ಕೆಲಸಕ್ಕೆ ಹೋಗ್ಬೇಕಾ?; ಮಕ್ಕಳ ಚಿಂತೆ ಬಿಡಿ !

ಈ ಕೇಂದ್ರದ ಸಿಬ್ಬಂದಿ, ತಮ್ಮ ಸ್ವಯಂ ಮಕ್ಕಳಂತೆ ಉದ್ಯೋಗಸ್ಥ ಮಹಿಳೆಯರ ಮಕ್ಕಳನ್ನು ನೋಡಿಕೊಳ್ಳುತ್ತಾರೆ.

Team Udayavani, Jun 25, 2022, 5:41 PM IST

ಕೆಲಸಕ್ಕೆ ಹೋಗ್ಬೇಕಾ?; ಮಕ್ಕಳ ಚಿಂತೆ ಬಿಡಿ !

ಬಾಗಲಕೋಟೆ: ನೀವು ನಿತ್ಯವೂ ದುಡಿಯಲು ಹೋಗಬೇಕಾ. ಮನೆಯಲ್ಲಿ ಪುಟ್ಟ ಪುಟ್ಟ ಮಕ್ಕಳನ್ನು ಬಿಟ್ಟು ಹೇಗೆ ಹೋಗೋದು ಎಂಬ ಚಿಂತೆಯೇ. ಹಾಗಾದರೆ, ಮಕ್ಕಳನ್ನು ನೋಡಿಕೊಳ್ಳುವ ಚಿಂತೆ ನಿಮಗೆ ಬೇಡ. ಅದಕ್ಕಾಗಿ ಜಿಪಂ ಹೊಸ ಯೋಜನೆ ಆರಂಭಿಸಿದೆ. ನೀವು, ಕೆಲಸಕ್ಕೆ ಹೋಗಿ ಬರುವವರೆಗೂ ನಿಮ್ಮ ಮಕ್ಕಳನ್ನು ಜೋಪಾನವಾಗಿ ನೋಡಿಕೊಳ್ಳುವ ಕರ್ತವ್ಯ ನಿರ್ವಹಿಸುತ್ತಿದೆ.

ಹೌದು, ನಿತ್ಯವೂ ಸರ್ಕಾರಿ, ಖಾಸಗಿ ನೌಕರಿಗೆ ಹೋಗುವ ಪೋಷಕರು, ನಿತ್ಯ ಬೇರೆ ಬೇರೆ ಕಡೆ ದುಡಿಯಲು ಹೋಗುವ ಮಹಿಳೆಯರ ಮಕ್ಕಳಿಗಾಗಿ ಜಿಲ್ಲಾಡಳಿತ, ಜಿಪಂ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯ, ಸರ್ಚ್‌ ಸ್ವಯಂ ಸೇವಾ ಅಭಿವೃದ್ಧಿ ಸಂಸ್ಥೆಯ ನೇತೃತ್ವದಲ್ಲಿ ಜಿಪಂ ಕಚೇರಿ ಆವರಣದಲ್ಲಿ ಶಿಶುಪಾಲನೆ ಕೇಂದ್ರ ಆರಂಭಿಸಲಾಗಿದೆ. ಸದ್ಯ ಈ ಕೇಂದ್ರದಲ್ಲಿ 7 ಜನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದು, ಒಟ್ಟು 17 ಜನ ಪೋಷಕರು, ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಹೆಸರು ನೋಂದಾಯಿಸಿದ್ದಾರೆ.

