ಪತ್ತೆಯಾಗದ ಚಿರತೆ: ಕಾರ್ಯಾಚರಣೆ ಸ್ಥಗಿತ
ಕುಂಬಾರಹಳ್ಳ ಗ್ರಾಮದ ತೋಟದ ಜಮೀನಿನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ
Team Udayavani, Jun 4, 2021, 7:18 PM IST
ಜಮಖಂಡಿ: ಕಳೆದ 9 ದಿನಗಳ ಹಿಂದೆ ಕುಂಬಾರಹಳ್ಳ ಗ್ರಾಮದ ತೋಟದ ಜಮೀನಿನಲ್ಲಿ ಪ್ರತ್ಯಕ್ಷಗೊಂಡಿದ್ದ ಚಿರತೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.
ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ 9 ದಿನದಲ್ಲಿ ಆರಂಭದ ಎರಡು ದಿನ ಮಾತ್ರ ಸಿಸಿ ಕ್ಯಾಮೆರಾದಲ್ಲಿ ಕಾಣಿಸಿಕೊಂಡು ಬೋನಿಗೆ ಬೀಳದ ಚಿರತೆ ಚಲನವಲನ ಕಳೆದ 7 ದಿನಗಳಿಂದ ಸಿಸಿ ಕ್ಯಾಮೆರಾದಲ್ಲಿ ಕೂಡ ಸೆರೆಯಾಗಿಲ್ಲ.
ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ ಕಬ್ಬಿನ ಗದ್ದೆಯನ್ನು ಕಟಾವು ಮಾಡಿದರೂ ಚಿರತೆ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ಗುರುವಾರ ಬೆಳಗ್ಗೆ ಚಿರತೆ ಕಾಣಿಸಿಕೊಂಡಿದ್ದ ಕಬ್ಬಿನ ಗದ್ದೆಗೆ ನಗರದ ಚೌಡಯ್ಯನಗರದ ಹಂದಿ ಹಿಡಿಯುವ ಬೇಟೆಗಾರರ ಬಲೆಗಳಿಂದ ಗದ್ದೆಗೆ ಸುತ್ತಮುತ್ತ ಬಲೆ ಹಾಕಿ ಒಂದು ಪ್ರಮುಖ ದ್ವಾರದಲ್ಲಿ ಅರಣ್ಯ ರಕ್ಷಕರ ತಂಡ ಶಸ್ತ್ರದೊಂದಿಗೆ ಚಿರತೆ ಬಂಧನ ಕಾರ್ಯಾಚರಣೆ ನಡೆಸಿತು. ಆದರೂ ಕೂಡ ಚಿರತೆ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಲಿಲ್ಲ. ಗ್ರಾಮಸ್ಥರ ಒತ್ತಾಯ ಮತ್ತು ಹಿರಿಯ ಅರಣ್ಯ ಅ ಧಿಕಾರಿಗಳ ನಿರ್ದೇಶನದಂತೆ ಅರಣ್ಯ ಇಲಾಖೆ ವಿಶೇಷ ರಕ್ಷಕರು ಸಹಿತ ಅಂದಾಜು 50 ಜನರ ತಂಡದೊಂದಿಗೆ ಅಂದಾಜು 4ರಿಂದ 5 ಕಿ.ಮೀ.ವರೆಗೆ ಕೋಬಿಂಗ್ ನಡೆಸಲಾಗಿದೆ. ಅಲ್ಲಿಯೂ ಚಿರತೆಯು ಕಾಣಿಸಿಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