ತಾಲೂಕು ಘೋಷಣೆಗೆ ಪ್ರಯತ್ನ

ಹೋರಾಟ ಸಮಿತಿಗೆ 1 ಲಕ್ಷ ದೇಣಿಗೆ; ಅಧಿವೇಶನದಲ್ಲಿ ಧ್ವನಿ ಎತ್ತುವೆ: ಸವದಿ

Team Udayavani, Dec 5, 2022, 3:45 PM IST

15

ಮಹಾಲಿಂಗಪುರ: ತಾಲೂಕು ಘೋಷಣೆಗೆ ಆಗ್ರಹಿಸಿ, ಇದೇ ಡಿ. 19ರಂದು ಪ್ರಾರಂಭವಾಗುವ ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಹಾಗೂ ಅಗತ್ಯ ಬಿದ್ದರೆ ಸದನದಲ್ಲಿ ಧರಣಿ ಮಾಡುವುದಾಗಿ ಶಾಸಕ ಸಿದ್ದು ಸವದಿ ಹೇಳಿದರು.

ಪಟ್ಟಣದಲ್ಲಿ ರವಿವಾರ ನಡೆದ ಮಹಾಲಿಂಗಪುರ ತಾಲೂಕು ಹೋರಾಟ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಿಂಗಪುರ ತಾಲೂಕು ಘೋಷಣೆಗೆ ಶೇ. 100ರಷ್ಟು ಅರ್ಹವಾಗಿದೆ. 1.42 ಲಕ್ಷಕ್ಕೂ ಅಧಿಕ ಜನಸಂಖ್ಯೆ ಮತ್ತು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ರಾಜಕೀಯ ವಾಣಿಜ್ಯಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದಿದ ಪಟ್ಟಣವಾಗಿದೆ.

ಮುಧೋಳ ತಾಲೂಕಿನಷ್ಟೇ ವ್ಯಾಪ್ತಿ ಹೊಂದಿರುವ ಜಮಖಂಡಿ ತಾಲೂಕನ್ನು ಈಗಾಗಲೇ 3 ತಾಲೂಕುಗಳಾಗಿ ವಿಂಗಡಿಸಲಾಗಿದೆ. ಮುಧೋಳ ತಾಲೂಕಿನ ಕೆಲ ಹಳ್ಳಿಗಳನ್ನು ಸೇರಿಸಿ ಮಹಾಲಿಂಗಪುರ ಪಟ್ಟಣವನ್ನು ತಾಲೂಕು ಘೋಷಣೆ ಮಾಡಲು ಸಾಕಷ್ಟು ಅನುಕೂಲತೆಗಳಿವೆ. ಇಲ್ಲಿನ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ತಾಲೂಕು ಘೋಷಣೆ ಮಾಡಲು ತಾವು ಜಾತಿಭೇದ ಮತ್ತು ಪಕ್ಷಭೇದ ಮರೆತು ಮುಂದಾಳತ್ವ ವಹಿಸಿ, ಮತ್ತೂಮ್ಮೆ ಮುಖ್ಯಮಂತ್ರಿಗಳ ಭೇಟಿಗೆ ಕಾಲಾವಕಾಶ ಪಡೆದು ನಿಯೋಗದೊಂದಿಗೆ ತೆರಳಿ ಮಹಾಲಿಂಗಪುರ ತಾಲೂಕು ಘೋಷಣೆಯ ಅವಶ್ಯಕತೆ, ಅನಿವಾರ್ಯತೆ, ಅರ್ಹತೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ ತಾಲೂಕು ಘೋಷಣೆಗಾಗಿ ಶಕ್ತಿ ಮೀರಿ ಶ್ರಮಿಸುವುದಾಗಿ ಹೋರಾಟ ವೇದಿಕೆಯ ಸದಸ್ಯರಿಗೆ ಭರವಸೆ ನೀಡಿದರು.

