ಪುನರ್ವಸತಿ ಕೇಂದ್ರದ ಜನರಿಗಿಲ್ಲ ಸೌಲಭ್ಯ

•ಅನುದಾನ ಕೊಟ್ಟರೂ ಅಧಿಕಾರಿಗಳ ಬೇಜವಾಬ್ದಾರಿ•4.95 ಕೋಟಿ ವೆಚ್ಚದ ಕಾಮಗಾರಿ ಬಾರಾ ಕಮಾನ್‌ ಆಯ್ತು

Team Udayavani, Jul 22, 2019, 10:01 AM IST

bk-tdy-1

ಬಾಗಲಕೋಟೆ: ಇಲ್ಲಿರುವವರೆಲ್ಲ ನೀರಾವರಿಗಾಗಿ ತ್ಯಾಗ ಮಾಡಿದವರು. ಮನೆ, ಭೂಮಿ ಕಳೆದುಕೊಂಡು ಪುನರ್‌ವಸತಿ ಎಂಬ ಸೌಲಭ್ಯ ವಂಚಿತ ನೆಲದಲ್ಲಿ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವವರು. ಇವರಿಗಾಗಿ ನಾಗರಿಕ ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರದ ಅನುದಾನ ಕೊಟ್ಟರೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಆ ಅನುದಾನ ಕೊಟ್ಟು ಕಾಮಗಾರಿ ನಡೆಸುವ ಪ್ರಸಂಗವೂ ಬರ್ಬಾದ್‌ ಆಗುವಂತೆ ಮಾಡಿದೆ ಎನ್ನುತ್ತಾರೆ ಇಲ್ಲಿನ ಜನರು.

ಹೌದು, ಬಾಗಲಕೋಟೆ ತಾಲೂಕಿನ ರಾಂಪುರ ಪುನರ್‌ವಸತಿ ಕೇಂದ್ರದಲ್ಲಿ ಸುಮಾರು 3500ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ರಾಂಪುರ, ಆಲೂರ, ಮಾಸ್ತಿಹಾಳ ಹಾಗೂ ಸೀತಿಮನಿ ಗ್ರಾಮಗಳನ್ನು ಜನರಿಗೆ ಪುನರ್‌ವಸತಿ ಕಲ್ಪಿಸಲು ರಾಂಪುರ ಪುನರ್‌ವಸತಿ ಕೇಂದ್ರ ನಿರ್ಮಿಸಲಾಗಿದೆ.

ಸುಮಾರು 12 ವರ್ಷಗಳ ಹಿಂದೆಯೇ ಜನರು ಇಲ್ಲಿ ಬಂದು ವಾಸಿಸುತ್ತಿದ್ದರೂ ಅವರಿಗೆ ಸೂಕ್ತ ಮೂಲಭೂತ ಸೌಲಭ್ಯಗಳಿರಲಿಲ್ಲ. ಕಳೆದ 2016ರಲ್ಲಿ ಸರ್ಕಾರ, ಪುನರ್‌ವಸತಿ ಕೇಂದ್ರಗಳಲ್ಲಿ ಚರಂಡಿ, ರಸ್ತೆ, ಕುಡಿಯುವ ನೀರು ಸಹಿತ ಇತರೆ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಕಲ್ಪಿಸಲು ಒಟ್ಟಾರೆ 136 ಪುನರ್‌ವಸತಿ ಕೇಂದ್ರಗಳಿಗೆ 192 ಕೋಟಿ ಅನುದಾನ ನೀಡಿದ್ದು, ಅದರಲ್ಲಿ ರಾಂಪುರ ಪುನರ್ವಸತಿ ಕೇಂದ್ರಕ್ಕೆ 4.95 ಕೋಟಿ ಅನುದಾನ ಕಲ್ಪಿಸಲಾಗಿದೆ.

ಮುಗಿದ 9 ತಿಂಗಳ ಕಾಲಾವಧಿ: ಯುಕೆಪಿ ಕಚೇರಿಯಿಂದ 192 ಕೋಟಿ ಅನುದಾನವೂ ಜಿಪಂಗೆ ಹಸ್ತಾಂತರಿಸಿದ್ದು, ಜಿಪಂ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಿಂದ ರಾಂಪುರ ಪುನರ್‌ವಸತಿ ಕೇಂದ್ರಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಲು 4.95 ಕೋಟಿ ವೆಚ್ಚದಲ್ಲಿ ಎರಡು ಪ್ಯಾಕೇಜ್‌ ರೂಪದಲ್ಲಿ ಕಾಮಗಾರಿ ವಿಂಗಡಣೆ ಮಾಡಿದ್ದು, ಚರಂಡಿ, ರಸ್ತೆ ನಿರ್ಮಾಣ, ಕಚ್ಚಾ ರಸ್ತೆಗಳ ಖಡೀಕರಣ, ಈ ಹಿಂದೆ ನಿರ್ಮಿಸಿದ್ದ ರಸ್ತೆಗಳ ಡಾಂಬರೀಕರಣ ಹೀಗೆ ವಿವಿಧ ಕಾಮಗಾರಿಗಳನ್ನು ಎರಡು ಪ್ಯಾಕೇಜ್‌ನಡಿ ಕೈಗೆತ್ತಿಕೊಂಡಿದ್ದು, ಒಂದು ಪ್ಯಾಕೇಜ್‌ ವಿಜಯಪುರದ ವೀರನಗೌಡ ಎಂಬುವವರಿಗೆ ಹಾಗೂ ಇನ್ನೊಂದು ಪ್ಯಾಕೇಜ್‌ ಬಾಗಲಕೋಟೆಯ ಆರ್‌.ಪಿ. ರಾಠೊಡ ಎಂಬುವವರು ಗುತ್ತಿಗೆ ಪಡೆದಿದ್ದಾರೆ.

ಗುತ್ತಿಗೆಯನ್ನು 2017ರಲ್ಲೇ ಕರೆದಿದ್ದು, ಕಾಮಗಾರಿಗೆ ಆದೇಶವೂ ಕೊಡಲಾಗಿತ್ತು. ಈ ಕಾಮಗಾರಿ ಪೂರ್ಣಗೊಳಿಸಲು ಕೇವಲ 9 ತಿಂಗಳ ಕಾಲಾವಕಾಶ ಗುತ್ತಿಗೆದಾರರಿಗೆ ನೀಡಲಾಗಿತ್ತು. ಈಗ ಎರಡು ವರ್ಷಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಕೇವಲ ಚರಂಡಿ ಕಾಮಗಾರಿ ಕೈಗೊಂಡಿದ್ದು,ಅವು ಅವೈಜ್ಞಾನಿಕವಾಗಿವೆ. ಜನರು ತಮ್ಮ ಮನೆಗಳಿಗೆ ತೆರಳಲೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಇಲ್ಲಿನ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸುತ್ತಾರೆ.