ಏನಿದು ಕೇಂದ್ರ?: ಒಬ್ಬಂಟಿ ಮಹಿಳೆಯರು ಅಥವಾ ಪುರುಷರು, ನಿತ್ಯ ಸರ್ಕಾರಿ ನೌಕರಿ, ಖಾಸಗಿ ಸೇವೆ ಅಥವಾ ಬೇರೆ ಬೇರೆ ಕಡೆ ದುಡಿಯಲು ಹೋಗುತ್ತಾರೆ. ಆದರೆ, ಪುಟ್ಟ ಪುಟ್ಟ ಮಕ್ಕಳನ್ನು ನೌಕರಿ, ಕೆಲಸಕ್ಕೆ ಹೋಗುವಾಗ ಕರೆದುಕೊಂಡು ಹೋಗುವುದು ಸಮಸ್ಯೆಯಾಗುತ್ತದೆ. ಮಕ್ಕಳು ಅಳುತ್ತಿದ್ದರೆ, ಖಾಸಗಿ ಸೇವೆಯಲ್ಲಿರುವವರು ಕೆಲಸ ನಿರ್ವಹಿಸುವುದೇ ಕಷ್ಟ. ಹೀಗಾಗಿ ಚಿಕ್ಕ ಮಕ್ಕಳನ್ನು ಕಂಕುಳಲ್ಲಿ ಹೊತ್ತ ಕೆಲಸಕ್ಕೆ ಬರುವ ಮಹಿಳೆಯರನ್ನು ಹಲವೆಡೆ ಕೆಲಸಕ್ಕೆ ಸೇರಿಸಿಕೊಳ್ಳುವುದಿಲ್ಲ. ಮಕ್ಕಳು ದೊಡ್ಡವರಾದ ಮೇಲೆ ಬನ್ನಿ ಎಂದು ಕೆಲಸವೇ ಬಿಡಿಸುವ ಪ್ರಸಂಗ ನಡೆಯುತ್ತವೆ.

ಆದರೆ, ಅವರು ದುಡಿಯದೇ ಇದ್ದರೆ ಬದುಕು ನಡೆಯಲ್ಲ. ಹೀಗಾಗಿ ಏನು ಮಾಡಬೇಕೆಂಬ ಚಿಂತೆಯಲ್ಲೇ ಸಾಲ ಮಾಡಿ ಬದುಕು ನಿರ್ವಹಿಸುತ್ತಾರೆ. ಅಂತವರಿಗಾಗಿಯೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸರ್ಚ್‌ ಸ್ವಯಂ ಸೇವಾ ಅಭಿವೃದ್ಧಿ ಸಂಸ್ಥೆಯಡಿ ಜಿ.ಪಂ.ನ ಸಭಾ ಭವನದ ಎದುರಿಗೆ ಇರುವ, ಈ ಮೊದಲು ಸದಸ್ಯರ ವಿಶ್ರಾಂತಿಗಾಗಿ ಮೀಸಲಿದ್ದ ಕೊಠಡಿಯಲ್ಲೇ ಈಗ, ಮಕ್ಕಳ ಶಿಶುಪಾಲನಾ ಕೇಂದ್ರ ಆರಂಭಿಸಲಾಗಿದೆ.

ನೋಂದಣಿ ಕಡ್ಡಾಯ: ಉದ್ಯೋಗಸ್ಥ ಪೋಷಕರು ಮತ್ತು ದುಡಿಯುವ ಮಹಿಳೆಯರ ಮಕ್ಕಳಿಗಾಗಿ ಶಿಶುಪಾಲನೆ ಕೇಂದ್ರದಲ್ಲಿ ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಬಿಡಬೇಕಾದರೆ ಮೊದಲು ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯ. ಪೋಷಕರು, ಪಾಲಕರ ಸಂಪೂರ್ಣ ವಿವರ ಪಡೆಯಲಾಗುತ್ತದೆ. ಅಲ್ಲದೇ ಮಕ್ಕಳ ಪಾಲನೆಗಾಗಿ, ಈ ಕೇಂದ್ರದಲ್ಲಿ ಬಿಡಲು ಪಾಲಕರೂ ಒಪ್ಪಿಕೊಂಡು ಬಿಡಬೇಕು. ಆಗ ಈ ಕೇಂದ್ರದ ಸಿಬ್ಬಂದಿ, ತಮ್ಮ ಸ್ವಯಂ ಮಕ್ಕಳಂತೆ ಉದ್ಯೋಗಸ್ಥ
ಮಹಿಳೆಯರ ಮಕ್ಕಳನ್ನು ನೋಡಿಕೊಳ್ಳುತ್ತಾರೆ.

