ಹೋರಾಟ ಸಮಿತಿಗಳು ಮೌನ; ಸಂತ್ರಸ್ತರಲ್ಲಿ ತಳಮಳ


Team Udayavani, Feb 2, 2020, 11:51 AM IST

bk-tdy-1

ಸಾಂಧರ್ಬಿಕ ಚಿತ್ರ

ಬಾಗಲಕೋಟೆ: ದೇಶದ ಅತಿದೊಡ್ಡ ನೀರಾವರಿ ಯೋಜನೆಗಳಲ್ಲಿ ಪ್ರಮುಖವಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಗೆ ಈ ವರೆಗಿನ ಬಹುತೇಕ ಸರ್ಕಾರಗಳು ತಾತ್ಸಾರ ಭಾವನೆಯಿಂದಲೇ ಕಂಡಿವೆ ಎಂಬ ಅಸಮಾಧಾನ ಸಂತ್ರಸ್ತರಲ್ಲಿವೆ. ಸಂತ್ರಸ್ತರ ಸಮಸ್ಯೆಗಳ ನಿವಾರಣೆಗಾಗಿಯೇ ಹುಟ್ಟಿಕೊಂಡ, ಹೋರಾಟ ಸಮಿತಿಗಳು, ಇದೀಗ ಇಬ್ಭಾಗಗೊಂಡಿದ್ದು, ಆ ಸಮಿತಿಗಳೂ ಮೌನ ವಹಿಸಿರುವುದು, ಸಂತ್ರಸ್ತರಲ್ಲಿ ತಳಮಳವನ್ನುಂಟು ಮಾಡಿದೆ.

ಹೌದು, ರಾಜಕೀಯರಹಿತವಾಗಿದ್ದ ಸಂತ್ರಸ್ತರ ಹೋರಾಟ ಸಮಿತಿ, ದಿ.ವಾಸಣ್ಣ ದೇಸಾಯಿ ಅವರ ನಿಧನದ ಬಳಿಕ ಇಬ್ಭಾಗಗೊಂಡಿವೆ. ಮಾಜಿ ಸಚಿವ ಅಜಯಕುಮಾರ ಸರನಾಯಕ ಅಧ್ಯಕ್ಷತೆಯ ಒಂದು ಸಮಿತಿ ಇದ್ದರೆ, ದಿ.ವಾಸಣ್ಣ ದೇಸಾಯಿ ಅವರ ಪುತ್ರ ಅದೃಶ್ಯಪ್ಪ ದೇಸಾಯಿ ಅವರ ನೇತೃತ್ವದ ಮತ್ತೂಂದು ಸಮಿತಿ ಜಿಲ್ಲೆಯಲ್ಲಿವೆ. ಇವರೆಡರ ಮಧ್ಯೆ ಸಮಾನ ಮನಸ್ಕರ ಮತ್ತೂಂದು ಸಮಿತಿ ಇದ್ದು, ಅವರಿಗೆ ಎಲ್ಲ ರೀತಿಯ ಬಲ ಕಡಿಮೆ ಎಂಬ ಮಾತಿದೆ.

ಹೋರಾಟ ಸಮಿತಿಗಳ ಮೌನ: ಪ್ರತಿ ಬಾರಿ ಸರ್ಕಾರದ ಬಜೆಟ್‌ ಮಂಡನೆಗೆ ಮುನ್ನ, ಸಂತ್ರಸ್ತರ ಹೋರಾಟ ಸಮಿತಿ, ಜನಪ್ರತಿನಿಧಿಗಳು ಒಳಗೊಂಡ ಸಭೆ ನಡೆಸುತ್ತಿತ್ತು. ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ಹೋರಾಟಗಾರರು, ಬಹುತೇಕ ಜನಪ್ರತಿನಿಧಿಗಳು ಭಾಗವಹಿಸಿ, ಸಮಿತಿ ನೇತೃತ್ವದಲ್ಲೇ ಜಲ ಸಂಪನ್ಮೂಲ ಸಚಿವರು, ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗಿ, ಯುಕೆಪಿಗೆ ಬೇಕಾದ ಅನುದಾನ, ಸಂತ್ರಸ್ತರ ಸಮಸ್ಯೆ ಬಿಚ್ಚಿಡುತ್ತಿದ್ದರು. ಹೋರಾಟ ಸಮಿತಿ, ರಾಜಕೀಯರಹಿತವಾಗಿದ್ದವು. ಆದರೆ, ಇದೀಗ ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತರ ಸಮಿತಿಗಳೆಂಬ ಹಣೆಪಟ್ಟಿ ಬೇರೆ ದೊರೆತಿದೆ. ಹೀಗಾಗಿ ಆ ಸಮಿತಿ, ಈ ಸಮಿತಿ ಎಂಬ ಗೊಂದಲ ಬೇರೆ ಸಂತ್ರಸ್ತರಲ್ಲಿ ಮೂಡಿದೆ.

