ಸದನದಲ್ಲಿ ಶಿಕ್ಷಕರ ಪರ ನಿರಂತರ ಧ್ವನಿ ಎತ್ತುವೆ: ಗೌಡರ

ಶಿಕ್ಷಕರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ

Team Udayavani, Jun 10, 2022, 10:30 AM IST

4

ಬಾಗಲಕೋಟೆ: ಶಿಕ್ಷಕರಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. 7ನೇ ವೇತನ ಕೊಡಿಸುವಲ್ಲಿ ಮುಂಚೂಣಿ ಪಾತ್ರ ವಹಿಸಿದ್ದೇನೆ. ಶಿಕ್ಷಕನಾಗಿ ಜಿಲ್ಲೆ, ರಾಜ್ಯದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಈಗ ಸದನದಲ್ಲಿ ಶಿಕ್ಷಕರ ಪರ ಧ್ವನಿ ಎತ್ತುವ ಆಶಯ ಹೊಂದಿದ್ದು, ಮತದಾರರು ಅವಕಾಶ ನೀಡಬೇಕು ಎಂದು ವಾಯವ್ಯ ಶಿಕ್ಷಕರ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀನಿವಾಸ ಬಸನಗೌಡ ಗೌಡರ ಮನವಿ ಮಾಡಿದರು.

ನವನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಶಿಕ್ಷಕರಿಗೆ ಮತ್ತು ಶೈಕ್ಷಣಿಕ ರಂಗದಲ್ಲಿ ಬಿಜೆಪಿ-ಕಾಂಗ್ರೆಸ್‌ ಕೊಡುಗೆ ಶೂನ್ಯ. ಆಯಾ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಶಿಕ್ಷಕರ ಸಮಸ್ಯೆ ಪರಿಹರಿಸುವ ಚಿಂತನೆ ಇಲ್ಲ. ತಮ್ಮ ತಮ್ಮ ರಾಜಕೀಯ ಸ್ಥಾನಮಾನಕ್ಕಾಗಿ ಚುನಾವಣೆಗೆ ಇಳಿದಿದ್ದಾರೆ. ಈವರೆಗೆ ಶಿಕ್ಷಕರಿಗೆ ಮತ್ತು ಶೈಕ್ಷಣಿಕ ರಂಗಕ್ಕೆ ಕಾಂಗ್ರೆಸ್‌-ಬಿಜೆಪಿ ಮೋಸ ಮಾಡುತ್ತಾ ಬಂದಿವೆ. ಕಳೆದ ಮೂರು ದಶಕಗಳಿಂದ ಶಿಕ್ಷಕರಿಗಾಗಿ ಹೋರಾಟ ಮಾಡಿದ್ದೇನೆ. ಶಿಕ್ಷಕರು, ಶೈಕ್ಷಣಿಕ ರಂಗದ ಬಗ್ಗೆ ನನಗೆ ಅರಿವು ಇದೆ. ಮತದಾರರು ಅವಕಾಶ ನೀಡಬೇಕು ಎಂದರು.

ವಿ.ಪ ಸದಸ್ಯ ಅರುಣ ಶಹಾಪುರ ಸರಿಯಾಗಿ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಕಾಲೇಜುಗಳಿಗೆ ಸಮರ್ಪಕವಾಗಿ ಅನುದಾನ ಬಿಡುಗಡೆಯಾಗುತ್ತಿಲ್ಲ. ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಪರಿಹರಿಸುವ ಕೆಲಸ ಮಾಡಿಲ್ಲ. ಆದರೆ, ಚುನಾವಣೆಗೆ ಬಂದಾಗ ಅವರಿಗೆ ಶಿಕ್ಷಕರು ನೆನಪಾಗುತ್ತಾರೆ ಎಂದರು.

ಎಎಪಿ ಜಿಲ್ಲಾಧ್ಯಕ್ಷ ರಮೇಶ ಬದ್ನೂರ ಮಾತನಾಡಿ, ಪಕ್ಷೇತರ ಅಭ್ಯರ್ಥಿ ಶ್ರೀನಿವಾಸ ಗೌಡರ ಅವರಿಗೆ ಶಿಕ್ಷಕರ ಬಗ್ಗೆ ಶೈಕ್ಷಣಿಕ ರಂಗದ ಬಗ್ಗೆ ಅಪಾರ ಕಾಳಜಿ ಇದೆ. ವಾಸ್ತವಿಕವಾಗಿ ಚಿಂತನೆ ಮಾಡುವ ವ್ಯಕ್ತಿ. ಅವರಿಗೆ ಬಾಹ್ಯ ಬೆಂಬಲ ನೀಡಲು ಎಎಪಿ ಪಕ್ಷ ನಿರ್ಧಾರ ಮಾಡಿದೆ. ಮತದಾರರು ಶ್ರಿನಿವಾಸ ಅವರಿಗೆ ಅವಕಾಶ ನೀಡಬೇಕು ಎಂದರು.

ಎನ್‌.ಬಿ. ಸಂಪಾಪುರ, ಪ್ರೊ. ಎಸ್‌.ಬಿ. ಯಳ್ಳೂರ, ಎಂ.ಕೆ. ರೊಟ್ಟಿ, ಬಿ.ಎ. ಬೆಳವಡಿಗಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.