ಇದೇ ವೇಳೆ 235 ದಿನಗಳಿಂದ ಹೋರಾಟ ನಡೆಸುತ್ತಿರುವ ಮಹಾಲಿಂಗಪುರ ತಾಲೂಕು ಹೋರಾಟ ಸಮಿತಿಗೆ 1 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸಿದರು. ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಸಂಗಪ್ಪ ಹಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಧ್ಯಕ್ಷ ಧರೆಪ್ಪ ಸಾಂಗ್ಲಿಕರ, ಢವಳೇಶ್ವರ ಮುಖಂಡ ಎಸ್‌. ಎಂ.ಪಾಟೀಲ ಮಾತನಾಡಿದರು.

ಪುರಸಭೆ ಅಧ್ಯಕ್ಷ ಬಸವರಾಜ ಹಿಟ್ಟಿನಮಠ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಬಸನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಯಲ್ಲನಗೌಡ ಪಾಟೀಲ, ಗಂಗಾಧರ ಮೇಟಿ, ಚನಬಸು ಹುರಕಡ್ಲಿ, ನಿಂಗಪ್ಪ ಬಾಳಿಕಾಯಿ, ಈರಪ್ಪ ದಿನ್ನಿಮನಿ, ಸಿದ್ದುಗೌಡ ಪಾಟೀಲ, ಮಹಾಲಿಂಗಪ್ಪ ಸನದಿ, ಮಲ್ಲಪ್ಪ ಸಿಂಗಾಡಿ, ಪರಪ್ಪ ಬ್ಯಾಕೋಡ, ಮಾರುತಿ ಕರೋಶಿ, ಸುಭಾಸ್‌ ಶಿರಬೂರ, ಅರ್ಜುನ ಹಲಗಿಗೌಡರ, ಶಿವಾನಂದ ತಿಪ್ಪಾ, ಶೇಖರ ಅಂಗಡಿ, ಮಲ್ಲಪ್ಪ ಕೌಜಲಗಿ, ಚೆನ್ನು ದೇಸಾಯಿ, ಭೀಮಪ್ಪ ಸಸಾಲಟ್ಟಿ, ಹನಮಂತ ಜಮಾದಾರ, ಪರಪ್ಪ ಸತ್ತಿಗೇರಿ, ಶಿವಲಿಂಗಪ್ಪ ಕೌಜಲಗಿ, ಚನ್ನಪ್ಪ ಪಟ್ಟಣಶೆಟ್ಟಿ, ಮುಸ್ತಾಕ್‌ ಚಿಕ್ಕೋಡಿ, ಪ್ರಕಾಶ ಚನ್ನಾಳ, ಮಹಾದೇವ ಮೇಟಿ, ಚನ್ನಬಸು ಯರಗಟ್ಟಿ, ಬಸವರಾಜ ಶಿರೋಳ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಶರಣರ ಬದುಕು ಸ್ಫೂರ್ತಿದಾಯಕ: ಸಹಜಾನಂದ ಸ್ವಾಮೀಜಿ

ಶರಣರ ಬದುಕು ಸ್ಫೂರ್ತಿದಾಯಕ: ಸಹಜಾನಂದ ಸ್ವಾಮೀಜಿ

ಮುಧೋಳ: ಅಂಗನವಾಡಿ ಮಕ್ಕಳಿಗೆ ಪಂಚಾಯಿತಿಯಲ್ಲಿ ಪಾಠ!

ಮುಧೋಳ: ಅಂಗನವಾಡಿ ಮಕ್ಕಳಿಗೆ ಪಂಚಾಯಿತಿಯಲ್ಲಿ ಪಾಠ!

ಗುಳೇದಗುಡ್ಡ: ಲೇಔಟ್‌ಗಳ ಅನುಮೋದನೆಗೆ ಸದಸ್ಯರ ಒತ್ತಾಯ

ಗುಳೇದಗುಡ್ಡ: ಲೇಔಟ್‌ಗಳ ಅನುಮೋದನೆಗೆ ಸದಸ್ಯರ ಒತ್ತಾಯ

ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ; ಆರ್‌.ಎಸ್‌.ತಳೇವಾಡ

ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ; ಆರ್‌.ಎಸ್‌.ತಳೇವಾಡ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csadsadsad

ಗೌಡ್ರ ಅಭಿಮಾನಿಗಳೂ…ಕಾಗೇರಿ ಅವರ‌ ಫ್ಯಾನ್ಸ್…! ; ಸೆಲ್ಫಿಗೆ ಮುಗಿಬಿದ್ದರು

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