ಯಾವುದೇ ಸಮಿತಿಗಳಿದ್ದರೂ, ಸರ್ಕಾರದ ಮೇಲೆ ತೀವ್ರ ಒತ್ತಡ ತರುವ, ಸಂತ್ರಸ್ತರ ಪರವಾಗಿ ನಿರಂತರ ಧ್ವನಿ ಎತ್ತಬೇಕಾದ ಈ ಸಮಿತಿಗಳು, ಬಜೆಟ್‌ ಪೂರ್ವದಲ್ಲೂ ಮೌನ ವಹಿಸಿರುವುದು ಯುಕೆಪಿ-3ನೇ ಹಂತದಡಿ ಭೂಮಿ ಕಳೆದುಕೊಳ್ಳುವ ರೈತರಿಗೆ ಯೋಗ್ಯ ಬೆಲೆ ಸಿಗುತ್ತಾ? ಎಂಬ ಜಿಜ್ಞಾಸೆ ಕಾಡುತ್ತಿದೆ.

ಕೃಷ್ಣೆಗೆ ತಾತ್ಸಾರ ನಿಲ್ಲದು: ಕಾವೇರಿ ವಿಷಯದಲ್ಲಿ ದಕ್ಷಿಣ ಕರ್ನಾಟಕ ಭಾಗದ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಒಟ್ಟಾಗಿ ಧ್ವನಿ ಎತ್ತುತ್ತಾರೆ. ಆದರೆ, ಕೃಷ್ಣೆಯ ವಿಷಯದಲ್ಲಿ ಉತ್ತರದ ಜನಪ್ರತಿನಿಧಿಗಳಾಗಲಿ, ಹೋರಾಟ ಸಮಿತಿಗಳಾಗಲಿ ಒಟ್ಟಾಗಿ ಧ್ವನಿ ಎತ್ತುತ್ತಿಲ್ಲ ಎಂಬ ಅಸಮಾಧಾನ ಬಹು ವರ್ಷಗಳಿಂದಿದೆ. ಯಾವುದೇ ಪಕ್ಷವಿರಲಿ, ಚುನಾವಣೆ ಬಂದಾಗೊಮ್ಮೆ ಭರವಸೆ ನೀಡಿ, ಅಧಿಕಾರಕ್ಕೆ ಬಂದ ಬಳಿಕ ಉಲ್ಟಾ ಹೊಡೆಯುವ ಪರಂಪರೆ ಮುಂದುವರಿದಿದ್ದು, ಸಂತ್ರಸ್ತರೆಂದರೆ, ಭರವಸೆ ಮೂಲಕ ಮೋಡಿ ಮಾಡಬಹುದೆಂಬ ಕಲ್ಪನೆಗೆ ರಾಜಕೀಯ ಪಕ್ಷಗಳು ಅಂಟಿಕೊಂಡಿವೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಭರವಸೆ ಕೊಟ್ಟು ಉಲ್ಟಾ ಪರಂಪರೆ: ಕಳೆದ 2013ರಲ್ಲಿ ಕಾಂಗ್ರೆಸ್‌ನ ಎಲ್ಲಾ ನಾಯಕರು, ಕೂಡಲಸಂಗಮಕ್ಕೆ ಪಾದಯಾತ್ರೆ ಮೂಲಕ ಬಂದು, ಯುಕೆಪಿ ಯೋಜನೆಗೆ ಪ್ರತಿವರ್ಷ 10 ಸಾವಿರ ಕೋಟಿ ಅನುದಾನ ನೀಡಿ, ಐದು ವರ್ಷದಲ್ಲಿ ಎಲ್ಲ ಯೋಜನೆ, ಭೂಸ್ವಾಧೀನ, ಪುನರ್ವಸತಿ ಪೂರ್ಣಗೊಳಿಸುವ ಭರವಸೆ ನೀಡಿದ್ದರು. ಚುನಾವಣೆಯಲ್ಲಿ ಗೆದ್ದು, ಸಿದ್ದರಾಮಯ್ಯ ಸಿಎಂ ಕೂಡ ಆದರು. ಅದೇ ವರ್ಷ ಆಲಮಟ್ಟಿಗೆ ಬಾಗಿನ ಅರ್ಪಿಸಲು ಬಂದಾಗ, ಈ ಕುರಿತು ಮಾಧ್ಯಮದವರು ಪ್ರಶ್ನಿಸಿದರೆ, ನಾವು ಯುಕೆಪಿಗೆ 10 ಸಾವಿರ ಕೊಡುತ್ತೇವೆ ಎಂದಿಲ್ಲ, ರಾಜ್ಯದ ನೀರಾವರಿ ಯೋಜನೆಗೆ 10 ಸಾವಿರ ಕೋಟಿ ಎಂದಿದ್ದೇವೆ ಎಂದು ಹೇಳಿಕೊಂಡರು. ಈ ಕುರಿತು ರಾಜಕೀಯ ಆರೋಪ-ಪ್ರತ್ಯಾರೋಪ ನಡೆದವು.

