ಹಿಪ್ಪರಗಿ ಜಲಾಶಯ ನೀರಿನ ಮಟ್ಟ ಇಳಿಕೆ


Team Udayavani, Apr 19, 2019, 3:08 PM IST

Udayavani Kannada Newspaper

ಬನಹಟ್ಟಿ; ಉತ್ತರ ಕರ್ನಾಟಕದ ಜೀವಜಲ ಕೃಷ್ಣಾ ನದಿ ಸಂಪೂರ್ಣವಾಗಿ ಬತ್ತಿದ್ದು, ಹಿಪ್ಪರಗಿ ಜಲಾಶಯ ಖಾಲಿಯಾಗಿದೆ. ಇದರಿಂದ ಈ ಭಾಗದ ಜಮಖಂಡಿ ರಬಕವಿ, ಬನಹಟ್ಟಿ, ತೇರದಾಳ ಸೇರಿದಂತೆ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ನೀರಿನ ಹಾಹಾಕಾರ ಉಂಟಾಗಿದ್ದು, ಜನರು ನೀರಿಗೆ ಪರಿತಪಿಸುವಂತಾಗಿದೆ.

ಒಂದೆಡೆ ಲೋಕಸಭೆ ಚುನಾವಣೆ ದಿನಗಳ ಕ್ಷಣಗಣನೆ ಸಮೀಪಿಸುತ್ತಿದ್ದಂತೆ ಪ್ರಚಾರದ ಅಬ್ಬರ ಕೂಡಾ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಮತದಾರ ನೀರಿಗಾಗಿ ಅಲೆದಾಡುತ್ತಿದ್ದರೆ. ಅಭ್ಯರ್ಥಿ ಮಾತ್ರ ತನಗೆ ಬೀಳುವ ಓಟಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಈ ಭಾಗದ ಪ್ರಮುಖ ನಗರ ಪ್ರದೇಶಗಳಲ್ಲಿ ಕುಡಿವ ನೀರಿನ ಸಮಸ್ಯೆ ತಾರಕಕ್ಕೇರುತ್ತಿದೆ.

ಮಹಾರಾಷ್ಟ್ರದ ಕೋಯ್ನಾದಿಂದ ನೀರು ಬಂದೆ ಬಿಟ್ಟಿತು ಎನ್ನುವಂತೆ ಸಾಮಾಜಿಕ ತಾಣಗಳಲ್ಲಿನ ಹೇಳಿಕೆಗಳು ಹೇಳಿಕೆಗಳಾಗಿಯೇ ಉಳಿದಿದ್ದು, ನೀರು ಮಾತ್ರ ಬಂದಿಲ್ಲ. ಅಲ್ಲದೇ ಇದೇ ನೀರನ್ನ ಅವಲಂಬಿಸಿರುವ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಯ ರೈತರ ಪರಿಸ್ಥಿತಿ ಹೇಳತೀರದಾಗಿದೆ. ನೀರಿಲ್ಲದೆ ಬೆಳೆಯೂ ಒಣಗಿ ರೈತ ಕಂಗಾಲಾಗಿದ್ದು, ಮಹಾರಾಷ್ಟ್ರದ ಕೋಯ್ನಾದಿಂದ ನೀರು ಬಿಡಿಸುವುದು ಒಂದೇ ಇದಕ್ಕೆ ಪರಿಹಾರವಾಗಿದೆ.

ರಬಕವಿ-ಬನಹಟ್ಟಿ ನಗರಸಭೆಯ ರಬಕವಿ, ಬನಹಟ್ಟಿ, ರಾಂಪುರ, ಹೊಸೂರ ಸೇರಿದಂತೆ ಹಲವು ಕಡೆಗಳಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ದಿನಗಟ್ಟಲೆ ಸರದಿಯಲ್ಲಿ ನಿಂತೂ ನೀರು ಪಡೆಯುವ ಸ್ಥಿತಿ ಎದುರಾಗಿದೆ.

ನೂತನ ಸದಸ್ಯರಿಗೆ ತಪ್ಪದ ಗೋಳು: ಅವಳಿನಗರದ ನೂತನ ಸದಸ್ಯರ ಪರಿಸ್ಥಿತಿ ಹೇಳತೀರದಾಗಿದ್ದು, ಚುನಾವಣೆ ಆಗಿ ಹಲವಾರು ತಿಂಗಳು ಕಳೆದರೂ ಅಧಿಕಾರವಿಲ್ಲ. ಚುನಾವಣೆಗಿಂತ ಮೊದಲು ಇವರು ಭರವಸೆಗಳ ಸುರಿಮಳೆ ಸುರಿದು ಮತ ಪಡೆದು ಆಯ್ಕೆಗೊಂಡಿದ್ದಾರೆ. ಈಗ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ನಮಗೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದು ನಗರಸಭೆ ಚುನಾಯಿತ
ಪ್ರತಿನಿಧಿಗಳ ಮನೆ ಹೋಗುತ್ತಿದ್ದಾರೆ.

