
ಲೋಕ ಅದಾಲತ್ ಬಗ್ಗೆ ಕಕ್ಷಿದಾರರಲ್ಲಿ ತಿಳುವಳಿಕೆ ಅಗತ್ಯ: ಸಿವಿಲ್ ನ್ಯಾಯಾಧೀಶ ಕಿರಣ ಕುಮಾರ
Team Udayavani, Nov 13, 2022, 9:42 AM IST

ರಬಕವಿ-ಬನಹಟ್ಟಿ: ನ್ಯಾಯಾಲಯಗಳಲ್ಲಿ ನಡೆಯುವ ಲೋಕ ಅದಾಲತ್ ಗಳ ಬಗ್ಗೆ ಕಕ್ಷಿದಾರರಲ್ಲಿ ತಿಳುವಳಿಕೆ ಅಗತ್ಯವಾಗಿದೆ. ಲೋಕ ಅದಾಲತ್ ಮೂಲಕ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದರಿಂದದ ಕಕ್ಷಿದಾರರಲ್ಲಿ ಸಾಮರಸ್ಯ ಉಂಟಾಗುತ್ತದೆ ಎಂದು ಸ್ಥಳೀಯ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.
ಅವರು ಶನಿವಾರ ಸ್ಥಳೀಯ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅದಾಲತ್ ಗಳು ಯಶಸ್ವಿಯಾಗಬೇಕಾದರೆ ವಕೀಲರ ಮತ್ತು ಕಕ್ಷಿದಾರರ ಸಹಕಾರ ಮುಖ್ಯವಾಗಿರುತ್ತದೆ. ಲೋಕ ಅದಾಲತ ಮೂಲಕ ವ್ಯಾಜ್ಯಗಳನ್ನು ಪರಿಹರಿಸಿಕೊಂಡರೆ ಕಕ್ಷಿದಾರರಿಗೆ ಬಹಳಷ್ಟು ಅನುಕೂಲವಾಗುತ್ತದೆ ಎಂದರು.
ಹಿರಿಯ ಶ್ರೇಣಿಯ ನ್ಯಾಯಾಲಯದಲ್ಲಿ 91 ಪ್ರಕರಣಗಳು ಇತ್ಯರ್ಥವಾದವು ಮತ್ತು ಇದರಲ್ಲಿ ರೂ. 1,30,31,705 ಪರಿಹಾರವನ್ನು ನೀಡಲಾಯಿತು. ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಲಯದಲ್ಲಿ 93 ಪ್ರಕರಣಗಳು ಇತ್ಯರ್ಥವಾಗಿದ್ದು, ರೂ.92,20,145 ಪರಿಹಾರ ಧನ ನೀಡಲಾಯಿತು ಎಂದು ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.
ಈ ಸಂದರ್ಭದಲ್ಲಿ ವರ್ಧಮಾನ ಕೋರಿ, ಸುಜಾತಾ ನಡೋಣಿ, ಎಂ.ಜಿ.ಕೆರೂರ, ಮುಕುಂದ ಕೋಪರ್ಡೆ, ಅರವಿಂದ ವ್ಯಾಸ್, ಕೆ.ಡಿ.ತುಬಚಿ, ಸುರೇಶ ಗೊಳಸಂಗಿ, ಚನ್ನು ಮಾಲಾಪುರ, ಶಶಿಧರ ಮೋಪಗಾರ, ಬಾಲಚಂದ್ರ ಕಾರ್ವೇಕರ, ಗುರು ಪಟ್ಟಣ, ಮಹಾಂತೇಶ ಪದಮಗೊಂಡ, ಬಸವರಾಜ ಭೂತಿ ಸೇರಿದಂತೆ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

ಐಸಿಸಿ ಏಕದಿನ ರ್ಯಾಂಕಿಂಗ್ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು