ಗಾಯಗೊಂಡಿದ್ದ ಯೋಧ ಸಾವು

•ಸೊಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ವೆಂಕಟೇಶ ಬೆನಕಟ್ಟಿ

Team Udayavani, May 19, 2019, 11:10 AM IST

bagalkote-tdy-4..

ಬೀಳಗಿ: ಮೃತ ಯೋಧನಿಗೆ ಸರಕಾರಿ ಗೌರವ ಸಲ್ಲಿಸಲಾಯಿತು.

ಬೀಳಗಿ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಾಲೂಕಿನ ಅರಕೇರಿ ಗ್ರಾಮದ ಯೋಧ ವೆಂಕಟೇಶ ಅಪ್ಪಶಿ ಬೆನಕಟ್ಟಿ (31) ಶನಿವಾರ ನಿಧನರಾದರು.

ಸಿಐಎಸ್‌ಎಫ್‌ನಲ್ಲಿ ಸೇವೆಗೆ ಸೇರಿದ್ದ ಯೋಧ ವೆಂಕಟೇಶ, ಪ್ರಸ್ತುತ ಜಾರ್ಖಂಡ ರಾಜ್ಯದ ಸಿಂಗ್ರೋಣಿಯ ಎಸ್‌ಸಿಸಿಎಲ್ ಯುನಿಟ್ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ನಾಲ್ಕು ತಿಂಗಳು ಜೀವನ್ಮರಣದ ಜತೆಗೆ ಹೋರಾಟ: ಕಳೆದ 10 ವರ್ಷಗಳಿಂದ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ, ಪತ್ನಿಯ ಸೀಮಂತ ಕಾರ್ಯಕ್ರಮಕ್ಕೆಂದು 2018 ಡಿಸೆಂಬರ್‌ 24ರಂದು ರಜೆಯ ಮೇಲೆ ಸ್ವ-ಗ್ರಾಮಕ್ಕೆ ಬಂದಿದ್ದರು. ಪತ್ನಿಯ ಸೀಮಂತ ಕಾರ್ಯಕ್ರದಲ್ಲಿ ಭಾಗವಹಿಸಿ ಕುಟುಂಬ ಸದಸ್ಯರೊಂದಿಗೆ ಸಂಭ್ರಮಿಸಿದ್ದರು. ಸೀಮಂತ ಕಾರ್ಯಕ್ರಮದ ಬಳಿಕ ಹಲಗಲಿಗೆ ಹೋಗಿ ಬರುವ ಸಂದರ್ಭದಲ್ಲಿ ಹಲಗಲಿ ಮತ್ತು ಅರಕೇರಿ ರಸ್ತೆ ಮಧ್ಯದಲ್ಲಿ ಜರುಗಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬಾಗಲಕೋಟೆಯಲ್ಲಿ ಕೆಲದಿನ ಚಿಕಿತ್ಸೆ ಕೊಡಿಸಿದರು. ಅಲ್ಲಿ ಗುಣಮುಖರಾಗದೇ ಇರುವುದರಿಂದ ಮಹಾರಾಷ್ಟ್ರ ರಾಜ್ಯದ ಸೋಲಾಪುರದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ನಾಲ್ಕು ತಿಂಗಳು ಜೀವನ್ಮರಣದ ಜೊತೆಗೆ ಹೋರಾಟ ನಡೆಸಿದ್ದ ಅವರು ಗುಣಮುಖರಾಗಿ ಮನೆಗೆ ಬಂದಿದ್ದರು.

ದಿಢೀರ್‌ ಅಸ್ವಸ್ಥರಾದ ಯೋಧ: ಕುಟುಂಬ ಸದಸ್ಯರೊಂದಿಗೆ ಖುಷಿಯಾಗಿದ್ದ ಯೋಧ ವೆಂಕಟೇಶ, ಶುಕ್ರವಾರ ದಿಢೀರ್‌ ಅಸ್ವಸ್ಥರಾಗಿದ್ದರು. ಮತ್ತೆ ಸೊಲಾಪುರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ವೆಂಕಟೇಶ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು. ಮೃತ ಯೋಧ ವೆಂಕಟೇಶಪತ್ನಿ, ಮೂರು ತಿಂಗಳ ಪುತ್ರ, ತಾಯಿ, ತಂದೆ, ಸಹೋದರ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಸಂಬಂಧಿಕರ ಆಕ್ರಂದನ: ಮೃತ ಯೋಧನ ಪಾರ್ಥಿವ ಶರೀರ ಶನಿವಾರ 12 ಗಂಟೆಗೆ ಸ್ವ- ಗ್ರಾಮಕ್ಕೆ ಆಗಮಿಸಿತು. ಯೋಧನ ಪತ್ನಿ ಶ್ವೇತಾ, ತಾಯಿ ಸುವರ್ಣಾ ಸೇರಿದಂತೆ ಕುಟುಂಬದ ಸದಸ್ಯರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸಹಸ್ರಾರು ಜನರ ಅಶ್ರುತರ್ಪಣದ ನಡುವೆ ಗ್ರಾಮದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಜರುಗಿತು.

ಶ್ರದ್ಧಾಂಜಲಿ ಸಭೆ: ಮಾರುತೇಶ್ವರ ದೇವಾಲಯದ ಮುಂದೆ ಜರುಗಿದ ಶ್ರದ್ಧಾಂಜಲಿ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌.ಆರ್‌.ಪಾಟೀಲ, ಹನುಮಂತ ನಿರಾಣಿ ಮಾತನಾಡಿ, ಯೋಧರು ಭಾರತಾಂಬೆಯ ಸೇವೆಯಲ್ಲಿರುವುದರಿಂದ ದೇಶ ಸುರಕ್ಷಿತವಾಗಿದೆ. ಆದ್ದರಿಂದ ಯೋಧರನ್ನು ಮತ್ತು ಅವರ ಕುಟುಂಬ ವರ್ಗವನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು. ಅಗಲಿದ ಯೋಧನ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬದ ಸದಸ್ಯರಿಗೆ ಅಗಲಿಕೆಯ ನೋವು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸಿದರು.

ಮುರನಾಳದ ಮಳೆರಾಜೇಂದ್ರ ಶ್ರೀ, ಗ್ರಾಪಂ ಅಧ್ಯಕ್ಷೆ ಶಾಂತಾ ಕಾಜಗಾರ, ತಾಪಂ ಸದಸ್ಯ ದ್ಯಾವನಗೌಡ ಪಾಟೀಲ, ತಹಶೀಲ್ದಾರ್‌ ಅಮರೇಶ ಬಿರಾದಾರ, ಸಿಪಿಐ ರವಿಚಂದ್ರ ಡಿ.ಬಿ., ಕೃಷ್ಣಗೌಡ ಪಾಟೀಲ, ಸಿದ್ದಣ್ಣ ದೇಸಾಯಿ, ಕಂದಾಯ ನಿರೀಕ್ಷಕ ಎಂ.ಕೆ. ಹಿರೇಮಠ, ಗ್ರಾಮಲೆಕ್ಕಾಧಿಕಾರಿ ಎಂ.ಎ. ಧರಿಗೊಂಡ, ಪಿಡಿಒ ಶಿವಾನಂದ ಕೋಟೆನ್ನವರ ಸೇರಿ‌ದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಕೂಡಗಿ ಎನ್‌ಟಿಪಿಸಿ ಘಟಕದ ಸಿಐಎಸ್‌ಎಫ್‌ನ ಇನ್ಸ್‌ಫೆಕ್ಟರ್‌ ಜಿ.ಡಿ.ರಾವ್‌, ಹವಾಲ್ದಾರ ಶಿವಪುತ್ರ ಅಂತಿಮ ನಮನ ಸಲ್ಲಿಸಿದ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಕೂಡಗಿಯ ಸಿಐಎಸ್‌ಎಫ್‌ನ ಯೋಧರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು. ನಂತರ, ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಯಿತು.

ಟಾಪ್ ನ್ಯೂಸ್

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.