ಬಿಜೆಪಿಯಿಂದಲೂ ಅದೇ ರಾಗ: ಕಾಂಗ್ರೆಸ್‌ ಬಳಿಕ, ಇದೀಗ ಬಿಜೆಪಿ ನಾಯಕರೂ ಯುಕೆಪಿ ವಿಷಯದಲ್ಲಿ ಉಲ್ಟಾ ಹೊಡೆದಿದ್ದಾರೆ. ಸ್ವತಃ ಯಡಿಯೂರಪ್ಪ ಅವರು, 2018ರ ಚುನಾವಣೆ ವೇಳೆ ನಗರಕ್ಕೆ ಬಂದಾಗ, ಭೂಮಿ ಕಳೆದುಕೊಳ್ಳುವ ರೈತರಿಗೆ ಯೋಗ್ಯ ಬೆಲೆ ನಿಗದಿ ಮಾಡಲು ಭೂ ಬೆಲೆ ನಿರ್ಧರಣಾ ಸಮಿತಿ ಮಾಡುತ್ತೇವೆ ಎಂದಿದ್ದರು. ಆದರೆ, ಇದೀಗ ಡಿಸಿಎಂ ಕಾರಜೋಳರು, ಕಾನೂನು ಪ್ರಕಾರ ಸಂತ್ರಸ್ತರಿಗೆ ಪರಿಹಾರ ದೊರೆಯಲಿದೆ ಎಂದು ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ಇದೇ ಕಾರಜೋಳರು, 2015ರಲ್ಲಿ ನಡೆದ ಸಂತ್ರಸ್ತರ ಹೋರಾಟದ ವೇಳೆ ಜಿಲ್ಲಾಡಳಿತ ಭವನದ ಎದುರು ಮಾತನಾಡಿದ ಮಾತುಗಳು ಸ್ಮರಿಸಿಕೊಳ್ಳಲಿ ಎಂದು ಹೇಳುವ ಮನಸ್ಥಿತಿಯೂ ಸಂತ್ರಸ್ತರ ಹೋರಾಟ ಸಮಿತಿಗಳು ಮಾಡುತ್ತಿಲ್ಲ ಎಂಬ ಅಸಮಾಧಾನ 3ನೇ ಹೋರಾಟ ಸಮಿತಿ ವ್ಯಕ್ತಪಡಿಸಿದೆ.

ಸಂತ್ರಸ್ತರು ಎಚ್ಚೆತ್ತುಕೊಳ್ಳಲಿ: ಚುನಾವಣೆ ಬಂದಾಗೊಮ್ಮೆ, ಗೆದ್ದ ಬಳಿಕ ಮತ್ತೂಂದು ರೀತಿ ಹೇಳಿಕೆ ಕೊಡುತ್ತ, 50 ವರ್ಷವಾದರೂ ಕೃಷ್ಣಾ ನದಿ ನೀರು ಸದ್ಭಳಕೆ ಹಾಗೂ ನೀರಾವರಿ ಯೋಜನೆ, ಪುನರ್ವಸತಿ, ಭೂಸ್ವಾಧೀನ ಪೂರ್ಣಗೊಳಿಸದ ಎಲ್ಲ ರಾಜಕೀಯ ಪಕ್ಷಗಳ ಧೋರಣೆ ಕುರಿತು ಸಂತ್ರಸ್ತರು ಎಚ್ಚೆತ್ತುಕೊಳ್ಳಬೇಕಿದೆ. ಎರಡು ದಶಕಗಳ ಹಿಂದೆ ನಡೆಯುತ್ತಿದ್ದ ಹೋರಾಟ, ಆ ಒಗ್ಗಟ್ಟು ಪ್ರದರ್ಶನಗೊಳ್ಳಬೇಕಿದೆ ಎಂಬುದು ಪ್ರಜ್ಞಾವಂತರ ಒತ್ತಾಯ.

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.