ಸುಸಜ್ಜಿತ ಕೊಠಡಿಗಳಿವೆ, ಬಳಸಿಕೊಳ್ಳುವವರೇ ಇಲ್ಲ!

ಕೊಠಡಿಗಳ ಜತೆಯಲ್ಲಿ ಆಟದ ಮೈದಾನದ ಕೊರತೆಯೂ ಕಾಡುತ್ತಿರುತ್ತದೆ.

Team Udayavani, Dec 17, 2021, 5:35 PM IST

ಸುಸಜ್ಜಿತ ಕೊಠಡಿಗಳಿವೆ, ಬಳಸಿಕೊಳ್ಳುವವರೇ ಇಲ್ಲ!

ಮುಧೋಳ: ನಗರಕ್ಕೆ ಹೊಂದಿಕೊಂಡಿರುವ ಗುಡದಿನ್ನಿ ಪುನರ್ವಸತಿ ಕೇಂದ್ರದಲ್ಲಿರುವ ಬಾಪೂಜಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಕೊಠಡಿಗಳು ಸುಸಜ್ಜಿತ ರೀತಿಯಲ್ಲಿದ್ದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಶಾಲೆ ಅನೈತಿಕ ಚಟುವಟಿಕೆ ತಾಣವಾಗಿ ಪರಿಣಮಿಸಿವೆ. ಪುನರ್ವಸತಿ ಕೇಂದ್ರದಿಂದ ಶಿಕ್ಷಣ ಇಲಾಖೆಗೆ ಹಸ್ತಾಂತರಗೊಳ್ಳದ ಕಾರಣ ಕಟ್ಟಡ ಸೂಕ್ತ ನಿರ್ವಹಣೆಗೆ ಸಾಧ್ಯವಾಗಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ಈ ಕಟ್ಟಡದಲ್ಲಿ ಹಲವು ವರ್ಷಗಳ ಹಿಂದೆ ಖಾಸಗಿಯವರು ಶಿಕ್ಷಣ ಸಂಸ್ಥೆ ನಡೆಸುವುದರ ಮೂಲಕ ಮಕ್ಕಳಿಗೆ ವಿದ್ಯಾರ್ಜನೆ ಮಾಡುತ್ತಿದ್ದರು. ಆಗ ಶಾಲೆ ಸೂಕ್ತ ರೀತಿಯಲ್ಲಿ ಬಳಕೆಯಾಗುತ್ತಿತ್ತು. ಬಳಿಕಖಾಸಗಿಯವರು ತಮ್ಮ ಸ್ವಂತ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಿದ ಬಳಿಕ ಈ ಶಾಲೆಗೆ ಅನಾಥಪ್ರಜ್ಞೆ ಕಾಡುತ್ತಿದೆ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಶಾಲಾ ಕಟ್ಟಡವನ್ನು ಬಳಸಿಕೊಂಡರೆ ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿದೆ.

ವಿಶಾಲ ಆಟದ ಮೈದಾನ: ಎಷ್ಟೋ ಶಾಲೆಗಳಿಗೆ ಕೊಠಡಿಗಳ ಜತೆಯಲ್ಲಿ ಆಟದ ಮೈದಾನದ ಕೊರತೆಯೂ ಕಾಡುತ್ತಿರುತ್ತದೆ. ಇದರಿಂದ ಮಕ್ಕಳ ಆಟೋಟಕ್ಕೆ ಹೆಚ್ಚು ಅಡೆತಡೆಯುಂಟಾಗುತ್ತಿರುತ್ತದೆ. ಆದರೆಈಶಾಲೆಗೆ ವಿಶಾಲವಾದ ಆಟದ ಮೈದಾನದೊಂದಿಗೆ ಸುತ್ತಲೂ ಕಾಂಪೌಂಡ್‌ನ‌ ಇದೆ. ಇಂತಹ ವಾತಾವರಣದಲ್ಲಿ ಮಕ್ಕಳ ದೈಹಿಕ ಶಿಕ್ಷಣಕ್ಕೂ ಹೆಚ್ಚು ಅನುಕೂಲವಾಗಲಿದೆ.

ನೀರಿಗಾಗಿ ಶಾಲೆ ಆವರಣದಲ್ಲಿಯೇ ಎರಡು ಟ್ಯಾಂಕ್‌ ಗಳಿವೆ. ಮೂಲಸೌಲಭ್ಯ ಹೊಂದಿರುವಈಕಟ್ಟಡವನ್ನು ಇನ್ನಾದರೂ ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ.
ಅನೈತಿಕ ಚಟುವಟಿಕೆಯ ತಾಣ: ಸದ್ಯ ಸುಸಜ್ಜಿತ ಕಟ್ಟಡವಿದ್ದರೂ ಸಹ ಸೂಕ್ತ ರಕ್ಷಣೆಯಿಲ್ಲ. ಇದರಿಂದಾಗಿ ಶಾಲಾ ಆವರಣದಲ್ಲಿ ಕುಡುಕರು, ಪುಂಡಪೋಕರಿಗಳ ಹಾವಳಿ ಹೆಚ್ಚಾಗಿದೆ. ಸಂಜೆಯಾದರೆ ಶಾಲಾ ಆವರಣ ಅನೈತಿಕ ಚಟುವಟಿಕೆ ತಾಣವನ್ನಾಗಿಸಿಕೊಂಡಿದ್ದಾರೆ.

ಶಾಲೆ ಸುಪರ್ದಿಗೆ-ಭರವಸೆ: ಅಲ್ಲಿನ ಶಾಲೆ ಸುಸಜ್ಜಿತವಾಗಿದ್ದು, ನಮ್ಮ ಗಮನಕ್ಕೆ ಬಂದಿಲ್ಲ. ಇನ್ನು ಮುಂದೆ ಶಾಲೆಯನ್ನು ನಮ್ಮ ಇಲಾಖೆಯಡಿ ಸೇರಿಸಿಕೊಳ್ಳಲು ಪ್ರಯತ್ನಿಸಿ ಕಟ್ಟಡವನ್ನು ಸೂಕ್ತ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳುತ್ತೇವೆ ಎನ್ನುತ್ತಾರೆ ಶಿಕ್ಷಣ ಇಲಾಖೆ ಅಧಿಕಾರಿಗಳು.

ನಾನು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ್ದೇನೆ. ಶಾಲೆಯ ಬಗ್ಗೆ ಪರಿಶೀಲಿಸಿ ಶೀಘ್ರಕ್ರಮ ಕೈಗೊಳ್ಳುತ್ತೇನೆ.
ಎ.ಕೆ. ಬಸಣ್ಣವರ,ಕ್ಷೇತ್ರ
ಶಿಕ್ಷಣಾಧಿಕಾರಿ, ಮುಧೋಳ

ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.