Weaver ನೇಕಾರಿಕೆಯ ಜೊತೆ ವೈಜ್ಞಾನಿಕತೆಯನ್ನು ಬಳಸಿಕೊಳ್ಳಿ: ಸಚಿವ ಶಿವಾನಂದ ಪಾಟೀಲ

ವಿಶ್ವಾಸ ನೀಡುವ ಮೊದಲೇ ಆದೇಶ ಸಂತಸ ತಂದಿದೆ

Team Udayavani, Aug 27, 2023, 6:13 PM IST

Weaver ನೇಕಾರಿಕೆಯ ಜೊತೆ ವೈಜ್ಞಾನಿಕತೆಯನ್ನು ಬಳಸಿಕೊಳ್ಳಿ: ಸಚಿವ ಶಿವಾನಂದ ಪಾಟೀಲ

ರಬಕವಿ ಬನಹಟ್ಟಿ : ನೇಕಾರಿಕೆಯ ಜೊತೆ ವೈಜ್ಞಾನಿಕತೆಯನ್ನು ಬಳಸಿಕೊಂಡು ನೇಕಾರರು ಮುಂದೆ ಬರಲು ಪ್ರಯತ್ನಿಸಬೇಕು ಎಂದು ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ರವಿವಾರ ನಗರದ ಶ್ರೀ ಕಾಡಸಿದ್ಧೇಶ್ವರ ದೇವಾಲಯದಲ್ಲಿ ನೇಕಾರ ಒಕ್ಕೂಟಗಳು ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನೇಕಾರ ಮಕ್ಕಳು ಪ್ರತಿಭಾವಂತರಾಗಿದ್ದಾರೆ. ತಂತ್ರಜ್ಞಾನವನ್ನು ಬಳಸಿಕೊಂಡು ನೇಕಾರರು ಬದುಕಲು ಕಲಿಯಬೇಕು. ಕೈಮಗ್ಗದ ಜೊತೆ ಪಾವರಲೂಮ್ ಮಗ್ಗಗಳನ್ನು ಕಾಲಕ್ಕೆ ತಕ್ಕಂತೆ ಬದಲಾವಣೆ ಮಾಡುತ್ತಾ ಅಭಿವೃದ್ಧಿ ಹೊಂದಬೇಕು.

ರಾಜ್ಯದ ನೇಕಾರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ನೇಕಾರರ ಬರವಸೆಯನ್ನು ಆದಷ್ಟು ಬೇಗನೆ ಈಡೇರಿಸುವ ವಿಶ್ವಾಸ ವ್ಯಕ್ತಪಡಿಸುವ ಮೊದಲೇ ಆದೇಶ ಹೊರಡಿಸಿರುವುದು ಸಂತಸ ತಂದಿದೆ ಅದು ಜವಳಿ ಹಾಗು ಸಕ್ಕರೆ ಸಚಿವ ಪಾಟೀಲ ಹೇಳಿದರು.

ಪ್ರತಿಯೊಬ್ಬ ನೇಕಾರನಿಗೂ ಗರಿಷ್ಠ 10 ಎಚ್‌ಪಿವರೆಗಿನ ವಿದ್ಯುತ್ ಬಿಲ್‌ನ್ನು ಯಾವುದೇ ನಿಯಮ ಹಾಕದೆ ಸಂಪೂರ್ಣ ಉಚಿತ ನೀಡುವಲ್ಲಿ ಸರ್ಕಾರ ಸೂಚಿಸಿದೆ. ಸರ್ಕಾರದ ವಿವಿಧ ಗ್ಯಾರಂಟಿಗಳ 52 ಸಾವಿರ ಕೋಟಿಗಳ ಹಣ ವಿನಿಯೋಗ ಮಾಡಬೇಕಿದೆ. ಹೀಗಾಗಿ ನೇಕಾರರ ಉಚಿತ ಗ್ಯಾರಂಟಿಯ ವಿಳಂಬವಾಗಿದೆ ಎಂದು ಪಾಟೀಲ ತಿಳಿಸಿದರು.

ಹಲವಾರು ಯೋಜನೆಗಳ ಜಾರಿಯಿಂದ ಮಾಸಿಕ 120 ಕೋಟಿ ರೂ.ಗಳಷ್ಟು ಹೊರೆಯಾಗುತ್ತಿದೆ. ಆದಾಗ್ಯೂ ಸರ್ಕಾರ ಎಲ್ಲ ಯೋಜನೆಗಳನ್ನು ಒದಗಿಸುವಲ್ಲಿ ನುಡಿದಂತೆ ನಡೆಯುವಲ್ಲಿ ಯಶಸ್ವಿಯಾಗಿದೆ ಎಂದರು.

