ಶಿಕ್ಷಕರ ಕಾಲೋನಿಯಲ್ಲಿ ನೀರಿಗೆ ಹಾಹಾಕಾರ-ನಿಲ್ಲದ ಪರದಾಟ


Team Udayavani, May 15, 2019, 11:47 AM IST

bagalkote-tdy-6..

ತೇರದಾಳ: ಪಟ್ಟಣದ 1ನೇ ವಾರ್ಡ್‌ನಲ್ಲಿ ಹೊಸ ಕೊಳವೆಬಾವಿಯಿಂದ ನೀರು ಪೂರೈಕೆ ಮಾಡಲಾಗುತ್ತಿದೆ.

ತೇರದಾಳ: ಪಟ್ಟಣದ ಶಿಕ್ಷಕರ ಕಾಲೋನಿ ಸೇರಿದಂತೆ ವಿವಿಧ ಕಡೆಗಳಲ್ಲಿ ಕಡೆಯಲ್ಲಿ ಕುಡಿಯುವ ನೀರಿಗೆ ಜನರು ಪರದಾಡುತ್ತಿದ್ದಾರೆ.

ಶಿಕ್ಷಕರ ಕಾಲೋನಿಯಲ್ಲಿ ನೀರಿಗಾಗಿ ಪುರಸಭೆ ಮಾಡಿದ ನಲ್ಲಿ ವ್ಯವಸ್ಥೆ ಹೊರತುಪಡಿಸಿ ಕೊಳವೆ ಬಾವಿ ಅಥವಾ ಸಿಸ್ಟರ್ನ್ಗಳ ಯಾವ ಪರ್ಯಾಯ ವ್ಯವಸ್ಥೆಗಳಿಲ್ಲ. ಕೃಷ್ಣಾ ನದಿ ಬತ್ತಿದ್ದು, ಜೀವಜಲ ನೀರಿನ ಕೊರತೆ ತೀವ್ರತರವಾಗಿದೆ. ಶಿಕ್ಷಕ ಕಾಲೋನಿಯಲ್ಲಿ ಹೆಚ್ಚಿನ ಜನ ನಿವೃತ್ತರು ಹಾಗೂ ವಯೋವೃದ್ಧರು ಇದ್ದಾರೆ. ಟ್ಯಾಂಕರ್‌ಗಳ ಮೂಲಕ ನೀರು ಹಾಕಿಸಿಕೊಂಡರೆ, ಅವರು ಕೇಳಿದಷ್ಟು ದುಬಾರಿ ಹಣ ತೆರಬೇಕಾದ ದುಸ್ಥಿತಿ ಬಂದೊದಗಿದೆ. ಈ ಕುರಿತು ಕಾಲೋನಿಯ ನಿವಾಸಿಗಳು ಜಿಲ್ಲಾಧಿಕಾರಿ, ಪುರಸಭೆ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.

ವಾರ್ಡ್‌ನಲ್ಲಿ ಬೇಸಿಗೆ ಸಂದರ್ಭದಲ್ಲಿ ಪ್ರತಿವರ್ಷವೂ ನೀರಿನ ತೊಂದರೆ ತೀವ್ರತರವಾಗುತ್ತಿತ್ತು. ಈ ಬಾರಿ ಪುರಸಭೆ ಮುಖ್ಯಾಧಿಕಾರಿಗಳು ಅನೇಕ ಕೊಳವೆ ಬಾವಿ ದುರಸ್ತಿ ಮಾಡಿಸಿದ್ದರೆ, ಮತ್ತೆ ಕೆಲವು ಹೊಸ ಕೊಳವೆ ಬಾವಿ ಕೊರೆಸಿದ್ದಾರೆ. ಇದರಿಂದ ಹೆಚ್ಚಿನ ತೊಂದರೆಯಿಲ್ಲ.-ರೂಪಾ ಶಂಕರ ಕುಂಬಾರ,ಪುರಸಭೆ ಸದಸ್ಯ

