ನಿರುಪಯುಕ್ತ ಜಾಗ ಈಗ ಉದ್ಯಾನ

ಹಸಿರು ಕಂಗೊಳಿಸುವ ಉದ್ಯಾನ ನಿರ್ಮಾಣ•ಖಾಸಗಿ ವಾಹನಗಳ ಮಾಲೀಕರ ಕಾರ್ಯ

Team Udayavani, May 15, 2019, 11:18 AM IST

BAGALKOTE-tdy-3..

ತೇರದಾಳ: ಪಟ್ಟಣದ ಬಸ್‌ ನಿಲ್ದಾಣ ಬಳಿ ಖಾಸಗಿ ವಾಹನಗಳ ಚಾಲಕರು ಹಾಗೂ ಮಾಲೀಕರು ನಿರ್ಮಿಸಿದ ಉದ್ಯಾನವನ.

ತೇರದಾಳ: ಪಟ್ಟಣದ ಬಸ್‌ ನಿಲ್ದಾಣ ಬಳಿಯ ಮಹಾತ್ಮ ಗಾಂಧಿ ಕ್ರೀಡಾಂಗಣದ ಕಾಂಪೌಂಡ್‌ಗೆ ಹೊಂದಿಕೊಂಡಿದ್ದ ನಿರುಪಯುಕ್ತ ಜಾಗ ಈಗ ಉದ್ಯಾನವನವಾಗಿ ಮಾರ್ಪಟ್ಟಿದೆ.

ಖಾಸಗಿ ವಾಹನಗಳ ಚಾಲಕರು ಉದ್ಯಾನವನ ನಿರ್ಮಿಸಿ ಸಾಮಾಜಿಕ ಕಾರ್ಯ ಕೈಗೊಂಡಿದ್ದಾರೆ. ಮೂತ್ರವಿಸರ್ಜನೆ, ಸತ್ತ ಪ್ರಾಣಿ ಸೇರಿದಂತೆ ಗಲೀಜು ತಂದು ಹಾಕಿ ಜಾಗವನ್ನು ದುರುಪಯೋಗ ಪಡಿಸಿಕೊಳ್ಳಲಾಗಿತ್ತು. ಇದನ್ನು ಕಂಡ ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್‌ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘದವರು ಪರಿಸರ ಸ್ವಚ್ಛಗೊಳಿಸುವ ಕಾರ್ಯ ಕೈಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ತಮ್ಮ ಸ್ವಂತ ಹಣದಲ್ಲಿಯೇ ಸುಮಾರು ಅರ್ಧ ಕಿ.ಮೀ ದೂರದವರೆಗೆ ಪೈಪ್‌ಲೈನ್‌ ಅಳವಡಿಸಿ ನೀರಿನ ಅನುಕೂಲ ಮಾಡಿಕೊಂಡ ಚಾಲಕರು ಹಾಗೂ ಮಾಲೀಕರು ಶ್ರಮದಾನದಿಂದ ಸ್ಥಳ ಶುಚಿಗೊಳಿಸಿದರು. ಸಸಿ ನೆಡಲು ಗುಂಡಿತೋಡಿ, ಗೊಬ್ಬರ ಹಾಕಿ ಭೂಮಿ ಸಿದ್ಧಪಡಿಸಿಕೊಂಡರು. ಗೋವಾ, ಬೆಂಗಳೂರು, ಸಾಂಗಲಿ ಸೇರಿದಂತೆ ವಿವಿಧ ಕಡೆಗಳಿಂದ ಮಾವು, ತೆಂಗು, ತುಳಸಿ, ಬೇವು, ಬದಾಮ, ಸಾಗವಾನಿ, ವಿವಿಧ ತೆರನಾದ ಹೂ-ಬಳ್ಳಿ ಸೇರಿದಂತೆ ಅನೇಕ ಸಸಿಗಳನ್ನು ತಂದು ನಾಟಿ ಮಾಡಿದ್ದಾರೆ. ದಿನಂಪ್ರತಿ ಎಲ್ಲರೂ ಸರದಿಯಂತೆ ನೀರುಣಿಸಿದ್ದಾರೆ. ಬೇಸಿಗೆಯಾಗಿದ್ದರಿಂದ ಕೆರೆಯಿಂದ ನೀರು ತಂದು ಹಾಕಿ, ಸಸಿಗಳ ರಕ್ಷಣೆಗೆ ಸ್ವಂತ ಖರ್ಚಿನಿಂದ ತಂತಿ ಜಾಳಿಗೆ ಅಳವಡಿಸಿ ಪೋಷಣೆ ಮಾಡುತ್ತಿದ್ದಾರೆ. ಆಗಾಗ್ಗೆ ಕಳೆ-ಕಸ ತೆಗೆದು ಸ್ವಚ್ಛ ಕಾರ್ಯ ಕೈಗೊಂಡಿದ್ದಾರೆ. ಅನೇಕ ಹೂ, ಗಿಡ, ಬಳ್ಳಿಗಳು ಬೆಳೆದು ನೋಡುಗರನ್ನು ಕೈಬೀಸಿ ಕರೆಯುತ್ತಿವೆ. ಕಲ್ಲಿನ ಆಸನ ನಿರ್ಮಿಸಿದ್ದು, ಬಿಸಿಲಿನ ತಾಪಕ್ಕೆ ಬಸವಳಿದವರಿಗೆ ವಿಶ್ರಾಂತಿಗೆ ಆಹ್ವಾನಿಸುವ ಸುಂದರ ತಾಣವಾಗಿದೆ.

ಚಾಲಕರು ಹಾಗೂ ಮಾಲೀಕರು ಪುರಸಭೆಯವರಿಂದ ನಲ್ಲಿ ಜೋಡಣೆ ಪಡೆ‌ದು ವಿವಿಧ ಕಡೆ ಹೋಗಿ ಅನೇಕ ಸಸಿಗಳನ್ನು ಹಾಗೂ ಮಾರ್ಗದರ್ಶನ ಪಡೆದು ಕೈ ದೋಟ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.