ರೈತರಿಗೆ ಕಣ್ಣೀರು ತರಿಸಿದ ಕೋವಿಡ್ 19


Team Udayavani, Mar 29, 2020, 4:19 PM IST

bk-tdy-1

ಬಾಗಲಕೋಟೆ: ಕೋವಿಡ್ 19 ಮಹಾಮಾರಿ ರೋಗದ ಭೀತಿಯನ್ನಷ್ಟೇ ಮೂಡಿಸಿಲ್ಲ. ಬಡವರ ಬದುಕು ದುಸ್ತರಗೊಳಿಸಿದೆ. ಅದರಲ್ಲೂ ಹೊಲದಲ್ಲಿ ಕಷ್ಟುಪಟ್ಟು ವಿವಿಧ ಬೆಳೆ ಬೆಳೆದವರ ಕಣ್ಣಂಚಿನಲ್ಲೀಗ ನೀರು ತರಿಸುತ್ತಿದೆ.

ರೈತರು ತಾವು ಬೆಳೆದ ಬೆಳೆ ಮಾರುಕಟ್ಟೆಗೆ ಕಳುಹಿಸಲು ಆಗುತ್ತಿಲ್ಲ. ಏನೇನೋ ಸರ್ಕಸ್‌ ಮಾಡಿ, ಮಾರುಕಟ್ಟೆಗೆ ತಂದರೂ, ಆ ಬೆಳೆ ಕೇಳುವವರು ದಿಕ್ಕಿಲ್ಲ. ಹೀಗಾಗಿ ರೈತರು, ಕಳೆದ ವರ್ಷ ಪ್ರವಾಹದಿಂದ ಸಂಕಷ್ಟ ಎದುರಿಸಿದರೆ, ಈಗ ಕೋವಿಡ್ 19  ಭೀತಿ ಬದುಕು ಬರಡುಗೊಳಿಸುತ್ತಿದೆ.

ಕಲ್ಲಂಗಡಿ ಬೆಳೆದವರ ಕಣ್ಣಲ್ಲಿ ನೀರು: ಜಿಲ್ಲೆ, ತೋಟಗಾರಿಕೆ ಬೆಳೆಗೆ ಪ್ರಸಿದ್ಧಿ ಪಡೆದಿದ್ದು, ಸುಮಾರು 52 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಪ್ರತಿವರ್ಷ ವಿವಿಧ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ಜನರ ಹೊಟ್ಟೆ ತಂಪಾಗಿಡಲು ಕಲ್ಲಂಗಡಿ ಬೆಳೆಯುವುದು ಜಿಲ್ಲೆಯ ರೈತರ ಪಾರಂಪರಿಕ ಬೆಳೆಯಾಗಿದೆ. ಸಾಳಗುಂದಿ, ಕದಾಂಪುರ, ಛಬ್ಬಿ, ಕಲಾದಗಿ ಹೀಗೆ ವಿವಿಧ ಭಾಗದಲ್ಲಿ ಕಲ್ಲಂಗಡಿ ಅತಿ ಹೆಚ್ಚು ಬೆಳೆಯುತ್ತಾರೆ. ಅದರಲ್ಲೂ ಆಲಮಟ್ಟಿ ಜಲಾಶಯದ ಹಿನ್ನೀರ ಪ್ರದೇಶಕ್ಕೆ ಹೊಂದಿಕೊಂಡಿರುವ ಭೂಮಿಗಳು, ಕಲ್ಲಂಗಡಿ, ದಾಳಿಂಬೆ, ಶೇಂಗಾ ಹೀಗೆ ಹಲವು ಬೆಳೆಗೆ ಪ್ರಸಿದ್ಧಿಯಾಗಿವೆ. ಸಾಳಗುಂದಿ ಮತ್ತು ಕದಾಂಪುರ ಎರಡೇ ಗ್ರಾಮದಲ್ಲಿ ಸುಮಾರು 25 ಎಕರೆಗೂ ಅಧಿಕ ಕಲ್ಲಂಗಡಿ ಬೆಳೆದಿದ್ದು, ಅದೀಗ ಕಟಾವಿಗೆ ಬಂದಿದೆ. ಆದರೆ, ಇಡೀ ಮಾರುಕಟ್ಟೆಯೇ ಸ್ತಬ್ಧಗೊಂಡಿದ್ದರಿಂದ ರೈತ ಕಂಗಾಲಾಗಿ, ಕಣ್ಣೀರು ಹಾಕುವ ಪರಿಸ್ಥಿತಿ ತಲುಪಿದ್ದಾನೆ.

