮಸ್ಥರೇ ಸಂಗ್ರಹಿಸಿದರು 10 ಲಕ್ಷ

Team Udayavani, Jul 14, 2019, 9:37 AM IST

bk-tdy-1..

ಅಮೀನಗಡ: ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದ ಜನರೇ 10 ಲಕ್ಷ ರೂ. ಹಣ ಕೂಡಿಸಿ ಹುತಾತ್ಮ ವೀರಯೋಧ ನಾಗೇಶ ಜಾಪಾಳ ಸ್ಮರಣಾರ್ಥ ಸ್ಮಾರಕ ನಿರ್ಮಿಸಿದ್ದು ಅದರ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಶನಿವಾರ ಜರುಗಿತು.

ಗ್ರಾಮಸ್ಥರೇ ಮನೆ ಮನೆಯಿಂದ ಸಂಗ್ರಹಿಸಿದ್ದ 10 ಲಕ್ಷ ಹಣದಲ್ಲಿ ನಿರ್ಮಿಸಿದ ಸ್ಮಾರಕ ಹಾಗೂ ಮೂರ್ತಿಯನ್ನು ಶನಿವಾರ ಪಟ್ಟಣದಲ್ಲಿ ಅದ್ಧೂರಿ ಮೆರವಣಿಗೆ ನಡೆಸಿ, ಪಟ್ಟಣದ ಹೊರ ವಲಯದಲ್ಲಿ ಹುತಾತ್ಮ ಯೋಧ ನಾಗೇಶ ಜಾಪಾಳ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಈ ಕಾರ್ಯಕ್ಕೆ ನಾಡಿನ ಹಲವು ಮಠಾಧೀಶರು, ಮಾಜಿ ಸೈನಿಕರು, ಹಾಲಿ ಸೈನಿಕರ ತಾಯಂದಿರುವ ಸಹಿತ ಸಹಸ್ರಾರು ಜನರು ಸಾಕ್ಷಿಯಾದರು.

ಇದಕ್ಕೂ ಮೊದಲು ಹೊಳೆಹುಚ್ಚೇಶ್ವರ ಮಠದಿಂದ ಪ್ರಾರಂಭವಾದ ಮೂರ್ತಿ ಮೆರವಣಿಗೆ ಬಸ್‌ಸ್ಟಾಂಡ್‌, ಪಾರ್ವತಿ ಪರಮೇಶ್ವರ ಗುಡಿ, ಮೇನ್‌ ಬಜಾರ್‌, ಸ್ವಿಚಕಟ್ಟಿ, ಕೆಎಬಿ ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಂಚರಿಸಿ ನಂತರ ಸ್ಮಾರಕ ತಲುಪಿತು. ಮೆರವಣಿಗೆಯಲ್ಲಿ ಹುಚ್ಚೇಶ್ವರ ಪ್ರೌಢಶಾಲೆ, ಎಂಪಿಎಸ್‌ ಪ್ರೌಢಶಾಲೆ, ಡಿಪಿಪಿ ಪ್ರೌಢಶಾಲೆ, ಸೇವಾಲಾಲ ಪ್ರೌಢ ಶಾಲೆ, ಶಿವಶರಣೆ ಪ್ರೌಢಶಾಲೆ, ಶಾರದಾ ಪ್ರೌಢಶಾಲೆ, ವಿಶ್ವಚೇತನ ಪ್ರೌಢಶಾಲೆ ಸೇರಿದಂತೆ ವಿವಿಧ ಪ್ರೌಢಶಾಲೆಯ ಮಕ್ಕಳು ಹಾಗೂ ಪದವಿ ವಿದ್ಯಾರ್ಥಿಗಳು, ಮಾಜಿ ಸೈನಿಕರು, ಸೈನಿಕರು ಹುತಾತ್ಮ ಯೋಧ ನಾಗೇಶ ಅವರ ಭಾವಚಿತ್ರ ಹಿಡಿದುಕೊಂಡು ದೇಶ ಭಕ್ತಿಯ ಘೋಷಣೆೆಗಳೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಇಳಕಲ್ಲಿನ ಗುರುಮಹಾಂತ ಸ್ವಾಮೀಜಿ, ಕಮತಗಿ-ಕೊಟೇಕಲ್ಲಿನ ಹೊಳೆ ಹುಚ್ಚೇಶ್ವರ ಸ್ವಾಮೀಜಿ, ಹುಬ್ಬಳ್ಳಿಯ ನೀಲಕಂಠಮಠದ ಶಿವಶಂಕರ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ್ಯ ಸ್ವಾಮೀಜಿ, ಗುಳೇದಗುಡ್ಡದ ಬಸವರಾಜ ಸ್ವಾಮೀಜಿ, ಕಮತಗಿಯ ಶಿವಕುಮಾರ ಸ್ವಾಮೀಜಿ, ಗುಳೇದಗುಡ್ಡದ ಕಾಶೀನಾಥ ಸ್ವಾಮೀಜಿ, ಕುಂದರಗಿಯ ಅಡವಿಸಿದ್ದೇಶ್ವರ ಸ್ವಾಮೀಜಿ, ಕಾಗವಾಡದ ಯತೀಶ್ವರಾನಂದ ಸ್ವಾಮೀಜಿ, ಕೋಟೆಕಲ್ಲನ ನೀಲಕಂಠ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಮೂರ್ತಿ ಪ್ರತಿಷ್ಠಾಪನೆ ಜರುಗಿತು. ಇದೇ ಸಂದರ್ಭದಲ್ಲಿ ವೀರಯೋಧ ನಾಗೇಶ ಜಾಪಾಳ ಸ್ಮಾರಕ ಸಮಿತಿಯ ಪ್ರಮುಖರಾದ ಮಾರುತಿ ಚಿತ್ರಗಾರ, ವೀರಯೋಧನ ತಂದೆ ಶರಶ್ಚಂದ್ರಪ್ಪ ಜಾಪಾಳ, ತಾಯಿ ಶಂಕ್ರವ್ವ ಜಾಪಾಳ, ವೀರಯೋಧನ ಪತ್ನಿ ಪುಷ್ಪಾ ನಾಗೇಶ ಜಾಪಾಳ, ಈರಣ್ಣ ಜಾಪಾಳ, ಲಕ್ಷ್ಮಣ ಜಾಪಾಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.