ಲೋಕಸಭೆ ನೀತಿ ಸಂಹಿತೆಯಿಂದಾಗಿ ಯಾವುದೇ ಕೆಲಸ ಮಾಡುವಂತಿಲ್ಲ . ಸದಸ್ಯರು ನೀರಿನ ತೊಂದರೆ ನೀಗಿಸಲು ಹೊಸ ಹೊಸ ತಂತ್ರಗಳನ್ನು ಬಳಸಿ ಹರಸಾಹಸ ಮಾಡುತ್ತಿದ್ದಾರೆ. ನಗರದ ಅಕ್ಕಪಕ್ಕದ ಬಾವಿಗಳಲ್ಲಿನ ನೀರನ್ನು ಹೊಸ ಪೈಪ್‌ಲೈನ್‌ ಮುಖಾಂತರ ನಗರಸಭೆ ಅಧಿಕಾರಿಗಳೊಂದಿಗೆ ಸೇರಿ ನಾಗರಿಕರಿಗೆ ನೀರು ಕೊಡುವ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೂ ನೀರು ಸಮರ್ಪಕವಾಗಿ ವಿತರಣೆಯಾಗದೇ ಜನ ರೊಚ್ಚಿಗೇಳುತ್ತಿದ್ದಾರೆ. ಈ ಚುನಾವಣೆಯಲ್ಲಿ ಕೆಲವೊಂದು ಪಕ್ಷಗಳ ಮುಖಂಡರು
ಇದನ್ನೇ ಬಂಡವಾಳವಾಗಿಸಿಕೊಂಡು, ತಮ್ಮ ಪಕ್ಷಕ್ಕೆ ಮತ ನೀಡಿದರೆ ಮುಂದಿನ ದಿನಮಾನಗಳಲ್ಲಿ ನೀರಿನ ಸಮಸ್ಯೆ ಉದ್ಭವವಾಗದಂತೆ ಇದಕ್ಕೆ ಶಾಶ್ವತ ಪರಿಹಾರ ಮಾಡಿಕೊಡುವುದಾಗಿಭರವಸೆ ನೀಡುತ್ತಾ ಮತದಾರರ ಓಲೈಕೆಯಲ್ಲಿ ತೊಡಗಿದ್ದಾರೆ.

ಬಿಸಿಲಿನ ತಾಪಕ್ಕೆ ತಂಪು ಪಾನೀಯ: ಒಂದೆಡೆ ಬಿಸಿಲಿನ ಝಳಕ್ಕೆ ಹೊಟ್ಟೆ ತಂಪಾಗಿಸಿಕೊಳ್ಳಲು ಇಲ್ಲಿನ ಜನರು ಕೋಲ್ಡ ಡ್ರಿಂಕ್ಸ್‌ ಅಂಗಡಿಗಳತ್ತ ಮುಖ ಮಾಡಿ ತಂಪು ಪಾನೀಯ, ಐಸ್‌-ಕ್ರೀಮ್‌, ತೆಂಗಿನ ಎಳೆನೀರು, ಹಣ್ಣಿನ ರಸ ಸೇವಿಸಿದರೆ ಇನ್ನೊಂದೆಡೆ ರೈತರು ತಮ್ಮ ಮನೆಗಳಲ್ಲಿರುವ ಮಣ್ಣಿನ ಮಡಕೆ, ತತ್ರಾನಿಯಲ್ಲಿ ನೀರು ಸಂಗ್ರಹಿಸಿ ತಂಪು ತಟ್ಟು ಹೊದಿಸಿ ತಂಪು ನೀರು ಸೇವಿಸುತ್ತಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜನಪ್ರತಿನಿಧಿಗಳ ಕೈ ಕಟ್ಟಿಹಾಕಿದೆ. ಒಂದೆಡೆ ಜನರ ನೀರಿನ ದಾಹ ಹೆಚ್ಚಾಗಿದ್ದರೂ ಅಭ್ಯರ್ಥಿ ಮಾತ್ರ ತನ್ನ “ಮತ’ ವೆಂಬ ದಾಹ ತೀರಿಸಿಕೊಳ್ಳಲು ಮಾತ್ರ ಹವಣಿಸುತ್ತಿದ್ದಾನೆ.

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.