ಬಾಗಲಕೋಟೆ: ಕೋವಿಡ್‌ಗೆ ಮತ್ತೆ ಮೂವರು ಬಲಿ ; ಜಿಲ್ಲೆಯಲ್ಲಿ ಒಟ್ಟು 62 ಜನ ಸಾವು


Team Udayavani, Aug 8, 2020, 3:00 AM IST

ಬಾಗಲಕೋಟೆ: ಕೋವಿಡ್‌ಗೆ ಮತ್ತೆ ಮೂವರು ಬಲಿ ; ಜಿಲ್ಲೆಯಲ್ಲಿ ಒಟ್ಟು 62 ಜನ ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ 19 ಮರಣ ಮೃದಂಗ ಮುಂದುರೆದಿದೆ.

ಶುಕ್ರವಾರ ಒಂದೇ ದಿನ ಮೂವರು ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸಂಬಂಧಿತ ಸಾವಿನ ಸಂಖ್ಯೆ 59ಕ್ಕೆ ಏರಿಕೆಯಾಗಿದೆ.

ಬೇರೆ ಜಿಲ್ಲೆಯಲ್ಲಿ ಸಾವನ್ನಪ್ಪಿದ ಮೂವರು ಸಹಿತ ಒಟ್ಟು 62 ಜನರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ.

ತೇರದಾಳದ 63 ವರ್ಷದ ಪುರುಷ ಕಳೆದ ಆ. 2ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ತೊಂದರೆಯಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಬಾಗಲಕೋಟೆ ನಗರದ 58 ವರ್ಷದ ಪುರುಷ ಕಳೆದ ಆ.1ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಧುಮೇಹ, ರಕ್ತ ಹೀನತೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರೂ ಶುಕ್ರವಾರ ಸಾವನ್ನಪ್ಪಿದ್ದಾರೆ.

ಅಲ್ಲದೇ ಬಾದಾಮಿಯ 65 ವರ್ಷದ ಪುರುಷ ಕಳೆದ ಆ.2ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಕೋವಿಡ್ ಜತೆಗೆ ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ಸಮಸ್ಯೆ ಇತ್ತು. ಇವರು ಶುಕ್ರವಾರ ಮೃತಪಟ್ಟಿದ್ದಾರೆ.

ಕೋವಿಡ್‌ನಿಂದ ಜಿಲ್ಲೆಯಲ್ಲಿ ಈ ವರೆಗೆ 59 ಜನ ಮೃತಪಟ್ಟಿದ್ದು, ಬೆಂಗಳೂರು, ವಿಜಯಪುರ ಹಾಗೂ ಗದಗನಲ್ಲಿ ತಲಾ ಒಬ್ಬರು ಸೇರಿ ಒಟ್ಟು 62 ಜನರು ಬಲಿಯಾಗಿದ್ದಾರೆ.

ಒಂದೇ ದಿನ 148 ಜನರಿಗೆ ಸೋಂಕು:
ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರ ನಾಲ್ವರು ಸಿಬ್ಬಂದಿ ಸಹಿತ ಶುಕ್ರವಾರ ಮತ್ತೆ 148 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಬಾಗಲಕೋಟೆ ತಾಲೂಕಿನಲ್ಲಿ 26, ಬಾದಾಮಿ 44, ಬೀಳಗಿ 4, ಹುನಗುಂದ 32, ಮುಧೋಳ 26, ಜಮಖಂಡಿ 16 ಹಾಗೂ ಬೇರೆ ಜಿಲ್ಲೆಯ ಒಬ್ಬರು ಸಹಿತ ಒಟ್ಟು 148 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ತಿಳಿಸಿದ್ದಾರೆ.

ಶುಕ್ರವಾರ ಮತ್ತೆ 84 ಜನರು ಕೋವಿಡ್ 19 ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿತರ ಸಂಖ್ಯೆ ಒಟ್ಟು 2762ಕ್ಕೇ ಏರಿಕೆಯಾಗಿದ್ದು, 1238 ಜನರು ಕೋವಿಡ್‌ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಿಂದ ಕಳುಹಿಸಿದ 157 ಜನರ ಗಂಟಲು ದ್ರವ ಮಾದರಿ ವರದಿ ಇನ್ನೂ ಬರಬೇಕಿದೆ. ಸಧ್ಯ ಜಿಲ್ಲೆಯಲ್ಲಿ 666 ಜನರು ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಈವರೆಗೆ 33,298 ಜನರ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 30,101 ಜನರ ವರದಿ ನೆಗೆಟಿವ್ ಬಂದಿದೆ. 2762 ಜನರಿಗೆ ಪಾಜಿಟಿವ್ ಬಂದಿದ್ದು, 1238 ಜನರು ಗುಣಮುಖರಾಗಿದ್ದಾರೆ. ಸಧ್ಯ 1389 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.