ಕಾಂಗ್ರೆಸ್ನಿಂದ ದೇಶದ್ರೋಹ ಕೆಲಸ: ಡಿಸಿಎಂ ಕಾರಜೋಳ
Team Udayavani, Dec 23, 2019, 9:13 PM IST
ಬಾಗಲಕೋಟೆ: ಕಾಂಗ್ರೆಸ್ ಹಾಗೂ ಕೆಲವು ಸಂಘಟನೆಗಳು ದೇಶದ್ರೋಹದ ಕೆಲಸ ಮಾಡುತ್ತಿವೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ನೆಪದಲ್ಲಿ ಅನವಶ್ಯಕವಾಗಿ ಶಾಂತಿ-ಸೌಹಾರ್ದ ಕದಕುವ ಕೆಲಸ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಇಡೀ ಸಂಸತ್ ಕಾನೂನಿಗೆ ತಿದ್ದುಪಡಿ ಮಾಡಿ ಒಪ್ಪಿಗೆ ನೀಡಿದೆ. ಮುಸ್ಲಿಂರಿಗೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ನವರು ದೇಶಾದ್ಯಂತ ಹೇಳಿಕೊಂಡು ತಿರುಗುತ್ತಿದ್ದಾರೆ. ಕಾಂಗ್ರೆಸ್ಗೆ ಕೇವಲ ಓಟ್ ಬ್ಯಾಂಕ್ ಚಿಂತೆ. ಮುಸ್ಲಿಂ, ಹರಿಜನ, ಗಿರಿಜನರನ್ನು ಓಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ ಹೊರತು ಮತ್ತೇನೂ ಮಾಡಿಲ್ಲ. ಮಾಜಿ ಸಚಿವ ಯು.ಟಿ. ಖಾದರ್ ಕಾಂಗ್ರೆಸ್ನ ಒಂದು ತುಣುಕು. ಓಟ್ ಬ್ಯಾಂಕ್ ರಾಜಕಾರಣ ಮಾತ್ರ ಅವರಿಗೆ ಗೊತ್ತಿದೆ. ಎಂಎಲ್ಎ ಆಗೋದು, ಗೆದ್ದು ಬರೋದು ಅಷ್ಟೇ ಗೊತ್ತಿದೆ. ಜ್ಞಾನದ ಕೊರತೆಯಿಂದ ಖಾದರ್ ಆ ರೀತಿ ಮಾತನಾಡಿದ್ದಾರೆ ಎಂದರು.
ಮಹಾರಾಷ್ಟ್ರದಲ್ಲಿ ಕಿಚಡಿ ಸರ್ಕಾರ:
ಮಹಾರಾಷ್ಟ್ರದಲ್ಲಿ ಬಹುಮತವಿಲ್ಲದ, ಮೂರು ಪಕ್ಷಗಳ ಕಿಚಡಿ ಸರ್ಕಾರ ಇದೆ. ಆ ಕಿಚಡಿ ಸರ್ಕಾರದ ಮುಖ್ಯಸ್ಥರೇ ಉದ್ಭವ್’ ಠಾಕ್ರೆ. ಜನರ ಭಾವನೆ ಬೇರೆಗೆ ತಿರುಗಿಸಲು ಇಂತಹ ಹೇಳಿಕೆ ನೀಡಿದ್ದಾರೆ ಹೊರತು, ಅವರಲ್ಲಿ ಯಾವುದೇ ಪ್ರಾಮಾಣಿಕ ಕಳಕಳಿ ಇಲ್ಲ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕದಲ್ಲೇ ಇರುತ್ತದೆ. ಈ ಭೂಮಿ ಮೇಲೆ ಜನ ಇರೋವರೆಗೂ ಬೆಳಗಾವಿ ಕನ್ನಡಿಗರದ್ದಾಗಿರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