ಬಾರಾ ಕಮಾನ್‌ ಆದವು ಕಾಮಗಾರಿ: 9 ತಿಂಗಳ ಕಾಲಾವಧಿ ಇದ್ದರೂ ಎರಡು ವರ್ಷದಿಂದ ಕಾಮಗಾರಿ ಪೂರ್ಣಗೊಳ್ಳದಿರಲು ಹಲವು ಕಾರಣಗಳಿವೆ ಎನ್ನುತ್ತಾರೆ ಜನ. ಕೃಷ್ಣಾ ಮೇಲ್ದಂಡೆ ಯೋಜನೆ ಕಚೇರಿಯಿಂದ ಹಣ ಪಿಆರ್‌ಇಡಿಗೆ ನೀಡಿದ್ದು, ಎರಡೂ ಇಲಾಖೆಗಳು ಜಂಟಿಯಾಗಿ ಕಾಮಗಾರಿ ಪರಿಶೀಲನೆ ಮಾಡಬೇಕು. 3ನೇ ವ್ಯಕ್ತಿ ತಪಾಸಣೆ ವರದಿ ಕೊಡಬೇಕು. ಆ ಬಳಿಕ ಜಿಪಂನಿಂದ ಗುತ್ತಿಗೆದಾರರಿಗೆ ಬಿಲ್ ಬಿಡುಗಡೆ ಆಗಬೇಕು. ಆದರೆ, ಈ ಯಾವ ಕೆಲಸವೂ ನಡೆದಿಲ್ಲ. ಕೆಲವು ಅಧಿಕಾರಿಗಳು ಕಚೇರಿಯಲ್ಲೇ ಕುಳಿತು ಕಾಮಗಾರಿ ಪರಿಶೀಲಿಸಿದ್ದಾರೆ. ಇನ್ನು 3ನೇ ವ್ಯಕ್ತಿ ಕೂಡ ಕಚೇರಿಯಲ್ಲಿ ಕುಳಿತು ಕಾಮಗಾರಿ ತೃಪ್ತಿದಾಯಕ ಎಂಬ ಪ್ರಮಾಣ ಪತ್ರ ಕೊಟ್ಟಿದ್ದಾರೆ. ಇಷ್ಟೆಲ್ಲ ಆದರೂ, ಗುತ್ತಿಗೆದಾರರಿಗೆ ಪೂರ್ಣ ಪ್ರಮಾಣದ ಬಿಲ್ ಪಾವತಿಯಾಗಿಲ್ಲ. ಹೀಗಾಗಿ ಗುತ್ತಿಗೆದಾರರು, ತಾವು ಕೈಗೊಳ್ಳುತ್ತಿದ್ದ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದಾರೆ. ಎಲ್ಲ ಕಾಮಗಾರಿಗಳು ಕೇವಲ ಶೇ. 50 ಆಗಿವೆ. ಇದರಿಂದ ನಾವೆಲ್ಲ ಸಮಸ್ಯೆ ಎದುರಿಸುವಂತಾಗಿದೆ ಎಂದು ಗ್ರಾಮದ ಪ್ರಮುಖರು ವಿವರಿಸುತ್ತಾರೆ.

ಉಪಗುತ್ತಿಗೆ ಪರಿಣಾಮ: ಇನ್ನು ಕಾಮಗಾರಿ ಅವೈಜ್ಞಾನಿಕ ಹಾಗೂ ಅಪೂರ್ಣಗೊಳ್ಳಲು ಉಪಗುತ್ತಿಗೆ ನೀಡುವ ಪರಂಪರೆ ಕೂಡ ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇಬ್ಬರೂ ಗುತ್ತಿಗೆದಾರರು ತಮಗೆ ಬೇಕಾದ ವ್ಯಕ್ತಿಗಳಿಗೆ ಉಪಗುತ್ತಿಗೆ ನೀಡಿ, ಕಾಮಗಾರಿ ಹೊಣೆ ವಹಿಸಿದ್ದಾರೆ. ಅವರೆಲ್ಲ ಸಣ್ಣ-ಪುಟ್ಟ ಕೆಲಸ ಮಾಡಿದವರಾಗಿದ್ದು, 4.95 ಕೋಟಿಯಷ್ಟು ಮುಂಗಡ ಹಣ ಹಾಕಿ ಕಾಮಗಾರಿ ಮಾಡುವವರಲ್ಲ. ಜಿಪಂನಿಂದ ಈಗ ಎಷ್ಟು ಬಿಲ್ ಬಿಡುಗಡೆಯಾಗಿದೆಯೋ ಅಷ್ಟೇ ಪ್ರಮಾಣದ ಕಾಮಗಾರಿ ಮಾಡಿದ್ದಾರೆ. ಕಾಮಗಾರಿ ಪೂರ್ಣಗೊಳಿಸಿ, ಬಿಲ್ ಪಡೆದಿಲ್ಲ ಎಂದು ಹೇಳಲಾಗಿದೆ.

