ಗಾಂಧಿ ಗ್ರಾಮಕ್ಕಿಲ್ಲ ಗ್ರಂಥಾಲಯ


Team Udayavani, Nov 4, 2019, 12:36 PM IST

bk-tdy-1

ಮುಧೋಳ: ಇಡೀ ಜಿಲ್ಲೆಯ ಮಾದರಿ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾದ ತಾಲೂಕಿನ ಮೆಳ್ಳಿಗೇರಿ ಗ್ರಾಮದಲ್ಲಿ ಗ್ರಂಥಾಲಯವಿಲ್ಲ. ಇದರಿಂದ ಗ್ರಾಮದ ವಿದ್ಯಾವಂತ ಬಡ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯ ಗ್ರಂಥ ಗಳಿಂದ ಹಿಡಿದು ಯಾವುದೇ ಪುಸ್ತಕಗಳು ಓದಿನಿಂದ ವಂಚಿತರಾಗುತ್ತಿದ್ದಾರೆ.

ಸುಮಾರು 6 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಸೂಕ್ತ ಗ್ರಂಥಾಲಯವಿಲ್ಲದ ಕಾರಣ ಗ್ರಾಮದ ವಿದ್ಯಾವಂತ ಯುವಕರು ಹಾಗೂ ಸಾಹಿತ್ಯಾಸಕ್ತರು ಓದಿನಿಂದ ವಂಚಿತಗೊಳ್ಳುವಂತಾಗಿದೆ. ಸರ್ಕಾರದ ದಿವ್ಯ ನಿರ್ಲಕ್ಷ: ಅಧಿಕಾರದ ವಿಕೇಂದ್ರಿಕರಣ ಹಾಗೂ ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ 2015ರಲ್ಲಿ ಹಲವು ಗ್ರಾಮ ಪಂಚಾಯತಿಗಳನ್ನು ಪುನರ್‌ವಿಂಗಡಣೆ ಮಾಡಿದ್ದು, ವೇಳೆ ಹಲಗಲಿ ಗ್ರಾಮದ ವ್ಯಾಪ್ತಿಯಲ್ಲಿದ್ದ ಮೆಳ್ಳಿಗೇರಿ ಗ್ರಾಮಕ್ಕೆ ಪ್ರತ್ಯೇಕ ಗ್ರಾಮ ಪಂಚಾಯತ ಘೋಷಣೆ ಮಾಡಲಾಗಿದೆ. ಆ ಬಳಿಕ ಗ್ರಾಮ ಪಂಚಾಯತ ಕಚೇರಿಗೆ ಅವಶ್ಯವಿರುವ ಸೌಲಭ್ಯ ಒದಗಿಸಿದ ಸರ್ಕಾರ ಗ್ರಂಥಾಲಯ ವಿಷಯದಲ್ಲಿ ಮಾತ್ರ ದಿವ್ಯ ನಿರ್ಲಕ್ಷ ವಹಿಸಿತು. ಇದರಿಂದ ಗ್ರಂಥಾಲಯದ ಕನಸು ಇದೂವರೆಗೂ ನನಸಾಗಿಲ್ಲ.

ಎರಡೇ ವರ್ಷಕ್ಕೆ ಗಾಂಧಿ ಗ್ರಾಮ ಪ್ರಶಸ್ತಿ: 2015ಕ್ಕೂ ಮುಂಚೆ ಪಕ್ಕದ ಹಲಗಲಿ ಗ್ರಾಮ ಪಂಚಾಯತನಲ್ಲಿದ್ದ ಈ ಗ್ರಾಮ, ಪ್ರತ್ಯೇಕ ಗ್ರಾಪಂ ರಚನೆಯಾದ ಎರಡೇ ವರ್ಷದಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿದೆ. ಪ್ರತ್ಯೇಕ ಪಂಚಾಯತ್‌ ಆಗಿ ನಿರ್ಮಾಣಗೊಂಡ ಕಡಿಮೆ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಕಂಡ ಪಂಚಾಯತಿ ವ್ಯಾಪ್ತಿಯಲ್ಲಿ ಇದೂವರೆಗೂ ಗ್ರಂಥಾಲಯ ನಿರ್ಮಾಣವಾಗದಿರುವುದು ದುರ್ದೈವದ ಸಂಗತಿ.

ಗ್ರಾಮ ಅಭಿವೃದ್ಧಿಗೆ ಹೊಲ ಮಾರಿದ್ದ: ಈ ಹಿಂದೆ ಹಲಗಲಿ ಗ್ರಾ.ಪಂ. ವ್ಯಾಪ್ತಿಯಲ್ಲಿದ್ದ ಮೆಳ್ಳಿಗೇರಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಹಿಂದೆ ಹಲಗಲಿ ಗ್ರಾಪಂ ಅಧ್ಯಕ್ಷರಾಗಿದ್ದ ರಮೇಶ ಜೀರಗಾಳ ಏಳು ಎಕರೆ ಹೊಲವನ್ನೇ ಮಾರಿದ್ದರು. ಇಡೀ ಜಿಲ್ಲೆಯಲ್ಲೇ ಒಳ ಚರಂಡಿ ಹೊಂದಿದ ಮೊದಲ ಗ್ರಾಮ ಎಂಬ ಹೆಗ್ಗಳಿಕೆಯೂ ಮೆಳ್ಳಿಗೇರಿದೆ. ಆದರೆ, ಇಂತಹ ಮಾದರಿ ಗ್ರಾಮದಲ್ಲೊಂದು ಗ್ರಂಥಾಲಯವಿಲ್ಲ ಎಂಬ ಕೊರಗನ್ನು ಸರ್ಕಾರ ಶೀಘ್ರ ಗ್ರಂಥಾಲಯ ನಿರ್ಮಾಣ ಮಾಡುವ ಮೂಲಕ ನೀಗಿಸಬೇಕಿದೆ.

ಗ್ರಾಮದಲ್ಲಿ ಗ್ರಂಥಾಲಯ ನಿರ್ಮಾಣವಾದರೆ ವಿದ್ಯಾವಂತ
ಯುವಕರಿಗೆ ಹಾಗೂ ಓದುಗರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಸರ್ಕಾರ ಗ್ರಂಥಾಲಯ ನಿರ್ಮಾಣಕ್ಕೆ ಆದೇಶ
ಹೊರಡಿಸಿದರೆ ನಮ್ಮ ಕಡೆಯಿಂದ ಗ್ರಂಥಾಲಯಕ್ಕೆ ಬೇಕಾದ ಸೌಲಭ್ಯ ಒದಗಿಸಲು ಪ್ರಯತ್ನಿಸುತ್ತೇವೆ. -ಎ.ಎಸ್‌.ಜನಗೌಡ, ಗ್ರಾ.ಪಂ. ಪಿಡಿಒ

 

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.