ಮಕ್ಕಳ ಮೇಲೆ ಬೀಳುತ್ತಿತ್ತು ಕಲ್ಲು; ಇದು ಭಾನಾಮತಿ ಕಾಟವಲ್ಲ, ವಿದ್ಯಾರ್ಥಿನಿ ಕೈಚಳಕ!


Team Udayavani, Sep 26, 2019, 3:09 PM IST

KALLU

ಬಾಗಲಕೋಟೆ : ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಇಂಜನವಾರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಮೇಲೆ ಕಲ್ಲು ಬೀಳುವ ಪ್ರಕರಣ  ಭಾನಾಮತಿ ಕಾಟದಿಂದ ನಡೆದಿದ್ದಲ್ಲ ಬದಲಾಗಿ  ಆ ಶಾಲೆಯ ವಿದ್ಯಾರ್ಥಿನಿಯೊಬ್ಬಳ ಕೈಚಳದಿಂದ ನಡೆದಿರುವುದು ಎಂದು ಈಗ ಬಯಲಾಗಿದೆ.

ಇಂಜನವಾರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 1ರಿಂದ 5ನೇ ತರಗತಿ ಹೊಂದಿದ್ದು, ಐದು ಶಾಲಾ ಕೊಠಡಿಗಳಿವೆ. ಇಲ್ಲಿ ಒಟ್ಟು 24 ಮಕ್ಕಳು ವ್ಯಾಸಂಗ ಮಾಡುತ್ತಾರೆ. ಓರ್ವ ಮುಖ್ಯೋಪದ್ಯಾಯಕ ಸೇರಿ  ಇಬ್ಬರು  ಶಿಕ್ಷಕರಿದ್ದಾರೆ.

ಕಳೆದ ಒಂದು  ತಿಂಗಳಿಂದ  ಇಲ್ಲಿನ  ಎರಡು  ಕೊಠಡಿಗಳ,  ನಾಲ್ಕೈದು  ವಿದ್ಯಾರ್ಥಿಗಳ  ಮೇಲೆ  ಕಲ್ಲು ಬೀಳುತ್ತಿದ್ದವು.  ಈ ಕುರಿತು  ಸ್ವತಃ  ಗುಳೇದಗುಡ್ಡ  ಪಿಎಸ್‌ಐ,  ಡಿಡಿಪಿಐ  ಸಹಿತ  ಹಲವು  ಅಧಿಕಾರಿಗಳು  ಪರಿಶೀಲನೆ  ನಡೆಸಿದ್ದರು. ಡಿಡಿಪಿಐ ಮತ್ತು  ಪಿಎಸ್‌ಐ  ಹೋದಾಗಲೂ  ಕಲ್ಲು  ಬಿದ್ದಿದ್ದವು.  ಹೀಗಾಗಿ  ಇದೊಂದು  ಭಾನಾಮತಿ  ಕಾಟ  ಎಂಬ  ನಿರ್ಧಾರಕ್ಕೆ  ಬರಲಾಗಿತ್ತು.

ಈ ಪ್ರಕರಣ ಡಿಸಿ ಮತ್ತು ಎಸ್ಪಿ ಗಮನಕ್ಕೆ ಬಂದ ಬಳಿಕ, ಗಂಭೀರತೆ ಪಡೆದಿತ್ತು. ಇಂದಿನ ವೈಜ್ಞಾನಿಕ ಯುಗದಲ್ಲಿ ಭಾನಾಮತಿ ಕಾಟವಿದೆ ಎಂದರೆ ಒಪ್ಪಿಕೊಳ್ಳಲಲು ಸಾಧ್ಯವಿಲ್ಲ. ಯಾರೋ ಕಿಡಿಗೇಡಿಗಳ ಕೃತ್ಯ ಇರಬಹುದು. ಇದನ್ನು ಪತ್ತೆಮಾಡಿ ಎಂದು ಸೂಚನೆ ನೀಡಲಾಗಿತ್ತು. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ, ಶಾಲೆಯ ಐದು ಕೊಠಡಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ಸಿಸಿ ಕ್ಯಾಮರಾ ಅಳವಡಿಸಿದ ಬಳಿಕ, ಕಲ್ಲು ಬೀಳುವ ಘಟನೆ ನಿಂತಿತ್ತು. ಆದರೆ, ಇದನ್ನು ಯಾರು ಮಾಡುತ್ತಾರೆ ಎಂಬುದನ್ನು ಪತ್ತೆ ಮಾಡುವುದು ಪೊಲೀಸ್ ಇಲಾಖೆಗೆ ಸವಾಲಾಗಿತ್ತು.

ಕಳೆದ ಒಂದು ವಾರದಿಂದ ಶಾಲೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ  ನಿರಂತರ  ಪರಿಶೀಲನೆ ಜತೆಗೆ ನಿಗಾ ವಹಿಸಿದ್ದು, ಶಾಲೆಯ ಓರ್ವ ಬಾಲಕಿಯೇ ಈ ರೀತಿ ಕಲ್ಲು ಎಸೆಯುತ್ತಿದ್ದದ್ದು ಖಚಿತಪಟ್ಟಿದೆ. ಆ ಬಾಲಕಿಯನ್ನು ವಿಚಾರಿಸಲಾಗಿದ್ದು, ಅವಳೂ ಒಪ್ಪಿಕೊಂಡಿದ್ದಾಳೆ. ಆದರೆ, ಆ ಬಾಲಕಿಯ ಭವಿಷ್ಯದ ಹಿತೃದೃಷ್ಟಿಯಿಂದ ಅವಳ ಹೆಸರು, ಗುರುತು ಪತ್ತೆಯಾಗದಂತೆ ಬಹಿರಂಗಪಡಿಸದೇ, ಎಚ್ಚರಿಕೆ ನೀಡಿ ಬಿಡಲಾಗಿದೆ.

ಇಂಜನವಾರಿ ಶಾಲೆಯ ಮಕ್ಕಳ ಮೇಲೆ ಕಲ್ಲು ಬೀಳುವ ಪ್ರಕರಣ  ಪತ್ತೆಯಾಗಿದ್ದು, ಯಾವುದೇ ಭಾನಾಮತಿ ಕಾಟದಿಂದ ಅದು ನಡೆದಿದ್ದಲ್ಲ. ಆ ಶಾಲೆಯ ಓರ್ವ ವಿದ್ಯಾರ್ಥಿನಿಯೇ ನಿತ್ಯ ಶಾಲೆಗೆ ಕಲ್ಲು ತೆಗೆದುಕೊಂಡು ಬಂದು, ಇತರ ವಿದ್ಯಾರ್ಥಿಗಳ ಮೇಲೆ ಎಸೆಯುತ್ತಿದ್ದಳು.  ಇದು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಆದರೆ ಆ ಬಾಲಕಿ ಯಾಕೆ ಕಲ್ಲು ಎಸೆಯುತ್ತಿದ್ದಳು  ಎಂಬುದು ತಿಳಿದು ಬಂದಿಲ್ಲ. ಲೋಕೇಶ ಜಗಲಾಸರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.