ಬದುಕು ಅಯೋಮಯ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ಬದ್ಧತೆ ಇಲ್ಲದ ಪರಿಣಾಮ ರಾಂಪುರ ಪುನರ್‌ವಸತಿ ಕೇಂದ್ರದ ಜನರ ಬದುಕು ದುಸ್ತರವಾಗಿದೆ. ಇಲ್ಲಿ ನಿರ್ಮಾಣ ಮಾಡಿದ ಚರಂಡಿಗಳು, ಭೂ ಮಟ್ಟದಿಂದ 3 ಅಡಿ ಎತ್ತರದಲ್ಲಿವೆ. ಹೀಗಾಗಿ ಮಳೆ ಬಂದರೆ ಸಾಕು ಮನೆಗಳಿಗೆ ಮಳೆ ನೀರು ಬರುತ್ತದೆ. ಇನ್ನು ಮಹಿಳೆಯರು, ಮಕ್ಕಳು, ವೃದ್ಧರು ತಮ್ಮ ತಮ್ಮ ಮನೆಗೆ ಹೋಗಬೇಕಾದರೆ, ಚರಂಡಿ ದಾಟಿ ಹೋಗಲು ಹರಸಾಹಸಪಡುವಂತಾಗಿದೆ. ಚರಂಡಿ ನಿರ್ಮಾಣದ ವೇಳೆ ಎಂ ಸ್ಯಾಂಡ್‌ ಬಳಕೆಯ ಬದಲು, ಕಲ್ಲುಪುಡಿ ಬಳಸಿದ್ದು, ಚರಂಡಿ ಗೋಡೆ ಉದುರು ಬೀಳುತ್ತಿವೆ. ಸರಿಯಾದ ಕಾಮಗಾರಿ ನಡೆಯದೇ, ಸಂತ್ರಸ್ತರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಉದ್ದೇಶ ಈಡೇರಿಲ್ಲ.

ನಮ್ಮ ಪುನರ್‌ವಸತಿ ಕೇಂದ್ರದಲ್ಲಿ ಕೈಗೊಂಡ ಚರಂಡಿ ಕಾಮಗಾರಿ ಸರಿಯಾಗಿ ನಡೆದಿಲ್ಲ. ಮೂರು ಅಡಿ ಎತ್ತರಕ್ಕೆ ನಿರ್ಮಿಸಿದ್ದು, ವೃದ್ಧರು, ಮಕ್ಕಳು ಮನೆಗೆ ಹೋಗಲು ಆಗದಂತಹ ಪರಿಸ್ಥಿತಿ ಇದೆ. ಎಲ್ಲ ಕಾಮಗಾರಿಗಳೂ ಅರ್ಧಕ್ಕೆ ನಿಂತಿವೆ. ಕೇಳಿದರೆ, ಗುತ್ತಿಗೆದಾರರಿಗೆ ಹಣ ಕೊಟ್ಟಿಲ್ಲ ಎನ್ನುತ್ತಾರೆ. ಅವರ ಸಮಸ್ಯೆ ಏನೇ ಇರಲಿ, 9 ತಿಂಗಳಲ್ಲಿ ಮುಗಿಬೇಕಿದ್ದ ಕೆಲಸಗಳು, ಎರಡು ವರ್ಷವಾದರೂ ಮುಗಿದಿಲ್ಲ. ನಮ್ಮ ಗೋಳು ಯಾರ ಮುಂದೆ ಹೇಳಬೇಕು.•ಜಗನ್ನಾಥ ಮುತ್ತತ್ತಿ ಮತ್ತು ಅರವಿಂದ ಆಲೂರ, ರಾಂಪುರ ಗ್ರಾಮಸ್ಥರು

ಕಾಮಗಾರಿ ಏಕೆ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂಬುದು ತಿಳಿದಿಲ್ಲ. ಕೂಡಲೇ ಅಧಿಕಾರಿಗಳಿಂದ ಮಾಹಿತಿ ಪಡೆದು, ಪರಿಶೀಲಿಸುತ್ತೇನೆ. ಅಲ್ಲದೇ ಜಿಲ್ಲೆಯ ಪುನರ್‌ವಸತಿ ಕೇಂದ್ರಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಕಾಮಗಾರಿಗಳು ಯಾವ ಹಂತದಲ್ಲಿವೆ. ಎಷ್ಟು ಕಾಮಗಾರಿ ಪೂರ್ಣಗೊಂಡಿವೆ ಎಂಬುದರ ವಿವರ ಪಡೆದು, ಪುನರ್‌ವಸತಿ ಕೇಂದ್ರಗಳ ಸಂತ್ರಸ್ತರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.•ಬಾಯಕ್ಕ ಮೇಟಿ, ಜಿಪಂ ಅಧ್ಯಕ್ಷೆ

 

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.