12 ಸಾವಿರ ಜನರಿಗೆ ಒಬ್ಬರೂ ಇಲ್ಲ ವೈದ್ಯರು


Team Udayavani, Dec 13, 2019, 5:17 PM IST

bk-tdy-1

ಅಮೀನಗಡ: ಗ್ರಾಮೀಣ ಪ್ರದೇಶದಲ್ಲಿರುವ ಸುಮಾರು 5 ಉಪಕೇಂದ್ರಗಳ ಸಾರ್ವಜನಿಕರಿಗೆ ಉಪಯುಕ್ತವಾದ ಆರೋಗ್ಯ ಸೇವೆ ಒದಗಿಸುವ ಗುಡೂರ(ಎಸ್‌.ಸಿ) ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮರ್ಪಕವಾಗಿ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಾಗಿದೆ.

ಹೌದು, ಜಿಪಂ ಮತಕ್ಷೇತ್ರದ ಕೇಂದ್ರ ಸ್ಥಾನ ಹೊಂದಿರುವ ಸುತ್ತಲಿನ ವಿವಿಧ ಗ್ರಾಮಗಳ ವಾಣಿಜ್ಯ ಕೇಂದ್ರ ಗುಡೂರ (ಎಸ್‌.ಸಿ) ಗ್ರಾಮದಲ್ಲಿ ಸುಸಜ್ಜಿತ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಇದೆ. ಆದರೆ, ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ಕಳೆದ 9 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ.