ಪಟ್ಟಣದ ಅನೇಕ ವಾರ್ಡ್‌ ಗಳಲ್ಲಿ ಕೊಳವೆಬಾವಿ, ಸಿಸ್ಟರ್ನ್ ಗಳಿರುವುದರಿಂದ ಜೀವಜಲದ ಸಮಸ್ಯೆ ಇಲ್ಲ. ವಾರ್ಡ ನಂಬರ್‌ 1ರ ಕುಂಬಾರ ಗಲ್ಲಿಯಲ್ಲಿನ ನೀರಿನ ಸಮಸ್ಯೆ ಪರಿಹಾರವಾಗಿದೆ. ಕೆರೆಯ ಎದುರಿಗೆ ಮಹಾದೇವ ದೇವಸ್ಥಾನದ ಮುಂದೆ ಹೊಸ ಕೊಳವೆಬಾವಿ ತೋಡಿ,ದೂರದ ಕುಂಬಾರ ಗಲ್ಲಿಗೆ ಪೈಪ್‌ಲೈನ್‌ ಜೋಡಣೆ ಮಾಡಿ, ನೀರು ಪೂರೈಸಲಾಗಿದೆ.

ಕೃಷ್ಣೆಯ ಒಡಲು ಹನಿ ನೀರು ಸಹ ಇಲ್ಲದೆ ಸಂಪೂರ್ಣ ಬತ್ತಿ ಹೋಗಿದೆ. ಜನ ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗಿದೆ. ಬೆಳೆದು ನಿಂತ ಅಲ್ಪ-ಸ್ವಲ್ಪ ಬೆಳೆಗಳು ಕಮರುತ್ತಿವೆ. ಮಹಾರಾಷ್ಟ್ರ ರಾಜ್ಯದ ಕೋಯ್ನಾ ಜಲಾಶಯದಿಂದ ನೀರು ಬಿಡಿಸಲು ವಿನಂತಿಸಲಾಗಿದೆ. ಆದರೆ, ನೀರು ಬರುವ ಕುರಿತು ಯಾವುದೇ ಖಚಿತತೆ ಇಲ್ಲದಿರುವುದರಿಂದ ರೈತರಲ್ಲಿ ಆತಂಕ ಮೂಡಿದೆ.

ನಮ್ಮ 23ನೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆಯಿಲ್ಲ. ಇಲ್ಲಿನ ಹೊಸ ಹಾಗೂ ಹಳೆಯ ಕೊಳವೆಬಾವಿಗಳಿಗೆ ನೀರಿದೆ. ವಾರ್ಡಿನ ಎಲ್ಲರಿಗೂ ಸಾಕಷ್ಟು ನೀರಿನ ಲಭ್ಯತೆಯಿದೆ. ಹೊಸ ಕೊಳವೆ ಬಾವಿಗೆ ನೀರೆತ್ತುವ ಮೋಟರ್‌ ಅಳವಡಿಸಬೇಕಾಗಿದೆ.-ಮಹಾದೇವಿ ರಾಮಪ್ಪ ಗಸ್ತಿ,ಪುರಸಭೆ ಸದಸ್ಯರು, ತೇರದಾಳ.

ನೀರಿನ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತಿರುವೆ. ನಗರದ ಶಿಕ್ಷಕರ ಕಾಲೋನಿ, 3ನೇ ಕೆನಾಲ ಬಳಿಯ ನಿವಾಸಿಗರಿಗೆ ಹಾಗೂ ಹಳಿಂಗಳಿ ರಸ್ತೆಯಲ್ಲಿನ ಜನರಿಗೆ ಮಾತ್ರ ನೀರಿನ ತೊಂದರೆಯಿದೆ. ಸಮೀಪದ ಕೊಳವೆ ಬಾವಿಗಳಿಂದ ಪೈಪ್‌ಲೈನ್‌ ಮೂಲಕ ನೀರು ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ. –ಮಹಾವೀರ ಬೋರನ್ನವರ, ಮುಖ್ಯಾಧಿಕಾರಿ, ತೇರದಾಳ ಪುರಸಭೆ.
•ಬಿ.ಟಿ. ಪತ್ತಾರ

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.