ನಿರಂತರ ಉದ್ಯೋಗ ನಿಶ್ಚಿತ: ಹಿಂದಿನ ಸರ್ಕಾರ ಮಾಡಿದ ತಪ್ಪು ನಿರ್ಧಾರಗಳಿಂದ ಕೆಎಚ್‌ಡಿಸಿ ನೇಕಾರರರಿಗೆ ಕಚ್ಚಾ ವಸ್ತು ಪೂರೈಕೆ ಸ್ಥಗಿತಗೊಂಡಿದೆ. ಕೇಂದ್ರಿಯ ಭಂಡಾರ ಹಾಗು ಎನ್‌ಸಿಸಿಎಫ್‌ಗಳಿಗೆ ಬಟ್ಟೆ ಪಡೆಯುವುದು ಸ್ಥಗಿತಗೊಳಿಸಿದ್ಧಾರೆ. ವಿದ್ಯಾ ವಿಕಾಸ ಯೋಜನೆಯಡಿ ಕಳಪೆ ಮಟ್ಟದ ಹಾಗು ಕಾನೂನು ಬಾಹಿರವಾಗಿ ಬಟ್ಟೆ ವಿತರಣೆ ಮಾಡಿದ್ದು ತೊಂದರೆಯಾಗಿದೆ. ಕೆಎಚ್‌ಡಿಸಿ ನೇಕಾರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಂಡು ಮತ್ತೇ ನೇಕಾರರಿಗೆ ಉದ್ಯೋಗ ಕಲ್ಪಿಸುವುದಾಗಿ ಭರವಸೆ ನೀಡಿದರು.

ಈಗಾಗಲೇ ಈ ಕುರಿತು ಸಚಿವರುಗಳಾದ ಸತೀಶ ಜಾರಕಿಹೊಳಿ ಹಾಗು ಮಧು ಬಂಗಾರಪ್ಪನವರೊಂದಿಗೆ ಮಹತ್ವದ ಮಾತುಕತೆ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾಗಿದೆ. ಬರುವ ಶುಕ್ರವಾರದಂದು ಜರುಗಲಿರುವ ಕ್ಯಾಬೆನೇಟ್ ಸಭೆಯಲ್ಲಿ ಎಲ್ಲದಕ್ಕೂ ಸೂಕ್ತ ಪರಿಹಾರ ಕಂಡು ಕೊಳ್ಳಲಾಗುವುದು ಎಂದು ಸಚಿವ ಪಾಟೀಲ ತಿಳಿಸಿದರು.

ಇಲ್ಲಿನ ನೇಕಾರ ಮುಖಂಡರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಹಂತ ಹಂತವಾಗಿ ನೇಕಾರರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇವೆ. ನೇಕಾರರ ಜೊತೆ ನಮ್ಮ ಸರಕಾರ ಯಾವಾಗಲೂ ಇರುತ್ತದೆ. ಜವಳಿ ಇಲಾಖೆಯನ್ನು ಸದೃಢ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭ ಸಿದ್ದು ಕೊಣ್ಣೂರ, ಮಾಮೂನ್ ಪಾರ್ಥನಳ್ಳಿ, ರಾಜು ಭದ್ರನ್ನವರ, ಪರಪ್ಪ ಉರಭಿನವರ, ಬಸವರಾಜ ಕೊಕಟನೂರ, ಶಿವಲಿಂಗ ಟಿರ್ಕಿ, ಕಾಡಪ್ಪ ಜಿಡ್ಡಿಮನಿ, ಆನಂದ ಜಗದಾಳ, ಶಂಕರ ಕೆಸರಗೊಪ್ಪ, ಪಂಡಿತ ಬೋಸ್ಲೆ, ವಿಜಯ ಜವಳಗಿ, ಸಂಗಪ್ಪ ಉದಗಟ್ಟಿ, ಮಹಾದೇವ ನುಚ್ಚಿ, ಹರ್ಷವರ್ಧನ ಪಟವರ್ಧನ, ಎಸ್. ಡಿ. ಮುರಗೋಡ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.