ರಾಜಾ ಹಂಡೆ ಹನುಮಪ್ಪ ನಾಯಕನ ವೃತ್ತ ಅನಾವರಣ
Team Udayavani, Jan 18, 2022, 10:04 PM IST
ಬಾಗಲಕೋಟೆ: ಅರಸು ಮನೆತನದಲ್ಲಿ ರಾಜಾ ಹಂಡೆ ಹನುಮಪ್ಪ ನಾಯಕ ವಿಶಿಷ್ಟ ಪರಂಪರೆ ಹೊಂದಿದ್ದಾರೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಜಿ.ಎನ್. ಪಾಟೀಲ ಹೇಳಿದರು. ಕಿರಸೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಜಾ ಹಂಡೆ ಹನುಮಪ್ಪ ನಾಯಕನ ವೃತ್ತ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ವೀರಶೈವ ಲಿಂಗಾಯತ ಹಂಡೆವಜೀರ ಸಮಾಜದ ರಾಜ್ಯ ಉಪಾಧ್ಯಕ್ಷ ಬಿ.ವಿ. ಪಾಟೀಲ, ರಾಜ್ಯದಲ್ಲಿ ಬಹು ಸಂಖ್ಯಾತರಾಗಿರುವ ವೀರಶೈವ ಲಿಂಗಾಯತ ಧರ್ಮದ 39 ಒಳಪಂಗಡಗಳಲ್ಲಿ ಹಂಡೆವಜೀರ ಸಮಾಜಒಂದಾಗಿದೆ. ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಹಂಡೆವಜೀರ ಸಮಾಜ ಸಂಘಟನೆ ಅಭಿವೃದ್ಧಿಗೆ ಪ್ರೋತ್ಸಾಹ, ಬೆಂಬಲ ಅವಶ್ಯವಾಗಿದೆ ಎಂದರು.
ಹಡಗಲಿ-ನಿಡಗುಂದಿಯ ರುದ್ರಮುನಿ ಶಿವಾಚಾರ್ಯರು, ವೀರಶೈವ ಲಿಂಗಾಯತ ಹಂಡೆವಜೀರ ಸಮಾಜದ ಯುವ ಘಟಕದ ರಾಜ್ಯಧ್ಯಕ್ಷ ಬಿ.ಎಸ್.ಪಾಟೀಲ ಮಾತನಾಡಿದರು. ತಾಲೂಕು ಅಧ್ಯಕ್ಷ ಎಂ.ಬಿ. ಪಾಟೀಲ, ಎಸ್. ಎನ್. ಪಾಟೀಲ, ಜಿಲ್ಲಾಧ್ಯಕ್ಷ ವಿ.ಕೆ. ಪಾಟೀಲ, ತಾಲೂಕು ಅಧ್ಯಕ್ಷ ಬಿ.ಎಸ್. ಪಾಟೀಲ, ಎಸ್. ಎಸ್. ಪಾಟೀಲ, ಬಿ.ಎ. ಶಿವಣಗಿ, ರೇಣುಕಾ ಹಂಡರಗಲ್ಲ, ಅಪ್ಪನಗೌಡ ಬೊದುರು, ಯಮನಪ್ಪಗೌಡ ಗೌಡರ, ಪ್ರಕಾಶ ಪಾಟೀಲ, ಮಹಾಂತೇಶ ಗೌಡರು, ಸಿದ್ದನಗೌಡ ಗೌಡರ, ಅವ್ವನಗೌಡ ಗ್ವಾತಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್