ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಅನುದಾನ ಬಳಕೆ
Team Udayavani, Dec 28, 2019, 12:11 PM IST
ಬಾಗಲಕೋಟೆ: ಜಿಲ್ಲೆಯಲ್ಲಿ ಖನಿಜ ಉತ್ಪಾದಿಸುವ ಪ್ರದೇಶಗಳ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಮೂಲ ಸೌಲಭ್ಯಗಳ ಅಭಿವೃದ್ಧಿಗಾಗಿ 55 ಕೋಟಿ ರೂ.ಗಳ ಡಿಎಂಎಫ್ ಅನುದಾನ ಬಳಕೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಡಿಎಂಎ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ವಿವಿಧ ಖನಿಜಗಳ ಉತ್ಪಾದನೆಗಾಗಿ ಒಟ್ಟು 55 ಕೋಟಿ ರೂ.ಗಳ ಕರ ಸಂಗ್ರಹವಾಗಿದೆ. ಈ ಅನುದಾನವನ್ನು ಜಿಲ್ಲೆಯ ಎಲ್ಲ ಮತಕ್ಷೇತ್ರಗಳ ಖನಿಜ ಉತ್ಪಾದಿಸುವ ಕೈಗಾರಿಕೆ ಬಾಧಿತ ಗ್ರಾಮಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲಾಗುವುದು ಎಂದರು.
ಈ ಕರದಲ್ಲಿ ಈಗಾಗಲೇ 7 ಕೋಟಿ ರೂ. ಖರ್ಚಾಗಿದ್ದು, ಉಳಿದ ಹಣವನ್ನು ಬಳಕೆ ಮಾಡಲಾಗುವುದು. ಬಾದಾಮಿ ತಾಲೂಕಿನಲ್ಲಿ 1.67 ಕೋಟಿ ರೂ., ಬಾಗಲಕೋಟೆಯಲ್ಲಿ 1.55 ಕೋಟಿ ರೂ., ಬೀಳಗಿಯಲ್ಲಿ 32 ಲಕ್ಷ ರೂ., ಹುನಗುಂದ 13.83 ಕೋಟಿ ರೂ., ಜಮಖಂಡಿ 8 ಕೋಟಿ ರೂ., ಮುಧೋಳದಲ್ಲಿ 35 ಕೋಟಿ ಹಾಗೂ ತೇರದಾಳದಲ್ಲಿ 7 ಲಕ್ಷ ರೂ. ಸಂಗ್ರಹವಾಗಿದೆ. ಈ ಅನುದಾನವನ್ನು ಗ್ರಾಮಗಳ ರಸ್ತೆ, ಚರಂಡಿ, ನೀರು, ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮುಂತಾದವುಗಳಿಗೆ ಬಳಸಲಾಗುವುದು. ದೇವಸ್ಥಾನ ಕಟ್ಟಡ ಮಾರ್ಗಸೂಚಿಯಡಿ ಅವಕಾಶವಿಲ್ಲವೆಂದು ಸಚಿವರು ತಿಳಿಸಿದರು.
ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಬಾಗಲಕೋಟೆ ನಗರಕ್ಕೆ 24/7 ನಿರಂತರ ಕುಡಿಯುವ ನೀರು ಸರಬರಾಜಿಗೆ 60 ಕೋಟಿ ರೂ.ಗಳ ಹೆರಕಲ್ ಯೋಜನೆಯನ್ನು ಇದೇ ಮಾರ್ಚ್ ಒಳಗಾಗಿ ಪೂರ್ಣಗೊಳಿಸಲಾಗುವುದು. ಬರುವ ಏಪ್ರಿಲ್ ಮೊದಲ ವಾರದಿಂದ ನೀರು ಸರಬರಾಜು ಮಾಡಲಾಗುವುದು. ಈಗಾಗಲೇ ಅರಣ್ಯ ಇಲಾಖೆಯವರ ಅನುಮತಿ ದೊರಕಿದೆ ಎಂದು ತಿಳಿಸಿದರು. ಸಂಸದ ಪಿ.ಸಿ ಗದ್ದಿಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ. ಎಸ್ಪಿ ಲೋಕೇಶ ಜಗಲಾಸರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.