ವಿಜಯಪುರ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ
Team Udayavani, Oct 2, 2018, 6:25 AM IST
ಆಲಮಟ್ಟಿ: ಸಮೀಪದ ಚಿಮ್ಮಲಗಿ ಭಾಗ-2 ಪುನರ್ವಸತಿ ಕೇಂದ್ರದಲ್ಲಿ ಬಾಲಕಿಯೊಬ್ಬಳ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆಂದು ಶಂಕಿಸಲಾಗಿದೆ.
ಭಾನುವಾರ ರಾತ್ರಿ ನಾಪತ್ತೆಯಾಗಿದ್ದ ಬಾಲಕಿ ಸೋಮವಾರ ಸಾಯಂಕಾಲ ಅದೇ ಗ್ರಾಮದ ತೊಗರಿ ಹೊಲದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿ ಪ್ರಕರಣ ಬಯಲಿಗೆ ಬಾರದಿರಲಿ ಎಂದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಭಾನುವಾರ ತಾಯಿ ಆಸ್ಪತ್ರೆಗೆ ತೆರಳಿದ ವೇಳೆ 13 ವರ್ಷದ ಬಾಲಕಿ ಚಿಮ್ಮಲಗಿಯ ಬಸ್ ನಿಲ್ದಾಣದತ್ತ ಹೆಜ್ಜೆ ಹಾಕಿದ್ದಾಳೆ.
ಕೊಂಚ ಮಂದಮತಿಯಾಗಿದ್ದು ಬಸ್ ನಿಲ್ದಾಣ ಸಮೀಪದಲ್ಲಿ ನಿಂತಿದ್ದನ್ನು ಗ್ರಾಮಸ್ಥರು ನೋಡಿದ್ದಾರೆ. ಆದರೆ ಸಂಜೆ ವೇಳೆ ತಾಯಿ ಆಸ್ಪತ್ರೆಯಿಂದ ಮರಳಿ ಬಂದಾಗ ಮಗಳ ಸುಳಿವಿಲ್ಲದಿದ್ದರಿಂದ ಹುಡುಕಾಟ ಆರಂಭಿಸಿದ್ದಾರೆ. ಸುತ್ತಲಿನ ಗ್ರಾಮಗಳಲ್ಲಿ ಧ್ವನಿವರ್ಧಕದ ಮೂಲಕ ಬಾಲಕಿ ಮಾಹಿತಿ ನೀಡಿದ್ದರು. ಚಿಮ್ಮಲಗಿ ರೈತರೊಬ್ಬರು ಸಂಜೆ ಜಮೀನಿಗೆ ಹೋದ ವೇಳೆ ಬಾಲಕಿ ಶವ ಕಂಡು ಕುಟುಂಬ ಸದಸ್ಯರಿಗೆ ತಿಳಿಸಿದ್ದಾರೆ. ಘಟನೆ ಖಂಡಿಸಿ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ
ವ್ಯಕ್ತಪಡಿಸಿದರು. ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಡಿವೈಎಸ್ಪಿ ಹಾಗೂ ಸಿಪಿಐ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ. ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು