ಕಾರಜೋಳ ಪುತ್ರ ಹೆಸರಲ್ಲಿ ವಿವಾದಾತ್ಮಕ ಸ್ಟೇಟಸ್
Team Udayavani, Apr 14, 2018, 6:50 AM IST
ಬಾಗಲಕೋಟೆ: ಮುಧೋಳದ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಅವರ ಪುತ್ರ ಉಮೇಶ ಕಾರಜೋಳ ಅವರ ಹೆಸರಿನಲ್ಲಿರುವ ಫೇಸ್ಬುಕ್ನಲ್ಲಿ “ಮೋದಿ ಓಕೆ, ಬಿಎಸ್ವೈ ಯಾಕೆ?’ ಎಂಬ ಬರಹ ಈಗ ವಿರೋಧ ಪಕ್ಷಗಳ ಟೀಕೆಗೆ ಆಹಾರವಾಗಿದೆ. ಕಾರಜೋಳರ ಕ್ಷೇತ್ರ ಮುಧೋಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರುವ ದಿನವೇ ಈ ಸ್ಟೇಟಸ್ ಬಗ್ಗೆ ವಿರೋಧ ಪಕ್ಷದವರು ಫೇಸ್ಬುಕ್ನಲ್ಲೇ ಟೀಕೆ ಮಾಡಿದ್ದಾರೆ.
ಏ.12ರಂದು ಉಮೇಶ ಕಾರಜೋಳ ಹೆಸರಿನಲ್ಲಿ ಇರುವ ಫೇಸ್ಬುಕ್ನಲ್ಲಿ ಮೋದಿ ಓಕೆ, ಬಿಎಸ್ವೈ ಯಾಕೆ? ಎಂಬ ಬರಹ ಹಾಕಲಾಗಿತ್ತು. ರಾಯಚೂರು ಜಿಲ್ಲೆಯ ಲಿಂಗಸಗೂರು ಕ್ಷೇತ್ರದ ಆಕಾಂಕ್ಷಿ ಆಗಿರುವ ಉಮೇಶ ಅವರಿಗೆ ಅಲ್ಲಿ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಅವರು ಅಸಮಾಧಾನಗೊಂಡು ಈ ರೀತಿ ಹಾಕಿದ್ದಾರೆಂದು ಹೇಳಲಾಗಿದೆ. ಆದರೆ, ಸಂಜೆಯ ಹೊತ್ತಿಗೆ ಉಮೇಶ ಕಾರಜೋಳ ಹೆಸರಿನ ಅದೇ ಫೇಸ್ಬುಕ್ನಲ್ಲಿ, ನಾನು ಯಾವುದೇ ಸ್ಟೇಟಸ್ ಹಾಕಿಲ್ಲ. ಕಿಡಿಗೇಡಿಗಳು ನನ್ನ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾಡಿದ್ದಾರೆಂದು ಮತ್ತೂಂದು ಸ್ಟೇಟಸ್ ಹಾಕಿ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