ಹೆಲ್ಮೆಟ್-ಸೀಟ್ಬೆಲ್ಟ್ ಹಾಕದಿದ್ದರೆ ಇಂಧನ ಸಿಗಲ್ಲ
Team Udayavani, Sep 24, 2019, 10:51 AM IST
ಬಾಗಲಕೋಟೆ: ಬೈಕ್ ಸವಾರರು ಹೆಲ್ಮೆಟ್ ಹಾಕದಿದ್ದರೆ ವಿವಿಧ ನಾಲ್ಕು ಚಕ್ರದ ವಾಹನ ಸವಾರರು ಸೀಟ್ ಬೆಲ್ಟ್ ಹಾಕದಿದ್ದರೆ ಇನ್ನು ಮುಂದೆ ಪೆಟ್ರೋಲ್, ಡಿಸೇಲ್ ಸಿಗುವುದಿಲ್ಲ. ಹೌದು, ಇಂತಹ ನಿರ್ಧಾರವನ್ನು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲೆಯ ಪೆಟ್ರೋಲ್ ಬಂಕ್ ಮಾಲೀಕರು ಜಂಟಿಯಾಗಿ ನಿರ್ಧಾರ ಕೈಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸೋಮವಾರ ನಡೆದ ಪೆಟ್ರೋಲ್ ಪಂಪ್ ಮಾಲಿಕರು, ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಒಮ್ಮತದ ನಿರ್ಧಾರ ಕೈಗೊಂಡಿದ್ದು, ಇದು ಸೆ. 27ರಿಂದ ಜಿಲ್ಲೆಯಾದ್ಯಂತ ಜಾರಿಗೊಳ್ಳಲಿದೆ. ಸಭೆಯಲ್ಲಿ ಎಸ್ಪಿ ಲೋಕೇಶ ಜಗಲಾಸರ ಮಾತನಾಡಿ, ಬೈಕ್ ಸವಾರರು ಹೈಲ್ಮೆಟ್ ಧರಿಸುವುದು, ಕಾರು ಚಾಲಕರು ಸೀಟ್ ಬೆಲ್ಟ್ ಹಾಕುವುದು ಧರಿಸುವುದು ಕಡ್ಡಾಯಗೊಳಿಸಲಾಗಿದೆ.
ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಿದೇ ಬರುವ ವಾಹನಗಳಿಗೆ ಇಂಧನ ಹಾಕಬಾರದು. ಅಲ್ಲದೇ ಎಲ್ಲ ಪೆಟ್ರೋಲ್ ಪಂಪ್ಗ್ಳಲ್ಲಿ ಪೊಲೀಸರನ್ನು ನೇಮಿಸಿ, ಪೆಟ್ರೋಲ್ ಪಂಪ್ನಲ್ಲಿಯೇ ದಂಡ ವಿಧಿಸಲಾಗುವುದು. ಇದಕ್ಕೆ ಎಲ್ಲ ಪಂಪ್ಗ್ಳ ಮಾಲಿಕರು ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪೆಟ್ರೋಲ್ ಬಂಕ್ ಗಳ ಮಾಲೀಕರು ಒಪ್ಪಿಗೆ ನೀಡಿದರು.
ಸಂಚಾಯ ನಿಯಮ ಕಡ್ಡಾಯ ಪಾಲನೆ: ಬಾಗಲಕೋಟೆ ನಗರ ಪೊಲೀಸ್ ಠಾಣೆಯಲ್ಲಿ ಆಟೋ ಮತ್ತು ಟಂಟಂ ಚಾಲಕರ ಸಭೆ ನಡೆಸಿ ಎಸ್ಪಿ ಲೋಕೇಶ, ಸಂಚಾರ ನಿಯಮ ಕಡ್ಡಾಯ ಪಾಲನೆ ಕುರಿತು ಸೂಚಿಸಿದರು. ಸಭೆಯಲ್ಲಿ ಸುಮಾರು 500ಕ್ಕೂ ಹೆಚ್ಚು ಟಂಟಂ, ಆಟೋ ಚಾಲಕರು ಪಾಲ್ಗೊಂಡಿದ್ದರು. ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಸವಣೆಪ್ಪ ಹರತಿ, ಡಿವೈಎಸ್ಪಿ ಎಸ್.ಬಿ. ಗಿರೀಶ, ಸಿಪಿಐ ಶ್ರೀಶೈಲ ಗಾಬಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!