ಮುಂಬೈ-ಹೈದ್ರಾಬಾದ್‌ಗೆ: ಜಿಲ್ಲೆಯಲ್ಲಿ ಬೆಳೆಯುವ ಕಲ್ಲಂಗಡಿ, ದಾಳಿಂಬೆ ಬೆಳೆಗಳನ್ನು ಪುಣೆ, ಮುಂಬೈ ಹಾಗೂ ಹೈದ್ರಾಬಾದ್‌ ಮಾರುಕಟ್ಟೆಗೆ ಅತಿಹೆಚ್ಚು ಕಳುಹಿಸಲಾಗುತ್ತಿತ್ತು. ಬೇಸಿಗೆ ಆರಂಭಗೊಳ್ಳುವ ಮುಂಚೆಯೇ ರೈತರು, ಕಲ್ಲಂಗಡಿ ಬೆಳೆದು, ಬೇಸಿಗೆ ಅವಧಿಯಲ್ಲಿ ಜನರು ಹೆಚ್ಚಾಗಿ ಇಷ್ಟಪಡುವ ಕಾರಣ, ದೇಶದ ವಿವಿಧೆಡೆ ಕಳುಹಿಸಲಾಗುತ್ತಿತ್ತು. ಜತೆಗೆ ಜಿಲ್ಲೆಯ ವರ್ತಕರೂ, ಮುಂಗಡವಾಗಿ ಬೇಡಿಕೆ ಇಡುತ್ತಿದ್ದರು. ಕೆಲವರು ಬಡಾವಣೆಗೆ ತಿರುಗಿ ಮಾರಾಟ ಮಾಡಿದರೆ, ಇನ್ನೂ ಹಲವರು ರಸ್ತೆಯ ಪಕ್ಕದಲ್ಲಿ ಜ್ಯೂಸ್‌ ಅಂಗಡಿ ಹಾಕಿಕೊಂಡು ಕಲ್ಲಂಗಡಿ ಜ್ಯೂಸ್‌ ಮಾರಾಟ ಮಾಡುತ್ತಿದ್ದರು. ಈ ಎಲ್ಲ ಅಂಗಡಿಗಳಿಗೂ ಜಿಲ್ಲೆಯ ರೈತರು ಬೆಳೆದ ಕಲ್ಲಂಗಡಿಯೇ ಬಳಕೆಯಾಗುತ್ತಿತ್ತು. ಆದರೆ, ಇದೀಗ ಕೊರೊನಾ ತಂದ ಲಾಕ್‌ಡೌನ್‌ ಘೋಷಣೆ, ರೈತರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ.

2ರಿಂದ 3 ಎಕರೆ ಕಲ್ಲಂಗಡಿ ಬೆಳೆದರೆ, ಅದು ಬೇಸಿಗೆ ಅವಧಿಯಲ್ಲಿ 4ರಿಂದ 5 ಲಕ್ಷ ಆದಾಯ ತಂದು ಕೊಡುತ್ತಿತ್ತು. ವ್ಯಾಪಾರಸ್ಥರು ಒಂದು ಕೆ.ಜಿ. ಕಲ್ಲಂಗಡಿಯನ್ನು 10ರಿಂದ 15 ರೂ.ಗೆ ಪಡೆದು, ಅದರಿಂದ 50ರಿಂದ 60 ರೂ. ಲಾಭ ಮಾಡಿಕೊಳ್ಳುತ್ತಿದ್ದರು. ಇನ್ನು ದಾಳಿಂಬೆ ಅಂತೂ, 4 ಎಕರೆ ಬೆಳೆದಿದ್ದರೆ ಆ ರೈತ, 6ರಿಂದ 7 ಲಕ್ಷ ಗಳಿಸುತ್ತಿದ್ದ. ಅದಕ್ಕೆಲ್ಲ ಈ ಬಾರಿ, ಕೋವಿಡ್ 19  ಬರೆ ಎಳೆದಿದೆ.

 

ನಾನು 3 ಎಕರೆ ಕಲ್ಲಂಗಡಿ ಬೆಳೆದಿದ್ದೇನೆ. ಬೇಸಿಗೆ ಅವಧಿಯೇ ಈ ಬೆಳೆಗೆ ಹೆಚ್ಚು ಬೇಡಿಕೆ ಇರುತ್ತದೆ. ಪ್ರತಿವರ್ಷ, ಹೈದ್ರಾಬಾದ್‌, ಮುಂಬೈಗೆಲ್ಲ ಕಳುಹಿಸುತ್ತಿದ್ದೆ. ಬಾಗಲಕೋಟೆಯ ವ್ಯಾಪಾರಸ್ಥರೂ ನಮ್ಮ ತೋಟಕ್ಕೆ ಬಂದು ಖರೀದಿ ಮಾಡುತ್ತಿದ್ದರು. ಈ ಬಾರಿ ಸ್ಥಳೀಯ ಹಾಗೂ ಹೊರ ರಾಜ್ಯದ ವ್ಯಾಪಾರಸ್ಥರೂ ಬರುತ್ತಿಲ್ಲ. ಕೋವಿಡ್ 19  ಎಂಬ ಭೀತಿ, ರೈತರಿಗೆ ಕಣ್ಣೀರು ತರಿಸುತ್ತಿದೆ. ಹಾಕಿದ ಹಣವೂ ಬರಲ್ಲ.  ಸುರೇಶ ಬಣಕಾರ, ಸಾಳಗುಂದಿ ರೈತ

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.