ಜಿಲ್ಲೆಗೆ ಜಗಲಾಸರ.. ರೌಡಿಶೀಟರ್‌ ಗಪ್‌ಚುಪ್‌

•ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಎಚ್ಚರಿಕೆ•ವಂಚಕರಿಂದ ದೂರ ಇರಲು ಜನಜಾಗೃತಿ

Team Udayavani, Jul 29, 2019, 8:30 AM IST

bk-tdy-1

ಬಾಗಲಕೋಟೆ: ಜನಜಾಗೃತಿ ಮೂಡಿಸಲು ಪೊಲೀಸ್‌ ಇಲಾಖೆ ಹೊರಡಿಸಿರುವ ಕರಪತ್ರಗಳು.

ಬಾಗಲಕೋಟೆ: ಯುವ ಐಪಿಎಸ್‌ ಅಧಿಕಾರಿ ಲೋಕೇಶ ಜಗಲಾಸರ ಜಿಲ್ಲೆಗೆ ಬಂದ ಬಳಿಕ ಜಿಲ್ಲಾ ಪೊಲೀಸ್‌ ಇಲಾಖೆ ಕಾರ್ಯಗಳಲ್ಲಿ ಬದಲಾವಣೆಗಳಾಗುತ್ತಿವೆ.

ಕಾನೂನು ಬಾಹಿರ ಚಟುವಟಿಕೆ ನಡೆಸುವವರು, ಕ್ಲಬ್‌ ನಡೆಸುವವರು, ರೌಡಿ ಸೀಟರ್‌ಗಳು ಈಗ ಬಾಲ ಮುದುರಿಕೊಂಡಿದ್ದಾರೆ. ಎಸ್ಪಿ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಕಾನೂನು ಸುವ್ಯವಸ್ಥೆಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಜಿಲ್ಲಾ ಪೊಲೀಸ್‌ ಇಲಾಖೆಯಲ್ಲಿ ಜನರನ್ನು ತಲುಪಲು ಬ್ಲಾಗ್‌, ವೈಬ್‌ಸೈಟ್, ಫೇಸ್‌ಬುಕ್‌, ಟ್ರೋಲ್ ಫ್ರಿ ನಂಬರ್‌ ಹೀಗೆ ಹಲವು ಸಾಧನ ವ್ಯವಸ್ಥೆಗಳಿವೆ. ಆದರೆ ಈ ಸಾಧನಗಳು ಹಲವು ವರ್ಷಗಳಿಂದ ನಿಷ್ಕ್ರಿಯಗೊಂಡಿದ್ದವು. ಲೋಕೇಶ ಅವರು ಬಂದ ಬಳಿಕ ಫೇಸ್‌ಬುಕ್‌ ಮೂಲಕ ಜಿಲ್ಲೆಯ ಜನರಿಗೆ ಮಾಹಿತಿ ಕೊಡುವ ಕೆಲಸ ಜತೆಗೆ ಪೊಲೀಸ್‌ ಬ್ಲಾಗ್‌ ಕೂಡಾ ಆ್ಯಕ್ಟೀವ್‌ ಆಗಿದೆ. ವಂಚಕರಿಂದ, ಕಳ್ಳರಿಂದ, ಮೋಸಗಾರರಿಂದ ಕಾನೂನು ಬಾಹಿರ ಚಟುವಟಿಕೆಗಳಿಂದ ದೂರ ಇರಲು ಇವುಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ.

ರೌಡಿಗಳಲ್ಲಿ ನಡುಕ: ಲೋಕೇಶ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆ ವ್ಯಾಪ್ತಿಯ ರೌಡಿಶೀಟರ್‌ಗಳ ಪರೇಡ್‌ ಮಾಡಿಸಿ ಜನರಿಗೆ ತೊಂದರೆ ಕೊಡದಂತೆ, ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ. ತಿದ್ದಿಕೊಳ್ಳದ ರೌಡಿ ಸೀಟರ್‌ಗಳ ಮೇಲೆ ನಿರಂತರ ನಿಗಾ ಇಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಬಹುತೇಕ ರೌಡಿಶೀಟರ್‌ಗಳು, ತಾವಾಯ್ತು, ತಮ್ಮ ಕೆಲಸವಾಯ್ತು ಎಂಬಂತಿದ್ದಾರೆ.

