ವೀರಶೈವ ಲಿಂಗಾಯತ ಸಮಾಜ ಹೆಮ್ಮರ

ಸ್ವಾರ್ಥ ಸಾಧನೆಗೆ ಸಮಾಜ ಒಡೆಯುವುದು ಸರಿಯಲ್ಲ

Team Udayavani, Apr 5, 2022, 2:38 PM IST

11

ಹುನಗುಂದ: ವೀರಶೈವ ಲಿಂಗಾಯತ ಧರ್ಮ ವಿವಿಧ ಜಾತಿ, ಉಪಜಾತಿಗಳಿಂದ ಕೂಡಿದ ಬೃಹತ್‌ ಹೆಮ್ಮರ. ಆದರೆ ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ಆ ಹೆಮ್ಮರದ ರಂಬೆ-ಕೊಂಬೆ ಕಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಗಚ್ಚಿನಮಠದಲ್ಲಿ ವೀರಮಾಹೇಶ್ವರ (ಬೇಡ ಜಂಗಮ) ಸಮಾಜ ಮತ್ತು ಗಚ್ಚಿನಮಠದ ಸದ್ಭಕ್ತರ ಸಹಯೋಗದಲ್ಲಿ ನಡೆದ ಜಗದ್ಗುರು ಶ್ರೀ ರೇಣುಕಾಚಾರ್ಯ, ಬಸವೇಶ್ವರ ಹಾಗೂ ಹಾನಗಲ್ಲ ಕುಮಾರೇಶ್ವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾಗಿರಬೇಕು. ಇದನ್ನು ಒಡೆಯಲು ಪ್ರಯತ್ನಿಸುವರಿಗೆ ಲಾಭಕ್ಕಿಂತ ಹಾನಿಯೇ ಹೆಚ್ಚು. ಬೇಡ ಜಂಗಮ ಪ್ರಮಾಣಪತ್ರ ಪಡೆಯುವ ಬೇಡಿಕೆ ಇಟ್ಟಕೊಂಡು ಹೋರಾಟ ಮಾಡುತ್ತಿರುವುದು ಅದು ನಿಮ್ಮ ಜನ್ಮ ಸಿದ್ಧ ಹಕ್ಕು. ಹೋರಾಟ ಮಾಡಿ ಅದಕ್ಕೆ ನನ್ನ ಅಭ್ಯಂತರವಿಲ್ಲ ಎಂದರು.

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ವೀರಶೈವ ಲಿಂಗಾಯತ ಸಮಾಜಕ್ಕೆ ಆದಿ ರೇಣುಕಾಚಾರ್ಯರ ಮಾರ್ಗದರ್ಶನ ಅಪಾರವಾಗಿದೆ. ವೀರಶೈವ ಧರ್ಮದ ಸಂಪ್ರದಾಯದಲ್ಲಿ ಬೆಳೆದ ನಾವುಗಳು ಇಂದು ಆ ಧರ್ಮದ ಆಚಾರ-ವಿಚಾರ ಮರೆಯುತ್ತಿದ್ದೇವೆ. ವೀರಶೈವ ಧರ್ಮದ ಅನೇಕ ಒಳಪಂಗಡಗಳ ಹಲವು ಬೇಡಿಕೆ ಸರ್ಕಾರದ ಮುಂದಿವೆ. ಜಂಗಮ ಸಮಾಜಕ್ಕೆ ಮೀಸಲಾತಿ ಬೇಕು.ನಮ್ಮ ಪಾಲಿನ ಹಕ್ಕು ಪಡೆಯಲು ಹೋರಾಟ ಅನಿವಾರ್ಯ. ತುಳಿತಕ್ಕೆ ಒಳಗಾದ ಸಮಾಜಕ್ಕೆ ನ್ಯಾಯ ಒದಗಿಸುವ ವ್ಯವಸ್ಥೆ ಸಂವಿಧಾನದಲ್ಲಿದೆ ಎಂದರು.

