ಲೋಕ ಸಮರಕ್ಕೆ  ಮತದಾನ ಜಾಗೃತಿ ವಾಹನ 

42 ಗ್ರಾಮಗಳಲ್ಲಿ ವಾಹನ ಸಂಚಾರ ಸಿ-ವಿಜಿಲ್‌ ಮೊಬೈಲ್‌ ಆ್ಯಪ್‌ ಮೂಲಕ ದೂರು ಸಲ್ಲಿಕೆಗೆ ಅವಕಾಶ

Team Udayavani, Mar 25, 2019, 3:41 PM IST

25-March-8

ಜಮಖಂಡಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಾಡಳಿತದಿಂದ ಸಿದ್ಧಪಡಿಸಿದ ವಿಶೇಷ ಮತದಾನ ಜಾಗೃತಿ ಪ್ರದರ್ಶನ ವಾಹನ.

ಜಮಖಂಡಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಾಡಳಿತ ಹೊಸದೊಂದು ವಿಶೇಷ ಮತದಾನ ಜಾಗೃತಿಗಾಗಿ ಮತದಾನ ಪ್ರದರ್ಶನ ವಾಹನ ಸಿದ್ಧಪಡಿಸಿದ್ದು, ಕ್ಷೇತ್ರದ ನಗರ ಪ್ರದೇಶ ಸೇರಿದಂತೆ ತಾಲೂಕಿನ 42 ಗ್ರಾಮದಲ್ಲಿ ಸಂಚರಿಸುತ್ತಿದೆ.
ತಾಲೂಕಾಡಳಿತ ಟಾಟಾ ವಾಹನದಲ್ಲಿ ಮತದಾನ ಯಂತ್ರ, ಮತದಾರರ ಬ್ಯಾಲೆಟ್‌ ಮಷೀನ್‌ ಹಾಗೂ ಮತದಾನ ಖಾತ್ರಿ ಮಾಡುವ ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ ಪ್ರದರ್ಶನ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿದೆ. ಮನೆಬಾಗಿಲಿಗೆ ಮತದಾನ ಮಾಹಿತಿ ಲಭ್ಯವಾಗುತ್ತಿರುವುದಕ್ಕೆ ಮತದಾರರು ಸಂತಸ ವ್ಯಕ್ತಪಡಿಸಿದ್ದಾರೆ.
ಚೆಕ್‌ಪೋಸ್ಟ್‌ ಸ್ಥಾಪನೆ: ಲೋಕಸಭಾ ಚುನಾವಣೆಗೆ ತಾಲೂಕಾಡಳಿ ಸಕಲ ಸಿದ್ದತೆ ನಡೆದಿದ್ದು, ಈಗಾಗಲೇ ಜಮಖಂಡಿ, ತೇರದಾಳ ಎರಡು ವಿಧಾನಸಭೆ ಕ್ಷೇತ್ರದಲ್ಲಿ ತೇರದಾಳ, ಬುದ್ನಿ, ಚಿಕ್ಕಲಕಿ, ಚಿನಗುಂಡಿ ಕ್ರಾಸ್‌, ಢವಳೇಶ್ವರ, ಹುಲ್ಯಾಳ ಕ್ರಾಸ್‌, ಹುನ್ನೂರು ಕ್ರಾಸ್‌ ಸೇರಿ 7 ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿದೆ. ಚೆಕ್‌ಪೋಸ್ಟ್‌ ಮೂಲಕ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.