ಇಳಕಲ್ಲ ತಾಲೂಕಿನ ಗುಡೂರ (ಎಸ್‌.ಸಿ) ಗ್ರಾಮವು 2011ರ ಜನಗಣತಿ ಪ್ರಕಾರ 11969 ಸಾವಿರ ಜನಸಂಖ್ಯೆ ಹೊಂದಿದೆ. 3223ಕ್ಕೂ ಹೆಚ್ಚು ಮನೆಗಳಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 5 ಉಪಕೇಂದ್ರಗಳ ಸುಮಾರು 8 ಹಳ್ಳಿಗಳನ್ನು ಸೇರ್ಪಡೆ ಮಾಡಲಾಗಿದೆ. ಆದರೆ, ಗುಡೂರ ಸೇರಿದಂತೆ 5 ಉಪಕೇಂದ್ರಗಳ ರೋಗಿಗಳ ಕಾಯಿಲೆ ಗುಣಪಡಿಸಲು ವೈದ್ಯರಿಲ್ಲ. ಇದರಿಂದ ನಾನಾ ಕಾಯಿಲೆಗಳು ಬಂದಿರುವ ರೋಗಿಗಳು ಪರದಾಡಬೇಕಾಗಿದ್ದು, ಚಿಕಿತ್ಸೆಗಾಗಿ ಪರ ಊರನ್ನು ಆಶ್ರಯಿಸಬೇಕಾಗಿದೆ. ಸುಮಾರು 9 ವರ್ಷಗಳಿಂದ ಖಾಯಂ ವೈದ್ಯರಿಲ್ಲ, ತಾತ್ಕಾಲಿಕವಾಗಿರುವ ವೈದ್ಯರು ಕೂಡಾ ಸರಿಯಾಗಿ ಬರುತ್ತಿಲ್ಲ ಹಾಗೂ ಸಿಬ್ಬಂದಿಗಳ ಕೊರತೆಯಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಸೌಲಭ್ಯಗಳ ಮರೀಚಿಕೆ: ಆಸ್ಪತ್ರೆಯಲ್ಲಿ ರೋಗಿಗಳಿಗೆ ಮೂಲಸೌಲಭ್ಯಗಳ ಕೊರತೆಯಿದೆ. ಹೆರಿಗೆ ಮಾಡಿಸಲು ಕೂಡಾ ಅಗತ್ಯ ವೈದ್ಯ, ಸಿಬ್ಬಂದಿ,ಔಷಧೋಪಚಾರಗಳಿಲ್ಲದೆ ಮಹಿಳೆಯರು ಸಮಸ್ಯೆ ಎದುರಿಸುವಂತಾಗಿದೆ. ಬಂದ ರೋಗಿಗಳಿಗೆ ಕುಡಿಯಲು ನೀರಿಲ್ಲ, ಸೌಲಭ್ಯಗಳು ಇಲ್ಲ, ಇದ್ದ ಸಿಬ್ಬಂದಿಗಳು ಕೂಡಾ ಸರಿಯಾಗಿ ಸ್ಪಂದಿಸುತ್ತಿಲ್ಲ. ರೋಗಿಗಳಿಗೆ ಕನಿಷ್ಠ ಸೌಲಭ್ಯಗಳು ಇಲ್ಲ. ಹೀಗಾಗಿ ಹುನಗುಂದ ಪಟ್ಟಣಕ್ಕೆ ಹೋಗಿ ವೈದ್ಯರು ಬರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಹೇಳುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಎರಡು ದಿನದ ವೈದ್ಯರು: ಪಟ್ಟದಕಲ್ಲ ಮತ್ತು ಬೇವೂರ ಪ್ರಾಥಮೀಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯನ್ನು ವಾರದ ಎರಡು ದಿನ ಮಂಗಳವಾರ ಮತ್ತು ಶುಕ್ರವಾರ ಎರವಲು ಸೇವೆಗಾಗಿ ಗುಡೂರ ಗ್ರಾಮಕ್ಕೆ ನಿಯೋಜಿಸಿದ್ದಾರೆ. ಆದರೆ, ಆ ಎರಡು ದಿನಗಳಲ್ಲಿ ಕೂಡಾ ವೈದ್ಯರು ಬರುತ್ತಾರೆ ಎಂಬುದು ಜನರಿಗೆ ವಿಶ್ವಾಸವೇ ಇಲ್ಲ. ಉಳಿದ ದಿನಗಳಲ್ಲಿ ವೈದ್ಯರಿಲ್ಲದಿರುವುದರಿಂದ ರೋಗಿಗಳು ಹುನಗುಂದ, ಇಳಕಲ್ಲಗೆ ಚಿಕಿತ್ಸೆಗಾಗಿ ಅಲೆದಾಡುವಂತಾಗಿದೆ. ನೂರಾರು ರೂಪಾಯಿ ಖರ್ಚು ಮಾಡಿ ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತಾಗಿದೆ.

ನಿರುಪಯುಕ್ತ ಕೇಂದ್ರ: ವೈದ್ಯರ ಕೊರತೆಯಿಂದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗರ್ಭಿಣಿಯರಿಗೆ ಬರುವ ಸಹಾಯ ಧನಕ್ಕೆ ಹಾಗೂ ಇತರ ಪ್ರಮಾಣ ಪತ್ರಗಳಿಗೆ ಜನರು ಪರದಾಡುವವಂತಾಗಿದೆ. ಸುಸಜ್ಜಿತ ಕಟ್ಟಡ ಸೌಲಭ್ಯ ಇದ್ದರೂ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರವೂ ನಿರುಪಯುಕ್ತವಾಗಿದೆ ಎನ್ನಲಾಗಿದೆ.

ಗ್ರಾಮಸ್ಥರ ಒತ್ತಾಯ: ಗುಡೂರ(ಎಸ್‌.ಸಿ) ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಒದಗಿಸುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಅಗತ್ಯ ವೈದ್ಯರು ಸೇರಿದಂತೆ ಸಿಬ್ಬಂದಿ ನೇಮಿಸಬೇಕು ಮತ್ತು ಆಸ್ಪತ್ರೆಯಲ್ಲಿ ಮೂಲಸೌಲಭ್ಯ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

-ಎಚ್‌.ಎಚ್‌. ಬೇಪಾರಿ

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.