ಸದ್ಯ ಜಿಲ್ಲೆಯಲ್ಲಿ ನೌಕರಿ ಕೊಡಿಸುವ ಆಮಿಷವೊಡ್ಡಿ ಹಣ ಪಡೆಯುವ ಪ್ರಕರಣ ಹೆಚ್ಚಾಗಿ ನಡೆಯುತ್ತಿವೆ. ವಿದ್ಯಾವಂತ ಯುವಕರನ್ನು ದಾರಿ ತಪ್ಪಿಸಿ 1ರಿಂದ 2ಲಕ್ಷ ಕೊಟ್ಟರೆ ಸರ್ಕಾರಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಹಣ ಪಡೆದು ವಂಚಿಸಲಾಗುತ್ತಿದೆ. ರೈಲ್ವೆ, ಕಂದಾಯ, ಆರ್‌ಡಿಪಿಆರ್‌, ನೀರಾವರಿ ಹೀಗೆ ಹಲವು ಇಲಾಖೆಗಳ ಹೆಸರೇಳಿ ಕೆಲವರು ವಂಚಿಸುತ್ತಿದ್ದು, ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಮಾವಾ ವಿರುದ್ಧ ಕಾರ್ಯಾಚರಣೆ: ಕ್ಯಾನ್ಸರ್‌ ರೋಗ ಅತಿ ಬೇಗ ತರಿಸುವ ಈ ಮಾವಾ ವಿರುದ್ಧ ಜಿಲ್ಲೆಯಲ್ಲಿ ನಿರಂತರ ಕಾರ್ಯಾಚರಣೆ ನಡೆದಿದೆ. ಅಲ್ಲದೇ ಕೊಟ್ಪಾ ಕಾಯಿದೆ ಕಲಂ 7ರ ಪ್ರಕಾರ ಇದೇ ಮೊದಲ ಬಾರಿಗೆ ಪ್ರಕರಣ ದಾಖಲಿಸುವ ಗಟ್ಟಿ ನಿರ್ಧಾರವೂ ಜಿಲ್ಲೆಯಲ್ಲಾಗಿವೆ. ಹೀಗಾಗಿ ಮಾವಾ ಅಥವಾ ನಿಷೇಧಿತ ವಸ್ತುಗಳ ಮಾರಾಟ ಕೊಂಚ ಹತೋಟಿಗೆ ಬರುತ್ತಿದೆ ಎಂದೇ ಹೇಳಲಾಗಿದೆ.

ಪೊಲೀಸ್‌ ಸಿಬ್ಬಂದಿಗೆ ಪ್ರಶಂಸೆ: ಇಲಾಖೆಯನ್ನು ಜನಸ್ನೇಹಿ ಮಾಡುವ ಜತೆಗೆ ಇರುವ ಸಿಬ್ಬಂದಿ, ಹೊಸ ಹುಮ್ಮಸ್ಸಿನೊಂದಿಗೆ ನಿತ್ಯ ಕೆಲಸ ಮಾಡಲು ಸ್ವತಃ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಅವರೇ ಮುಂದಾಗಿದ್ದಾರೆ. ಪ್ರತಿ ತಿಂಗಳು ಅಪರಾಧ ಪ್ರಕರಣ ಭೇದಿಸುವ, ಅಪರಾಧ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ, ಅಗತ್ಯ ಗುಪ್ತ ಮಾಹಿತಿಯನ್ನು ಹಿರಿಯ ಅಧಿಕಾರಿಗಳಿಗೆ ನೀಡಿ, ಪ್ರಕರಣ ಪತ್ತೆ ಹಚ್ಚಲು ಕಾರಣರಾಗುವ ಪೊಲೀಸ್‌ ಸಿಬ್ಬಂದಿಗೆ ಮಾಸಿಕ ಪ್ರಶಂಸನೀಯ ಪತ್ರ ನೀಡುತ್ತಿದ್ದಾರೆ. ತಾವು ಎಸ್ಪಿಯಾದ ಬಳಿಕ ಮೊದಲ ತಿಂಗಳಲ್ಲಿ ಜಿಲ್ಲೆಯ 11 ಜನ ಪೊಲೀಸ್‌ ಸಿಬ್ಬಂದಿಗೆ ಅಭಿನಂದಿಸಿ, ಬೆನ್ನು ತಟ್ಟಿ ಗೌರವ ಪತ್ರ ನೀಡಿದ್ದು, ಇದರಿಂದ ಪೊಲೀಸ್‌ ಸಿಬ್ಬಂದಿ ಮತ್ತಷ್ಟು ಹುರುಪಿನಿಂದ ಕೆಲಸ ಮಾಡುವಂತಾಗಿದೆ.

ಪೊಲೀಸ್‌ ಇಲಾಖೆ ಇರುವುದೇ ಜನರಿಗಾಗಿ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಬಾಹಿರ ಚಟುವಟಿಕೆ ಎಲ್ಲೇ ನಡೆದರೂ ಜನರು ಇಲಾಖೆ ಗಮನಕ್ಕೆ ತರಬೇಕು. ಈಚೆಗೆ ಕೆಲವರು ನೌಕರಿ ಕೊಡಿಸುತ್ತೇವೆಂದು ವಂಚಿಸುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹ ವ್ಯಕ್ತಿಗಳಿಗೆ ಹಣ ನೀಡಿ ಜನರು ಮೋಸ ಹೋಗಬಾರದು.• ಲೋಕೇಶ ಜಗಲಾಸರ, ಎಸ್ಪಿ

 

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.