ಸಿ-ವಿಜಿಲ್‌ ಮೊಬೈಲ್‌ ಆ್ಯಪ್‌: ತೇರದಾಳ, ಜಮಖಂಡಿ ಕ್ಷೇತ್ರದಲ್ಲಿ 43 ಸೆಕ್ಟರ್‌ ಅಧಿಕಾರಿಗಳು, ವಿಡಿಯೋ ತಂಡ, 12 ಫ್ಲೈಯಿಂಗ್‌ ತಂಡ ಕರ್ತವ್ಯದಲ್ಲಿದೆ. ಸಾರ್ವಜನಿಕರು ಮುಕ್ತವಾಗಿ ಸಿ-ವಿಜಿಲ್‌ ಮೊಬೈಲ್‌ ಆ್ಯಪ್‌ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮತದಾರರು ಎಷ್ಟು?: ತೇರದಾಳ ಕ್ಷೇತ್ರದಲ್ಲಿ 1,10,171 ಪುರುಷರು, 1,09,790 ಮಹಿಳೆಯರು, 10 ಇತರೆ ಸೇರಿ 2,19,971 ಮತದಾರರಿದ್ದರೆ ಜಮಖಂಡಿ ಕ್ಷೇತ್ರದಲ್ಲಿ 1,02,656 ಪುರುಷರು, 1,02,116 ಮಹಿಳೆಯರು, 6 ಇತರೆ ಸೇರಿ 2,04,778 ಮತದಾರರಿದ್ದಾರೆ. ಜಮಖಂಡಿ-ತೇರದಾಳದಲ್ಲಿ 191 ನಗರಪ್ರದೇಶ ಮತಗಟ್ಟೆ, 276 ಗ್ರಾಮೀಣ ಮತಗಟ್ಟೆ ಸೇರಿ ಒಟ್ಟು 467 ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಜೋಡಣೆ ಕೆಲಸ ನಡೆದಿದೆ. ಪ್ರಸಕ್ತ ಚುನಾವಣೆಯಲ್ಲಿ ಹೊಸ ಮತದಾರರ ಸೇರ್ಪಡೆಯಿಂದ ತೇರದಾಳ-ಜಮಖಂಡಿ ಕ್ಷೇತ್ರದಲ್ಲಿ 22 ಹೊಸ ಮತಗಟ್ಟೆ ಸ್ಥಾಪನೆಯಾಗಿವೆ.
ಚುನಾವಣೆ ಹಿನ್ನೆಲೆಯಲ್ಲಿ ಮುಧೋಳ, ಬೀಳಗಿ, ಹುನಗುಂದ, ಬಾಗಲಕೋಟೆ ಮತ್ತು ಜಮಖಂಡಿ ತಾಲೂಕಿನಿಂದ ಅಂದಾಜು 2,055 ಚುನಾವಣಾ ಸಿಬ್ಬಂದಿ ನೇಮಿಸಲಾಗಿದೆ. ಸುವಿಧಾ ಸಿಂಗಲ್‌ ವಿಂಡೋ ಆನ್‌ಲೈನ್‌ ಮೂಲಕ ಅಭ್ಯರ್ಥಿ, ರಾಜಕೀಯ ಪಕ್ಷದವರು ಅರ್ಜಿ ಸಲ್ಲಿಸಬಹುದಾಗಿದ್ದು, ನಿರಂತರ ಸೇವೆಗೆ, ಸಮಸ್ಯೆಗಳಿಗೆ 1950 ಕಾಲ್‌ ಸೆಂಟರ್‌ ತೆರೆಯಲಾಗಿದ್ದು ದೂರು ಸಲ್ಲಿಸಲು ದಿನದ 24 ಗಂಟೆ ಸೇವೆಯಲ್ಲಿದೆ.
ತೇರದಾಳ, ಜಮಖಂಡಿ ಕ್ಷೇತ್ರದಲ್ಲಿ ಮುಕ್ತ ಮತದಾನಕ್ಕೆ ಸಕಲ ಸಿದ್ಧತೆ ಮಾಡಲಾಗಿದ್ದು, ಎಲ್ಲ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕೆಲಸ ನಡೆದಿದೆ. ಅಹಿತಕರ ಘಟನೆ ನಡೆಯದಂತೆ ಮುನ್ನೆಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪಾರದರ್ಶಕ ಮತದಾನಕ್ಕಾಗಿ ಪೊಲೀಸ್‌ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
. ಇಕ್ರಮ ಶರೀಫ್‌,
ಸಹಾಯಕ ಚುನಾವಣಾಧಿಕಾರಿ ಮತ್ತು
ಉಪ ವಿಭಾಗಾಧಿಕಾರಿ, ಜಮಖಂಡಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.