ಇಬ್ಬರು ತಾಯಂದಿರು: ಜಿಲ್ಲಾಡಳಿತ ಭವನದ ಜಿ.ಪಂ. ಸದಸ್ಯರ ಕೊಠಡಿಯಲ್ಲಿ ಆರಂಭಗೊಂಡ ಶಿಶುಪಾಲನೆ ಕೇಂದ್ರದಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಸರ್ಚ್‌ ಸ್ವಯಂ ಸೇವಾ ಸಂಸ್ಥೆಯಿಂದ ಲಕ್ಷ್ಮಿ ಎನ್‌. ಗಾಯಕವಾಡ ಮತ್ತು ಪೂರ್ಣಿಮಾ ಮಸೂತಿ ಎಂಬ ಇಬ್ಬರು ತಾಯಂದಿರನ್ನು ನೇಮಕ ಮಾಡಲಾಗಿದೆ. ಇವರು ಕೇಂದ್ರದಲ್ಲಿ ಹೆಸರು ನೋಂದಾಯಿಸಿ, ಇಲ್ಲಿಗೆ ಬಿಟ್ಟು ಹೋಗುವ ಮಕ್ಕಳನ್ನು ಬೆಳಗ್ಗೆ 10ರಿಂದ ಸಂಜೆ 5:30ರ (ರಜೆ ದಿನ ಹೊರತುಪಡಿಸಿ) ವರೆಗೆ ನೋಡಿಕೊಳ್ಳುತ್ತಾರೆ. ಜತೆಗೆ ಆ ಮಕ್ಕಳಿಗೆ ರಾಗಿ ಗಂಜಿ ಸಹಿತ ವಿವಿಧ ಸಿಹಿ ತಿನಿಸುಗಳನ್ನು ಇಲಾಖೆಯಿಂದಲೇ ವ್ಯವಸ್ಥೆ ಮಾಡಲಾಗಿದೆ.

0 ದಿಂದ 6 ವರ್ಷದ ಮಕ್ಕಳನ್ನು ಈ ಕೇಂದ್ರದಲ್ಲಿ ಬಿಡಬಹುದು. ನಿತ್ಯ ದುಡಿಯಲು ಹೋಗುವ ಮಹಿಳೆಯರ ಮಕ್ಕಳು, ಉದ್ಯೋಗಸ್ಥ-ಸರ್ಕಾರಿ ನೌಕರರ ಮಕ್ಕಳನ್ನು ಇಲ್ಲಿಗೆ ಬಿಡಬಹುದು. ಯಾವುದೇ ಶುಲ್ಕವಿಲ್ಲದೇ ಸರ್ಚ್‌ ಸ್ವಯಂ ಸೇವಾ ಸಂಸ್ಥೆಯಡಿ ಮಕ್ಕಳ ಪಾಲನೆ ಮಾಡಲಾಗುತ್ತದೆ. ಜತೆಗೆ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ, ಆರೋಗ್ಯ, ದೈಹಿಕ ಅರಿವಿನ ಸಾಮಾಜಿಕ, ಭಾವನಾತ್ಮಕ ಬೆಳವಣಿಗೆ ಹೊಂದುವುದು, ಕಲಿಕಾ ಸಾಮಗ್ರಿ, ಆಟಿಕೆ ಸಾಮಗ್ರಿ, ಚಿತ್ರಪಟಗಳು, ಮಕ್ಕಳ ಸ್ನೇಹಿ ವಾತಾವರಣ ವ್ಯವಸ್ಥೆ ಮಾಡುವುದು ಈ ಕೇಂದ್ರದ ಮುಖ್ಯ ಆಶಯ. ಸದ್ಯ ಒಂದು ತಿಂಗಳ ಹಿಂದೆ ಆರಂಭಗೊಂಡ ಈ ಕೇಂದ್ರದಲ್ಲಿ 7 ಜನ ಮಕ್ಕಳು, ಇಲ್ಲಿ ನಿತ್ಯ ಪಾಲನೆಗೊಳ್ಳುತ್ತಿದ್ದಾರೆ.

ಉದ್ಯೋಗಸ್ಥ ಪೋಷಕರು, ದುಡಿಯುವ ಮಹಿಳೆಯರ ಮಕ್ಕಳ ಪಾಲನೆಗಾಗಿ ಆರಂಭಿಸಿದ ಮಕ್ಕಳ ಪಾಲನೆ ಕೇಂದ್ರ ಸಂಪರ್ಕಿಸಲು, ಸರ್ಚ್‌ ಶಿಶುಪಾಲನೆ ಕೇಂದ್ರ, ಜಿಲ್ಲಾಡಳಿತ ಭವನ, ಜಿ.ಪಂ. ಮುಖ್ಯ ಕಚೇರಿ, ನವನಗರ, (ಮೊ: 9448801473, 8088871164)ಗೆ ಒಮ್ಮೆ ಭೇಟಿ ಕೊಡಿ.

*ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.