ವಿದ್ಯುತ್‌ ಕೈ ಕೊಟ್ಟರೆ ಕೆಲಸಗಳು ಸ್ತಬ್ಧ


Team Udayavani, Nov 18, 2019, 11:06 AM IST

bk-tdy-1

ಗುಳೇದಗುಡ್ಡ: ಪಟ್ಟಣದ ತಹಶೀಲ್ದಾರ್‌ ಕಚೇರಿ, ಉಪನೋಂದಣಿ ಕಚೇರಿ, ಪುರಸಭೆ ಕಚೇರಿಗಳಿಗೆನಿತ್ಯ ಒಂದಿಲ್ಲೊಂದು ಕೆಲಸಗಳಿಗೆ ನೂರಾರು ಜನರು ಬರುತ್ತಿದ್ದು, ವಿದ್ಯುತ್‌ ಕೈ ಕೊಟ್ಟರೆ ಮಾತ್ರ ಕಚೇರಿಗಳು ಸ್ತಬ್ದವಾಗಿ ಬಿಡುತ್ತವೆ. ಕಚೇರಿಗಳಲ್ಲಿ ಯುಪಿಎಸ್‌ ಸೌಲಭ್ಯ ಇಲ್ಲದೇ ಇರುವುದರಿಂದ ಜನರು ಕಚೇರಿಗಳಿಗೆ ಅಲೆಯುವುದು ತಪ್ಪುತ್ತಿಲ್ಲ. ತಹಶೀಲ್ದಾರ್‌ ಕಚೇರಿಯಲ್ಲಿ ವಿದ್ಯುತ್‌ ವ್ಯತ್ಯಯವಾದರೆ ತೊಂದರೆಯಾಗಬಾರದೆಂದು ಜನರೇಟರ್‌ ಅಳವಡಿಸಲಾಗಿದೆ. ಅದು ಕೆಟ್ಟು ತಿಂಗಳು ಕಳೆದಿದೆ. ದುರಸ್ತಿಗೆ ಇದುವರೆಗೂ ಯಾರೊಬ್ಬರೂ ಗಮನ ಹರಿಸಿಲ್ಲ.

ಹಳೇ ತಹಶೀಲ್ದಾರ್‌ ಕಚೇರಿ ಮುಂದೆ ಇದ್ದ ಜನರೇಟರ್‌ ಅನ್ನು ಬಾದಾಮಿ ನಾಕಾ ಹತ್ತಿರದ ಹೊಸ ತಹಶೀಲ್ದಾರ್‌ ಕಚೇರಿಗೆ ಸ್ಥಳಾಂತರಿಸಲಾಗಿದೆ. ಆದರೆ ಇದುವರೆಗೂ ಅದಕ್ಕೆ ಕನೆಕ್ಷನ್‌ ಕೊಟ್ಟಿಲ್ಲ. ಇನ್ನೂ ಉಪನೋಂದಣಿ ಕಚೇರಿಯಲ್ಲಿ ವಿದ್ಯುತ್‌ ವ್ಯತ್ಯಯವಾದರೆ ಭೂ ಖರೀದಿ, ಹೆಸರು ಬದಲಾವಣೆ ಸಂಬಂಧಿತ ಕೆಲಸಗಳೆಲ್ಲವು ಸ್ಥಗಿತಗೊಳ್ಳುತ್ತವೆ.

ಕಚೇರಿಯಲ್ಲಿ ಬ್ಯಾಟರಿ ವ್ಯವಸ್ಥೆಯಿದೆ. ಆದರೆ ಕಳೆದ ಕೆಲ ದಿನಗಳ ಹಿಂದೆ ಸುಟ್ಟು ಹೋಗಿದೆ. ಹೀಗಾಗಿ ವಿದ್ಯುತ್‌ ಕೈ ಕೊಟ್ಟಾಗ ಕಚೇರಿಯಲ್ಲಿ ಕೆಲಸಗಳು ನಿಲ್ಲುತ್ತವೆ. ಕಚೇರಿಯಲ್ಲಿ ಸದ್ಯ ಒಂದು ಜನರೇಟರ್‌ ವ್ಯವಸ್ಥೆ ಮಾಡಿದ್ದು, ಅದಕ್ಕೆ ಡಿಸೇಲ್‌ ಹಾಕಿ ಕಚೇರಿ ಕೆಲಸಗಳಿಗೆ ತೊಂದರೆಯಾಗದಂತೆ ಮಾಡಿದ್ದಾರೆ. ಆದರೆ ಡಿಸೇಲ್‌ ಸಮಸ್ಯೆ ತಲೆದೋರಿದಾಗ ಕೆಲಸ ಸ್ಥಗಿತಗೊಳ್ಳುತ್ತದೆ. ಉಪ ನೋಂದಣಿ ಕಚೇರಿಯಲ್ಲಿ ಹೊಸ ಟೆಂಡರ್‌ ಕರೆಯಬೇಕಿದೆ. ಆ ಟೆಂಡರ್‌ ಕರೆಯದೇ ಇರುವುದರಿಂದ ಕಚೇರಿಯಲ್ಲಿ ಸುಟ್ಟು ಹೋದ ಬ್ಯಾಟರಿ ಬದಲಿಸಿ, ಕನೆಕ್ಷನ್‌  ಕೊಡಲು ಸಾಧ್ಯವಾಗಿಲ್ಲ. ಟೆಂಡರ್‌ ಕರೆದರೆ ಈ ಸಮಸ್ಯೆ ಬಗೆಹರಿಯಲಿದೆ ಎಂಬುದು ಅಧಿಕಾರಿಗಳ ಮಾತು.

