ನೇಕಾರ ಸಮುದಾಯ ಪ್ರವರ್ಗ-1ಕ್ಕೆ ಸೇರಿಸಿ
Team Udayavani, Dec 27, 2020, 1:52 PM IST
ಬನಹಟ್ಟಿ: ರಾಜ್ಯದಲ್ಲಿರುವ ನೇಕಾರ ಸಮುದಾಯಕ್ಕೆ ದೊರೆಯಬೇಕಾದ ಸೌಲಭ್ಯಗಳುದೊರೆಯದೆ ಇರುವುದರಿಂದ ನೇಕಾರರುವಂಚಿತರಾಗುತ್ತಿದ್ದಾರೆ. ಆದ್ದರಿಂದ ನೇಕಾರರನ್ನು ಪ್ರವರ್ಗ-1ರಲ್ಲಿ ