ಬಾಗಲಕೋಟೆಯ ಹುಲಸಗೇರಿ ಹಳ್ಳಿ ಪೂರ್ತಿ ಡಿಜಿಟಲ್‌


Team Udayavani, Jan 12, 2017, 3:45 AM IST

11bgk-1B.jpg

ಬಾಗಲಕೋಟೆ: ನಗದುರಹಿತ ವಹಿವಾಟಿಗೆ ಉತ್ತೇಜನ ನೀಡುವ ಪ್ರಯತ್ನದ ಭಾಗವಾಗಿ ಬಾದಾಮಿ ತಾಲೂಕಿನ ಜಮ್ಮನಕಟ್ಟಿ ಗ್ರಾಪಂ ವ್ಯಾಪ್ತಿಯ ಕುಗ್ರಾಮ ಹುಲಸಗೇರಿ ಜ.12ರಿಂದ ಸಂಪೂರ್ಣ ಡಿಜಿಟಲ್‌ ಆಗುತ್ತಿದೆ. ಬಸ್‌ ವ್ಯವಸ್ಥೆ ಕಾಣದ ಹುಲಸಗೇರಿ ಗ್ರಾಮಸ್ಥರ ಸಹಕಾರ, ನಬಾರ್ಡ್‌ ನೆರವು ಹಾಗೂ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ಪ್ರಯತ್ನದ ಫಲವಾಗಿ ನಗದುರಹಿತ ವಹಿವಾಟಿನತ್ತ ಹೆಜ್ಜೆ ಹಾಕಿದೆ. 

ಈ ಊರಿನಲ್ಲಿ ಯಾವುದೇ ಬ್ಯಾಂಕ್‌ ಶಾಖೆಗಳಿಲ್ಲ. ಪಕ್ಕದ ಕಟಗೇರಿ, ಜಮ್ಮನಕಟ್ಟಿಯಲ್ಲಿ ಬ್ಯಾಂಕ್‌ಗಳಿವೆ. ಈ ಗ್ರಾಮವನ್ನು ದತ್ತು ಪಡೆದಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಒಬ್ಬರು ಬಿಸಿ (ಬ್ಯಾಂಕಿಂಗ್‌ ಕರೆಸ್ಪಾಂಡೆಂಟ್‌) ಸಿಬ್ಬಂದಿ ನಿಯೋಜನೆ ಮಾಡಿದ್ದು, ಅವರಿಗೆ ಮೈಕ್ರೋ ಎಟಿಎಂ ಮತ್ತು ಪಿಒಎಸ್‌ ಯಂತ್ರ ನೀಡಿದೆ. ಗ್ರಾಮಸ್ಥರು ಬಿತ್ತನೆ ಬೀಜ, ರಸಗೊಬ್ಬರ, ಕಿರಾಣಿ ವಸ್ತುಗಳ ಖರೀದಿ ಮಾಡಿದಾಗೆಲ್ಲ ನೇರ ನಗದು ವರ್ಗಾವಣೆ ಮೂಲಕ ತಮ್ಮ ಖಾತೆಯಿಂದಲೇ ಹಣ ಪಾವತಿಸುತ್ತಾರೆ. ಒಂದು ವಾರದಿಂದ ಈ ಕಾರ್ಯ ಆರಂಭಗೊಂಡಿದ್ದು, ಜ. 12ರಿಂದ ಅಧಿಕೃತವಾಗಿ ಡಿಜಿಟಲ್‌ ಗ್ರಾಮವನ್ನಾಗಿ ಗ್ರಾಮೀಣ ಬ್ಯಾಂಕ್‌ ಅಧ್ಯಕ್ಷ ಎಸ್‌. ರವೀಂದ್ರನ್‌ ಘೋಷಣೆ ಮಾಡಲಿದ್ದಾರೆ.

619 ಜನರಿಗಿದೆ ಬ್ಯಾಂಕ್‌ ಖಾತೆ: 
ಈ ಗ್ರಾಮದಲ್ಲಿ ಒಟ್ಟು 697 ಜನರು ವಾಸವಾಗಿದ್ದಾರೆ. ಅದರಲ್ಲಿ 619 ಜನರು ಬ್ಯಾಂಕ್‌ ಖಾತೆ ಹೊಂದಿದ್ದು, ಅವರಿಗೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಿಂದ ರೂಪೆ ಕಾರ್ಡ್‌ ವಿತರಿಸಲಾಗಿದೆ. ನಗದುರಹಿತ ವಹಿವಾಟಿಗೆ ಜನರು ತಕ್ಷಣ ಸ್ಪಂದಿಸಲು ಮೈಕ್ರೋ ಎಟಿಎಂಗಳನ್ನು ಬಳಸಲಾಗುತ್ತಿದೆ. ಗ್ರಾಮೀಣ ಬ್ಯಾಂಕ್‌ ಸಖೀ ಯೋಜನೆಯಡಿ ಮಹಿಳಾ ಸಿಬ್ಬಂದಿ ಹಣಕಾಸು ವ್ಯವಹಾರಕ್ಕೆ ನೆರವಾಗುತ್ತಾರೆ. ಮೈಕ್ರೋ ಎಟಿಎಂ (ಖಾತೆಗೆ ಆಧಾರ್‌ ಲಿಂಕ್‌ ಮಾಡಿದ್ದರೆ ಮಾತ್ರ) ಮೂಲಕ ಜನರು ನೀಡುವ ಹಣ ಅವರ ಅಕೌಂಟ್‌ಗೆ ಜಮೆ ಮಾಡುವುದು ಹಾಗೂ 2000 ರೂ. ಮಿತಿಯಲ್ಲಿ ವಿತ್‌ ಡ್ರಾ ಮಾಡಲು ಮಹಿಳಾ ಸಿಬ್ಬಂದಿ ಸಹಾಯ ಮಾಡುತ್ತಾರೆ.