ಎಸ್‌.ಆರ್‌. ನವಲಿಹಿರೇಮಠ ಮಾತನಾಡಿ, ಜಂಗಮ ಸಮಾಜ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದೆ. ಕಡುಬಡತನದಲ್ಲಿ ಜೀವನ ಸಾಗಿಸುತ್ತಿರುವ ಜಂಗಮರ ಸ್ಥಿತಿ ಚಿಂತಾಜನಕವಾಗಿದೆ. ಶೇ.85 ಜನಾಂಗ ಆರ್ಥಿಕವಾಗಿ ಹಿಂದುಳಿದಿದೆ. ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಅತ್ಯಂತ ಕಡು ಬಡವ ಜಂಗಮ ಸಮಾಜದವರನ್ನು ಕಾಣಬಹುದು. ಪ್ರತಿಯೊಂದು ಸರ್ಕಾರ ಈ ಸಮಾಜವನ್ನು ಕಡೆಗಣಿಸಿವೆ. ಸಂವಿಧಾನದ ಜಾತಿ ಪಟ್ಟಿಯಲ್ಲಿ ಜಂಗಮ ಎನ್ನುವ ಪದ ಬಳಕೆಯಿಲ್ಲ.ಬೇಡ ಜಂಗಮ ಎಂಬುವುದು ಎಸ್‌ಸಿ ಪಟ್ಟಿಯಲ್ಲಿದೆ. ಆದರೆ ಅಧಿಕಾರಿಗಳು ಮಾತ್ರ ಬೇಡ ಜಂಗಮರು ನೀವಲ್ಲ ಅವರು ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುವ ಜನಾಂಗ ಮಾವು ಸಾಗರು. ಅವರು ಆಂಧ್ರಪ್ರದೇಶದಲ್ಲಿ ಮಾತ್ರ ಇದ್ದಾರೆ. ಕರ್ನಾಟಕದ ಯಾವ ಜಿಲ್ಲೆಯಲ್ಲಿಯೂ ಬೇಡ ಜಂಗಮರಿಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ. ಸರ್ಕಾರ ಈ ಸಮಾಜಕ್ಕೆ ಸೂಕ್ತ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.

ಐ.ವಿ. ಹಿರೇಮಠ ಮಾತನಾಡಿದರು. ಗಚ್ಚಿನಮಠದ ಅಮರೇಶ್ವರ ದೇವರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಬಸವೇಶ್ವರ ಬ್ಯಾಂಕಿನ ನೂತನ ನಿರ್ದೇಶಕರನ್ನು ಜಂಗಮ ಸಮಾಜದಿಂದ ಸನ್ಮಾನಿಸಲಾಯಿತು.

ಈ ವೇಳೆ ತಾಳಿಕೋಟಿ ಅನ್ನದಾನೇಶ್ವರ ಸಂಸ್ಥಾನ ಮಠದ ಜಯಸಿದ್ದೇಶ್ವರ ಶಿವಾಚಾರ್ಯರು, ಕೂಡಲಸಂಗಮದ ಸಾರಂಗಮಠದ ಜಾತವೇದ ಶಿವಾಚಾರ್ಯರು, ನಂದವಾಡಗಿಯ ಡಾ| ಚನ್ನಬಸವದೇವರು ಹಿರೇಮಠ, ವೀರಭದ್ರಯ್ಯ ಸರಗಣಾಚಾರಿ, ಪುರಸಭೆ ಸದಸ್ಯೆ ಗಿರಿಜಮ್ಮ ಮಠ, ಮಹಾಂತಯ್ಯ ಗಚ್ಚಿನಮಠ ಸೇರಿದಂತೆ ಇತರರಿದ್ದರು.

ಶಿವಶಕ್ತಿ ಘಂಟಿಮಠ ಸ್ವಾಗತಿಸಿದರು. ವಿಶ್ವರಾಧ್ಯ ಹಿರೇಮಠ ವೇದ ಪಠಣ ಮಾಡಿದರು.ವಿರೂಪಾಕ್ಷಯ್ಯ ಹಿರೇಮಠ ನಿರೂಪಿಸಿದರು. ಮಹಾಂತೇಶ ಮಠ ವಂದಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.