ನಿರ್ಲಕ್ಷ್ಯ ಖಂಡಿಸಿ ಸಂತ್ರಸ್ತರ ನಿರಶನ
ಪ್ರವಾಹದಿಂದ ಮಿರ್ಜಿ ಗ್ರಾಮದ ಮನೆಗಳಿಗೆ ಹಾನಿ-ಪರಿಹಾರಕ್ಕೆ ಆಗ್ರಹ
Team Udayavani, Sep 21, 2019, 9:50 AM IST
ಬಾಗಲಕೋಟೆ: ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಮಿರ್ಜಿ ಗ್ರಾಮಸ್ಥರನ್ನು ತಾಲೂಕು ಆಡಳಿತ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿ ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಿರ್ಜಿ ಗ್ರಾಮದಿಂದ ಆಗಮಿಸಿದ್ದ ನೂರಾರು ಜನರು, ಡಿಸಿ ಕಚೇರಿ ಎದುರು ಪ್ರತಿಭಟಿಸಿ ಮನವಿ ಸಲ್ಲಿಸಿದರು. ಕಳೆದ ತಿಂಗಳು ಘಟಪ್ರಭಾ ನದಿ ಪ್ರವಾಹದಿಂದ ಮಿರ್ಜಿ ಗ್ರಾಮಕ್ಕೆ ನೀರು ಹೊಕ್ಕಿತ್ತು. ಇದರಿಂದ ಶೇ.70ರಷ್ಟು ಮನೆಗಳು ಬಿರುಕು ಬಿಟ್ಟು ಬೀಳುವ ಸ್ಥಿತಿಯಲ್ಲಿವೆ. ಆದರೆ, ಅಧಿಕಾರಿಗಳು ಮನೆಗಳ ಸಮೀಕ್ಷೆಯಲ್ಲಿ ಕೇವಲ ಶೇ.40ರಷ್ಟು ಮನೆಗಳನ್ನು ಪರಿಗಣಿಸಿದ್ದಾರೆ. ಇದರಿಂದ ಸಂತ್ರಸ್ತರಿಗೆ ತೀವ್ರ ಅನ್ಯಾಯವಾಗಿದೆ. ಕೂಡಲೇ ಪ್ರವಾಹದಿಂದ ಬಿರುಕುಬಿಟ್ಟ ಮನೆಗಳಿಗೆ ಪರಿಹಾರ ನೀಡುವ ಜತೆಗೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮದ ಪ್ರಮುಖರಾದ ಯಲ್ಲಪ್ಪ ಲೋಗಾವಿ, ಈಶ್ವರ ಸವದತ್ತಿ, ಅಜಿತ ಕಲ್ಲೋಳಿ, ವೆಂಕಪ್ಪ ಲೋಕಾವಿ, ಬಸಪ್ಪ ಕಂಬಾರ, ಬಸಪ್ಪ ಜ್ಯೋತೆಪ್ಪಗೋಳ, ಮಂಜು ಆಲಕಟ್ಟಿ, ಸದಾಶಿವ ತಮದಟ್ಟಿ, ಪ್ರಕಾಶ ಕುಂಬಾರ, ಈರಪ್ಪ ಕವಳ್ಳಿ, ಬಾಳಾಸಾಬ ಇಂಗಳೆ, ರಾಚಪ್ಪ ಕಣಬೂರ, ಪ್ರಕಾಶ ನಾಗನೂರ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು