ಮತಗಟ್ಟೆಗೆ ವಿಶೇಷ ತಹಶೀಲ್ದಾರ್ ಭೇಟಿ
Team Udayavani, Mar 16, 2019, 11:38 AM IST
ತೇರದಾಳ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ (ಗ್ರೇಡ್-1) ತಹಶೀಲ್ದಾರ್ ಮೆಹಬೂಬಿ ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.
ಸಿದ್ಧೇಶ್ವರ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ದಿಢೀರ್ ಭೇಟಿ ನೀಡಿದ ತಹಶೀಲ್ದಾರ್ ಮೆಹಬೂಬಿ, ಮೊದಲು ಶಾಲಾ ಮಕ್ಕಳ ಸಂಖ್ಯೆ, ಶಿಸ್ತು, ಶಿಕ್ಷಕರ ಮಾಹಿತಿ ನೋಡಿ ಸಲಹೆ ನೀಡಿ, ಶಾಲೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಶಾಲೆಯ ವಿವಿಧ ಕೊಠಡಿಗಳಲ್ಲಿದ್ದ ನಾಲ್ಕು ಮತಗಟ್ಟೆ ಪರಿಶೀಲಿಸಿದರು. ಈ ವೇಳೆ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲ್ದಾರ್, ನಗರದಲ್ಲಿ 29 ಸಾವಿರಕ್ಕಿಂತ ಅಧಿಕ ಮತದಾರರಿದ್ದು, ಒಟ್ಟು 29 ಮತಗಟ್ಟೆಗಳಿವೆ. ಈಗಾಗಲೇ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಸೇರಿದಂತೆ ನಾನಾ ಅಂಶಗಳ ಬಗ್ಗೆ ಸಾರ್ವಜನಿಕರಿಗೆ ಸಾಕಷ್ಟು ತಿಳಿವಳಿಕೆ ನೀಡಲಾಗಿದೆ. ಬಿಎಲ್ಒಗಳು ಕೂಡ ತಮ್ಮ ಮತಗಟ್ಟೆಗಳಲ್ಲಿ ಕುಳಿತು ಮತದಾರರ ಹೆಸರು ಸೇರ್ಪಡೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆಂದು ಹೇಳಿದರು.
ಮುಖ್ಯ ಶಿಕ್ಷಕಿ ಬಿ.ಜಿ. ಮುದಕನ್ನವರ, ಕಂದಾಯ ನಿರೀಕ್ಷಕ ಶ್ರೀಕಾಂತ ಮಾಯನ್ನವರ, ಗ್ರಾಮ ಲೆಕ್ಕಾ ಧಿಕಾರಿ ಪ್ರಕಾಶ ಮಠಪತಿ, ಮಹಾದೇವ ಯಲ್ಲಟ್ಟಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್