ಶಿವಾಜಿ ಪುತ್ಥಳಿ ನಿರ್ಮಿಸಲು ಆಗ್ರಹ
Team Udayavani, Jul 31, 2020, 6:24 AM IST
ಬಾಗಲಕೋಟೆ: ವೀರ ಶಿವಾಜಿ ಸೇನೆಯ ಪದಾಧಿಕಾರಿಗಳು ಸಚಿವ ಶ್ರೀಮಂತ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಬಾಗಲಕೋಟೆ: ನವನಗರದ ಸೂಕ್ತ ಜಾಗೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವೀರ ಶಿವಾಜಿ ಸೇನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಸಂಘಟನೆಯ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಬುಧವಾರ ಜವಳಿ ಸಚಿವ ಶ್ರೀಮಂತ ಪಾಟೀಲ ಅವರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲೆಯ ವಿವಿಧ ತಾಲೂಕು ಹಾಗೂ ಗ್ರಾಮೀಣ ಭಾಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಇವೆ. ಜಿಲ್ಲಾ ಕೇಂದ್ರ ಬಾಗಲಕೋಟೆಯಲ್ಲಿ ಹಿಂದೂಗಳ ಹೃದಯ ಸಾಮ್ರಾಟ್ ಶಿವಾಜಿ ಪುತ್ಥಳಿ
ಇಲ್ಲ. ಶಿವಾಜಿ ಮಹಾರಾಜರು, ಒಂದು ರಾಜ್ಯಕ್ಕೆ ರಾಜನಾಗಿರದೇ ಇಡೀ ದೇಶಕ್ಕಾಗಿ ಸೈನ್ಯದೊಂದಿಗೆ ಹೋರಾಡಿದ ಮಹಾನ್ ಪರಾಕ್ರಮಿ ರಾಜ. ಆದ್ದರಿಂದ ಅವರ
ಪುತ್ಥಳಿಯು, ಬಾಗಲಕೋಟೆಯಲ್ಲಿ ನಿರ್ಮಾಣ ಮಾಡಬೇಕು. ಬಾಗಲಕೋಟೆ ನಗರ, ನವನಗರದ ಯಾವುದೇ ಸೂಕ್ತ ಜಾಗೆಯಲ್ಲಿ ಸರ್ಕಾರದಿಂದ ಶಿವಾಜಿ ಪುತ್ಥಳಿ ನಿರ್ಮಿಸಬೇಕು ಎಂದು ಮನವಿ ಮಾಡಿದರು.
ವೀರ ಶಿವಾಜಿ ಸೇನೆಯ ಜಿಲ್ಲಾ ಅಧ್ಯಕ್ಷ ರಾಯಬಾ ಜಾಧವ, ಪ್ರಧಾನ ಕಾರ್ಯದರ್ಶಿ ಮಾರುತಿ ನಲವಡೆ, ಪ್ರಮುಖರಾದ ಸುಭಾಸ ಕೋಟಿ, ಸಂದೀಪ ಜಾಧವ, ಅಮೀತ್ ಲೊಂಡೆ, ರಾಹುಲ ಸೇಟವಾಜಿ, ವಿನಾಯಕ ಪವಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್