ವಿದ್ಯಾರ್ಥಿನಿ ಸಾವಿನ ತನಿಖೆಗೆ ಆಗ್ರಹ
Team Udayavani, Apr 23, 2019, 12:47 PM IST
ಇಳಕಲ್ಲ: ರಾಯಚೂರಿನ ಇಂಜಿನಿಯರ್ ಕಾಲೇಜಿನ ವಿದ್ಯಾರ್ಥಿನಿಯೋರ್ವರ ಸಾವು ಸಂಶಯಾಸ್ಪದವಾಗಿದೆ. ಕಾರಣ ಅವರ ಸಾವಿನ ತನಿಖೆ ಕೇವಲ ಕಾಟಾಚಾರಕ್ಕೆ ಆಗದೆ ಅದು ನಿಷ್ಪಕ್ಷಪಾತದಿಂದ ಆಗಬೇಕು ಎಂದು ತಾಲೂಕಿನ ಎಲ್ಲ ವಿಶ್ವಕರ್ಮ ಸಮಾಜ ಬಾಂಧವರು ಆಗ್ರಹಿಸಿದರು.
ಇಲ್ಲಿಯ ಗಾಂಧಿ ಚೌಕದಿಂದ ಮೇಣಬತ್ತಿ ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಮೌನ ಮೆರವಣಿಗೆ ಮೂಲಕ ಸಂಚರಿಸಿ ಕಂಠಿ ವೃತ್ತದಲ್ಲಿ ಒಂದು ನಿಮಿಷ ಮೌನ ಆಚರಿಸಿದರು. ಸಮ್ಮಿಶ್ರ ಸರಕಾರದ ಆಡಳಿತದಲ್ಲಿ ಗೂಂಡಾಗಳನ್ನು ನಿಯಂತ್ರಿಸಲು ವಿಫಲವಾಗಿದ್ದು, ಇದರಿಂದ ಇಂಥ ಅನೇಕ ವಿದ್ಯಾರ್ಥಿಗಳು ಕಿರುಕುಳ ಅನುಭವಿಸುವಂತಾಗಿದೆ. ಮುಖ್ಯ ಮಂತ್ರಿಗಳು ರಾಜ್ಯದಲ್ಲಿರುವ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ವಿದ್ಯಾರ್ಥಿನಿ ಸಾವಿಗೆ ಕಾರಣರಾದವರನ್ನು ಶೀಘ್ರದಲ್ಲಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.
ಮೌನ ಮೆರವಣಿಗೆಯಲ್ಲಿ ನೂರಾರು ಅಕ್ಕಸಾಲಿಗರು, ವಿಶ್ವಕರ್ಮ ಸಮಾಜದ ಯುವಕರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್