ಉಚಿತ ಪಿಒಎಸ್‌ ಯಂತ್ರ
ನಗದುರಹಿತ ವ್ಯವಹಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಯಾವ ಬ್ಯಾಂಕಿನ ಗ್ರಾಹಕರು ಪಿಒಎಸ್‌- ಮೈಕ್ರೋ ಎಟಿಎಂ ಮೂಲಕ ವ್ಯವಹಾರ ಮಾಡುತ್ತಾರೋ ಅವರಿಗೆ ಈಯಂತ್ರಗಳನ್ನು ನಬಾರ್ಡ್‌ನಿಂದ ಉಚಿತವಾಗಿ ನೀಡಲಾಗುತ್ತಿದೆ. ಹುಲಸಗೇರಿಯ ಎರಡು ಕಿರಾಣಿ ಅಂಗಡಿ, ಎರಡು ಹೊಟೇಲ್‌ಗ‌ಳ ವ್ಯವಹಾರಕ್ಕೆ ಪಿಒಎಸ್‌ ಯಂತ್ರ ನೀಡಲು ಉದ್ದೇಶಿಸಲಾಗಿದೆ. ಇದರಿಂದ ಕಾರ್ಡ್‌ ಬಳಸಿ ವಸ್ತುಗಳ ಖರೀದಿ ಮಾಡಹುದು ಎನ್ನುತ್ತಾರೆ ನಬಾರ್ಡ್‌ ಎಜಿಎಂ ರಾಘವೇಂದ್ರ ದೂದಿಹಳ್ಳಿ. 

ನಗದುರಹಿತ ವ್ಯವಹಾರಕ್ಕೆ ಸಂಪೂರ್ಣ ಡಿಜಿಟಲೀಕರಣ ಅಗತ್ಯ. ಹೀಗಾಗಿ ಹುಲಸಗೇರಿಯ 697 ಜನರಿಗೂ ಬ್ಯಾಂಕ್‌ ಖಾತೆ ಮಾಡಲಾಗುತ್ತಿದೆ. 60ಕ್ಕೂ ಹೆಚ್ಚು ಖಾತೆದಾರರಿಗೆ ಮೊಬೈಲ್‌ ಆ್ಯಪ್‌ ಅಳವಡಿಸಲಾಗಿದೆ. ಡಿಜಿಟಲ್‌ ಗ್ರಾಮ ಯೋಜನೆ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ನಗದುರಹಿತ ವ್ಯವಹಾರವೂ ಆರಂಭಗೊಳ್ಳಲಿದೆ.
– ನಾರಾಯಣ ಯಾಜಿ, ಪ್ರಾದೇಶಿಕ ವ್ಯವಸ್ಥಾಪಕರು, ವಿಕಾಸ ಗ್ರಾಮೀಣ ಬ್ಯಾಂಕ್‌

ಏನೆಲ್ಲ ಬೆಳದೈತಿ ನೋಡ್ರಿ. ನಮ್ಮೂರಿಗಿ ವಾರಕ್ಕೊಮ್ಮೆ ದೊಡ್ಡ ಎಟಿಎಂ (ಸಂಚಾರಿ ಎಟಿಎಂ) ಬರೆ¤$çತಿ. ಅದರಾಗ 4,500 ರೊಕ್ಕಾ ತಕ್ಕೊಬಹುದು. ಮತ್ತ ಗ್ರಾಮೀಣ ಬ್ಯಾಂಕ್‌ನ ಒಬ್ಬ ಮಹಿಳೆ ಮೈಕ್ರೋ ಎಟಿಎಂ ಅಂತ ತರ್ತಾರ್‌. ಅದರಾಗ 2000 ರೂ. ತಗೋಬಹುದು. ನಾನು ವಾರದಿಂದ ರೊಕ್ಕಾ ಬೇಕಂದ್ರ ನಮ್ಮೂರಾಗ್‌ ಪಡ್ಯಾಕ್‌ ಹತ್ತೀನಿ.
-ಭೀಮಪ್ಪ ಗೋಠೆ, ಹುಲಸಗೇರಿ ಗ್ರಾಮಸ್ಥ

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.