ಪುರಸಭೆಯಲ್ಲೂ ಇಲ್ಲ ಯುಪಿಎಸ್‌: ಪಟ್ಟಣದ ಎಲ್ಲ ಜನರ ಮುಖ್ಯ ಸೇವೆಗಳು ಸಿಗುವುದೇ ಪುರಸಭೆಯಲ್ಲಿ. ಆದರೆ, ಇಲ್ಲಿ ಸರಿಯಾದ ಯುಪಿಎಸ್‌ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯುತ್‌ ಕೈ ಕೊಟ್ಟಾಗ ಜನರಿಗೆ ನಿತ್ಯ ನೀಡುವ ಸೇವೆಗಳಿಗೆ ತೊಂದರೆಯಾಗುತ್ತಿದೆ. ಪುರಸಭೆಯಲ್ಲಿ ಕಿರಿಯ ಅಭಿಯಂತರರ ವಿಭಾಗಕ್ಕೆ ಬ್ಯಾಟರಿಯಿದೆ. ಅಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಜನನ-ಮರಣ, ನೀರಿನ ಕರ ಸೇರಿದಂತೆ ಆನ್‌ಲೈನ್‌ ಸಂಬಂಧಿ ಕೆಲಸಗಳ ವಿಭಾಗಕ್ಕೆ ಯುಪಿಎಸ್‌ ಇಲ್ಲ. ಇದರಿಂದ ಕರೆಂಟ್‌ ಹೋದಾಗ ಕೆಲಸಗಳು ಸ್ಥಗಿತಗೊಳ್ಳುತ್ತಿವೆ. ಎಲ್ಲವೂ ಕಂಪ್ಯೂಟರೀಕರಣ ಗೊಂಡಿರುವುದರಿಂದ ವಿದ್ಯುತ್‌ ಅವಶ್ಯವಿದ್ದು, ಕಚೇರಿಗೆ ಹೆಚ್ಚಿನ ಸಾಮರ್ಥ್ಯದ ಬ್ಯಾಟರಿ ಅಳವಡಿಸಿದರೆ ಸೇವೆ ನೀಡುವಲ್ಲಿ ಯಾವುದೇ ತೊಂದರೆಯಾಗಲ್ಲ ಎಂಬುದು ಸಾರ್ವಜನಿಕರ ಮಾತು.

ಯಾವ್ಯಾವ ಸೇವೆಗಳಿಗೆ ತೊಂದರೆ: ತಹಶೀಲ್ದಾರ್‌ ಕಚೇರಿಯಲ್ಲಿ ಕರೆಂಟ್‌ ಹೋದರೆ ಅಟಲ್‌ಜಿ ಜನಸ್ನೇಹಿ ಕೇಂದ್ರದಲ್ಲಿ ಜಾತಿ ಆದಾಯ, ವಾರಸಾ ಸೇರಿದಂತೆ ಸಾಮಾಜಿಕ ಭದ್ರತಾ ಸೇವೆಗಳು ಅಷ್ಟೇ ಅಲ್ಲದೇ ಕಚೇರಿ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಪುರಸಭೆಯಲ್ಲಿ ಜನನ, ಮರಣ, ನೀರಿನ ಕರ ಸೇರಿದಂತೆ ಆನ್‌ಲೈನ್‌ ಸೇವೆಗಳು, ಕಚೇರಿ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಉಪನೋಂದಣಿ ಕಚೇರಿಯಲ್ಲಿ ಭೂ ಖರೀದಿ, ವಾಟ್ನಿ, ಭೋಜಾ, ಖರೀದಿ ಕರಾರು ಪತ್ರ ಸೇರಿದಂತೆ ಇನ್ನಿತರ ಸೇವೆ ಸ್ಥಗಿತಗೊಳ್ಳಲಿವೆ.

ಭೂಮಿ ಕೇಂದ್ರ ಹಾಗೂ ಅಟಲ್‌ಜಿ ಜನಸ್ನೇಹಿ ಕೇಂದ್ರಕ್ಕೆ ತೊಂದರೆಯಾಗಬಾರದೆಂದು ಸೋಲಾರ್‌ ಕನೆಕ್ಷನ್‌ ಕೊಡಲಾಗುತ್ತಿದೆ. ವಾರದಲ್ಲಿ ವಿದ್ಯುತ್‌ ಸಮಸ್ಯೆಬಗೆಹರಿಯಲಿದ್ದು, ಕಂಪ್ಯೂಟರ್‌ ಆಪರೇಟರ್‌ ಬೇರೆ ಕಡೆ ನಿಯೋಜಿಸಿರುವುದರಿಂದ ಆಧಾರ್‌ ಸ್ಥಗಿತಗೊಂಡಿದ್ದು, 15 ದಿನಗಳಲ್ಲಿ ಆಧಾರ್‌ ಕಾರ್ಡ್‌ ಕೇಂದ್ರ ಸಹ ಆರಂಭಗೊಳ್ಳಲಿದೆ.  –ಜಿ.ಎಂ. ಕುಲಕರ್ಣಿ, ತಹಶೀಲ್ದಾರ್‌, ಗುಳೇದಗುಡ್ಡ

 ನಮ್ಮ ಕಚೇರಿಯಲ್ಲಿ ಬ್ಯಾಟರಿ ದುರಸ್ತಿಯಲ್ಲಿದೆ. ಇದರಿಂದ ವಿದ್ಯುತ್‌ ಸಮಸ್ಯೆ ಉಂಟಾಗಿದೆ. ಸರಕಾರ ಟೆಂಡರ್‌ ಕರೆದರೆ ಹೊಸ ಬ್ಯಾಟರಿ ಅಳವಡಿಸಲಾಗುತ್ತದೆ. ಎಸ್‌.ವೈ. ಕಾಮರಡ್ಡಿ,ಉಪನೋಂದಣಾಧಿಕಾರಿ

 

-ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.