ಕೃಷಿ ವಲಯಕ್ಕೆ 8496 ಕೋಟಿ ಮೀಸಲು
Team Udayavani, Dec 17, 2019, 3:32 PM IST
ಬಾಗಲಕೋಟೆ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಸಿದ್ಧಪಡಿಸಿದ 2020-21ನೇ ಸಾಲಿನ ಸಂಭಾವ್ಯ ಲಿಂಕ್ಡ್ ಕ್ರೆಡಿಟ್ ಯೋಜನೆಗೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಚಾಲನೆ ನೀಡಿದರು.ಜಿಪಂ ಸಭಾ ಭವನದಲ್ಲಿ ನಡೆದ ಜಿಲ್ಲಾ ಅಗ್ರಣಿ ಬ್ಯಾಂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲಿಂಕ್ಡ್ಕ್ರೆ ಡಿಟ್ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ನಬಾರ್ಡ್ನ ಸಂಭಾವ್ಯ ಲಿಂಕ್ಡ್ಯೋ ಜನೆಯು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಜನರಿಗೆ ಇದರ ಪ್ರಯೋಜನವಾಗುವಂತೆ ಮಾಡಲು ತಿಳಿಸಿದರು. ಜಿಲ್ಲಾ ಅಗ್ರಣಿ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಗೋಪಾಲ್ ರೆಡ್ಡಿ ಮಾತನಾಡಿ, ಈ ಕ್ರೆಡಿಟ್ ಯೋಜನೆಯಲ್ಲಿ ದೀರ್ಘಾವ ಯ ಭೌತಿಕ ಸಾಮರ್ಥ್ಯ, ಮೂಲಸೌಕರ್ಯ ಬೆಂಬಲದ ಲಭ್ಯತೆ, ಮಾರ್ಕೆಟಿಂಗ್ ಸೌಲಭ್ಯಗಳು, ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಗಣನೆಗೆ ತೆಗೆದುಕೊಂಡು ಬ್ಯಾಂಕ್ ಕ್ರೆಡಿಟ್ ಮೂಲಕ ಅಸ್ತಿತ್ವದಲ್ಲಿರುವ ಅಭಿವೃದ್ದಿಯ ಸಾಮರ್ಥ್ಯ ನಕ್ಷೆ ಮಾಡುವ ಮೂಲ ಉದ್ದೇಶದಿಂದ ಸಂಭಾವ್ಯ ಲಿಂಕ್ಡ್ ಕ್ರೆಡಿಟ್ ಯೋಜನೆ (ಪಿಎಲ್ಪಿ) ಸಿದ್ದಪಡಿಸಲಾಗಿದೆ ಎಂದರು.
ಪಿಎಲ್ಪಿ ಯೋಜನೆ ಆದ್ಯತೆ ವಲಯದ ಅಡಿಯಲ್ಲಿ ಬಳಸಬಹುದಾದ ಸಾಲದ ಸಾಮರ್ಥ್ಯ 9952.97 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ. ಇದು ಪ್ರಸ್ತುತ 2019-20 ವಾರ್ಷಿಕ ಸಾಲ ಯೋಜನೆಗಿಂತ 1216.82 ಕೋಟಿ ರೂ. ಹೆಚ್ಚಾಗಿರುತ್ತದೆ. ಈ ಪಿಎಲ್ಪಿ ದಾಖಲೆಯಲ್ಲಿ ಮಾಡಿದ ಮೌಲ್ಯಮಾಪನದ ಆಧಾರದ ಮೇಲೆ 2020-21ರ ಜಿಲ್ಲೆಯ ಎಸಿಪಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
ಈ ಯೋಜನೆಯ ಪ್ರಕಾರ ಕೃಷಿ ಬೆಳೆ ಉತ್ಪಾದನೆ ಮತ್ತು ಕೃಷಿ 8496.70 ಕೋಟಿ ರೂ., ಎಂಎಸ್ಎಂಇ 834.12 ಕೋಟಿ ರೂ., ರಫ್ತು ಸಾಲ 111.28 ಕೋಟಿ ರೂ., ಶಿಕ್ಷಣ 52.66 ಕೋಟಿ, ವಸತಿ 279.40 ಕೋಟಿ, ನವೀಕರಿಸಬಹುದಾದ ಶಕ್ತಿ 60.76 ಕೋಟಿ ಮತ್ತು ಸಾಮಾಜಿಕ ಮೂಲಸೌಕರ್ಯ 118.05 ಕೋಟಿ ರೂ. ಒಳಗೊಂಡಿದೆ. ಸಂಭಾವ್ಯ ಲಿಂಕ್ ಕ್ರೆಡಿಟ್ ಯೋಜನೆಯ ವಿಷಯ ಹೈಟೆಕ್ ಅಗ್ರಿಕಲ್ಚರ್ ಆಗಿದೆ ಎಂದು ಹೇಳಿದರು.
ನಬಾರ್ಡ್ನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕಿ ಯಮುನಾ ಪೈ ಮಾತನಾಡಿ, ಬ್ಯಾಂಕ್ಗಳು ಈ ಡಾಕ್ಯೂಮೆಂಟ್ ಬಳಸಿಕೊಂಡು ಸ್ಥಳೀಯ ಆರ್ಥಿಕತೆ ಉತ್ತೇಜಿಸಲು ತಿಳಿಸಿದರು. ಬ್ಯಾಂಕ್ ಗಳು ಗ್ರಾಮೀಣ ಸಾಲ ತಲುಪಿಸಲು ಸರ್ಕಾರ, ವಿಶ್ವವಿದ್ಯಾಲಯಗಳು ಮತ್ತು ಕೆವಿಕೆಗಳ ಲೈನ್ ಇಲಾಖೆಗಳ ಬೆಂಬಲವೂ ಬಹಳ ನಿರ್ಣಾಯಕವಾಗಿದೆ ಎಂದರು.
ಜಿಪಂ ಸಿಇಒ ಗಂಗೂಬಾಯಿ ಮಾನಕರ, ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಮುಖ್ಯ ವ್ಯವಸ್ಥಾಪಕ ಶ್ರೀನಿವಾಸ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