ಶುದ್ಧ ಕುಡಿಯುವ ನೀರಿಗಾಗಿ ಪರದಾಟ

ನಿರ್ವಹಣೆಯಿಲ್ಲದೇ ನಾಲ್ಕು ಘಟಕಗಳು ಸ್ಥಗಿತ

Team Udayavani, May 30, 2020, 11:04 AM IST

ಶುದ್ಧ ಕುಡಿಯುವ ನೀರಿಗಾಗಿ ಪರದಾಟ

ಬೀಳಗಿ: ನಿರ್ವಹಣೆಯಿಲ್ಲದೆ ಪಟ್ಟಣದ ವಿವಿಧ ಬಡಾವಣೆಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಹಲವು ತಿಂಗಳಿಂದ ಸ್ಥಗಿತಗೊಂಡಿವೆ. ಈ ಕುರಿತು ಪಪಂ ದಿವ್ಯ ನಿರ್ಲಕ್ಷ್ಯ ಧೋರಣೆ ತಾಳಿರುವ ಪರಿಣಾಮ, ಬಿರು ಬೇಸಿಗೆ ಹಾಗೂ ಕೊರೊನಾ ಭೀತಿಯ ನಡುವೆ ಸಾರ್ವಜನಿಕರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಏಳರಲ್ಲಿ ಮೂರು ಸುಸ್ಥಿತಿಯಲ್ಲಿ: ಸದೃಢ ಆರೋಗ್ಯಕ್ಕೆ ಶುದ್ಧ ನೀರು ಪ್ರಮುಖ ಕಾರಣ ಎನ್ನುವ ಸದಾಶಯದಿಂದ ಲಕ್ಷಾಂತರ ವೆಚ್ಚ ಮಾಡಿ ಮಾಜಿ ಶಾಸಕ ಜೆ.ಟಿ.ಪಾಟೀಲರ ಅವಧಿಯಲ್ಲಿ ಪಟ್ಟಣದಲ್ಲಿ ನಿರ್ಮಾಣಗೊಂಡ ಏಳು ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಆರೇಳು ವರ್ಷ ಗತಿಸಿದೆ. ಆದರೆ, ಯಾವುದೇ ಭಾಗದ ಘಟಕಗಳೂ ನಿರಂತರ ಸೇವೆ ನೀಡುತ್ತಿಲ್ಲ. ಇಂತಹ ಬೇಜವಾಬ್ದಾರಿ ಸ್ಥಿತಿಗೆ ಜನ ರೋಸಿ ಹೋಗಿದ್ದಾರೆ. ಸದ್ಯ, ಪಟ್ಟಣದ ಏಳು ಘಟಕಗಳ ಪೈಕಿ ನಗರದ ಗಾಂಧಿ ವೃತ್ತ, ಡಾ|ಅಂಬೇಡ್ಕರ್‌ ನಗರ ಹಾಗೂ ಶಿವಾಜಿ ವೃತ್ತದ ಹತ್ತಿರ ಮೂರು ಘಟಕಗಳು ಮಾತ್ರ ಸುಸ್ಥಿತಿಯಲ್ಲಿವೆ.  ಪರಿಣಾಮ, 20 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿಗಾಗಿ ಓಣಿಯಿಂದ, ಓಣಿಗೆ ಅಲೆಯುವಂತಾಗಿದೆ.

ರಿಪೇರಿ ಕಾಣದ ಘಟಕಗಳು: ಪಟ್ಟಣದ ಜನತಾ ಪ್ಲಾಟ್‌, ಕಿಲ್ಲಾಗಲ್ಲಿ, ರೇಣುಕಾ ನಗರ (ಜೈನ್‌ ಮಂದಿರ ಹತ್ತಿರ) ಹಾಗೂ ಪಪಂ ಮೂಗಿನ ನೇರಕ್ಕೆ ಇರುವ ಡಾ|ಅಂಬೇಡ್ಕರ್‌ ವೃತ್ತದ ಘಟಕಗಳು ಸ್ಥಗಿತಗೊಂಡಿವೆ. ಇದರಲ್ಲಿ ಕೆಲ ಘಟಕಗಳು 60 ರಿಂದ 80 ಸಾವಿರದವರೆಗೆ ರಿಪೇರಿ ಖರ್ಚಿಗಾಗಿ ಕಾಯ್ದು ಕುಳಿತಿವೆ. ಹಲವು ತಿಂಗಳಿಂದ ನಿರ್ವಹಣೆಯಿಲ್ಲದೆ ಘಟಕಗಳು ತುಕ್ಕು ಹಿಡಿಯುತ್ತಿವೆ. ಸಾರ್ವಜನಿಕರ ಮೂಲಭೂತ ಸೌಕರ್ಯಗಳಲ್ಲಿ ಮೊದಲ ಆದ್ಯತೆಗೆ ಅರ್ಹವಾಗಿರುವ ಕುಡಿಯುವ ನೀರಿನ ಕುರಿತು ಪಪಂ ನಿರ್ಲಕ್ಷ್ಯ ಧೋರಣೆ ತಾಳಿರುವುದು ನಗರ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಪಪಂ ಅಧಿಕಾರಿಗಳಿಗೆ ಹಾಗೂ ಶಾಸಕರಾದಿಯಾಗಿ ಎಲ್ಲ ಜನಪ್ರತಿನಿಧಿಗಳಿಗೆ ಮನವಿ ಮಾಡಿಕೊಂಡಿರುವುದು ಬೇಸಿಗೆಯ ಪ್ರಖರತೆಗೆ ಆವಿಯಾದ ನೀರಿನಂತಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸ್ಥಳೀಯ ನಾಗರಿಕರು, ಕೂಡಲೆ ಘಟಕಗಳ ಆರಂಭಕ್ಕೆ ಪಪಂ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಶುದ್ಧ ಕುಡಿಯುವ ನೀರಿನ ಘಟಕಗಳ ಉತ್ತಮ ನಿರ್ವಹಣೆ ಮಾಡದ ಪಪಂ ಇಲಾಖೆಯವರು ಕುಂಟುನೆಪ ಹೇಳುತ್ತಾರೆ. ಸಾರ್ವಜನಿಕರು ತೊಂದರೆ ಪಡುವಂತಾಗಿದೆ. ಈ ಕುರಿತು ಎಂಎಲ್‌ಎ, ಎಂಎಲ್‌ಸಿಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿರುವುದೆಲ್ಲ ವ್ಯರ್ಥವಾಗಿದೆ. ಘಟಕಗಳಿಗೆ ಕಾಯಂ ಕೀಲಿಯನ್ನಾದರು ಜಡಿಯಲಿ. –ಮುದ್ದುರಾವ್‌ ಸೊನ್ನ, ನಗರ ನಿವಾಸಿ

ಎರಡು ರೂಪಾಯಿಗೆ 20 ಲೀಟರ್‌ ನೀರು ಕೊಡುತ್ತೇವೆ. ನಿರ್ವಹಣಾ ವೆಚ್ಚ ಹಾಗೂ ವಿದ್ಯುತ್‌ ಬಿಲ್‌ ಕೂಡ ಭರಣಾ ಮಾಡಲು ಆಗುತ್ತಿಲ್ಲ. ನಿರ್ವಹಣೆ ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಆದರೂ ಘಟಕಗಳನ್ನು ಕೂಡಲೆ ಆರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು.  – ದೇವೀಂದ್ರ ಧನಪಾಲ, ಮುಖ್ಯಾಧಿಕಾರಿಗಳು ಪಪಂ, ಬೀಳಗಿ

 

-ರವೀಂದ್ರ ಕಣವಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.