ಜೀವನಕ್ಕೆ ಶರಣರ ವಚನಗಳು ದಾರಿದೀಪ: ಹಿರೇಮಠ

ಆದರ್ಶಮಯ ಸಂಸ್ಕಾರಗಳನ್ನು ಬೆಳೆಸಿಕೊಂಡು ಜೀವನ ಸಾಗಬೇಕಾಗಿದೆ.

Team Udayavani, Jan 18, 2022, 5:20 PM IST

ಜೀವನಕ್ಕೆ ಶರಣರ ವಚನಗಳು ದಾರಿದೀಪ: ಹಿರೇಮಠ

ಬಾಗಲಕೋಟೆ: ಜೀವನದ ಅಪಮೌಲ್ಯಗಳ ಬಗ್ಗೆ ಗೊಂದಲಗಳಿಗೆ ಬಸವಾದಿ ಶರಣರ ತತ್ವಗಳು ಪರಿಹಾರ ನೀಡಬಲ್ಲವು ಎಂದು ಬಾದಾಮಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ  ಡಾ| ಜಿ.ಜಿ. ಹಿರೇಮಠ ಹೇಳಿದ್ದಾರೆ.

ನವನಗರದ ಸೆಕ್ಟರ್‌ ನಂ.52 ರ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಅಖೀಲ ಭಾರತೀಯ ಸಾಹಿತ್ಯ ಪರಿಷತ್ತು ತಾಲೂಕು ಸಮಿತಿ ಹಾಗೂ ಜತ್ತಿ ಕುಟುಂಬವು ಲಿಂ| ಸಂಗಪ್ಪ ದಾನಪ್ಪ ಜತ್ತಿ ಸ್ಮರಣಾರ್ಥ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಹಾಗೂ ಸಾಹಿತ್ಯ ಸಿಂಚನ ವೇದಿಕೆಯ ಸರಣಿ ಉಪನ್ಯಾಸ ಮಾಲಿಕೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದಿನ ಪರಿಸ್ಥಿತಿ ಅವಲೋಕಿಸಿದರೆ ಜೀವನದ ಮೌಲ್ಯಗಳು ಮತ್ತು ಅಪಮೌಲ್ಯಗಳ ಬಗ್ಗೆ ಗೊಂದಲಗಳ ಸಾಗಿಸುತ್ತಿರುವ ಜೀವನಕ್ಕೆ ಬಸವಾದಿ ಶರಣರ ತತ್ವಗಳು ಹಾಗೂ ಅವರ ವಚನಗಳು ದಾರಿ ದೀಪವಾಗಬಲ್ಲವು, ಸಮಸ್ಯೆಗಳಿಗೆ ಪರಿಹಾರ ಸೂಚಿಸಬಲ್ಲವು ಎಂದರು.

ಜಿಲ್ಲಾ ಕಸಾಪ ನೂತನ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಮಾತನಾಡಿ, ಶರಣರ ತತ್ವಾದರ್ಶಗಳು ಹಾಗೂ ಸಾಹಿತ್ಯದ ಮೂಲಕ ಸಮಾಜದಲ್ಲಿ ಪರಿಣಾಮಕಾರಿ ಬದಲಾವಣೆ ತರಬಹುದಾಗಿದೆ ಎಂದು ತಿಳಿಸಿದರು.

ಅಖೀಲ ಭಾರತೀಯ ವೀರಶೈವ ಮಹಾಸಭೆಯ ಜಿಲ್ಲಾ ಧ್ಯಕ್ಷ ಜಿ.ಎನ್‌. ಪಾಟೀಲ ಮಾತನಾಡಿ, ಹಿರಿಯರ ಮಾರ್ಗದರ್ಶನದಲ್ಲಿ ಶರಣರ ತತ್ವ ಮೈಗೂಡಿಸಿಕೊಂಡು ಆದರ್ಶಮಯ ಸಂಸ್ಕಾರಗಳನ್ನು ಬೆಳೆಸಿಕೊಂಡು ಜೀವನ ಸಾಗಬೇಕಾಗಿದೆ. ಅವಿಭಕ್ತ ಕುಟುಂಬಗಳು ನಶಿಸುತ್ತಿರುವ ಇಂದಿನ ದಿನಗಳಲ್ಲಿ ಪ್ರೀತಿ, ವಿಶ್ವಾಸ, ನಂಬಿಕೆ ಹಾಗೂ ಸಂಬಂಧಗಳಿಗೆ ಬೆಲೆ ನೀಡಿ ಬದುಕುತ್ತಿರುವ ಜತ್ತಿ ಕುಟುಂಬ ಮಾದರಿಯಾಗಿದೆ ಎಂದು ಹೇಳಿದರು.

ಬಿವಿವಿ ಸಂಘದ ಮಾನವ ಸಂಪನ್ಮೂಲ ಅಧಿಕಾರಿ, ಸಾಹಿತಿ ಸಿದ್ದರಾಮ ಮನಹಳ್ಳಿ, ಬಿಮ್ಸ್‌ ನಿರ್ದೇಶಕ ಡಾ| ಆರ್‌.ಜಿ. ಅಳ್ಳಗಿ, ಸಾಹಿತಿ ಡಾ| ಪ್ರಕಾಶ ಖಾಡೆ, ಬಿವಿವಿ ಸಂಘದ ಪಾಲಿಟೆಕ್ನಿಕ್‌  ಸಂಸ್ಥೆ ಪ್ರಾಚಾರ್ಯ ಜಿ.ಬಿ. ದಾನಶೆಟ್ಟಿ ಮಾತನಾಡಿದರು. ಅಖೀಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಎಸ್‌.ಜಿ. ಕೋಟಿ, ಶ್ರೀಶೈಲಪ್ಪ ದಾನಪ್ಪ ಜತ್ತಿ, ಶೇಖರಪ್ಪ ಜತ್ತಿ, ಅಶೋಕ ಜತ್ತಿ, ವಿರುಪಾಕ್ಷಿ ಜತ್ತಿ, ಸೋಮಶೇಖರ ಜತ್ತಿ, ವೀರಭದ್ರಪ್ಪ ವಾಲ, ವಿಜಯಲಕ್ಷ್ಮೀ ನರೇಗಲ್ಲ, ಶಿವಲೀಲಾ ಸಂಬಣ್ಣವರ, ಬಸವರಾಜ ಬಿದರಿ ಉಪಸ್ಥಿತರಿದ್ದರು.

ಉಮಾ ಜತ್ತಿ ಪ್ರಾರ್ಥಿಸಿದರು. ಪಿ.ಡಿ. ಜತ್ತಿ ಸ್ವಾಗತಿಸಿದರು. ಮಂಜುಳಾ ಅಂಗಡಿ, ನಿರ್ಮಲಾ ಲೂತಿಮಠ ಪರಿಚಯಿಸಿದರು. ಶ್ರೀಶೈಲ ಮಠ ನಿರೂಪಿಸಿದರು. ಶೇಖರ ಗೊಳಸಂಗಿ ವಂದಿಸಿದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.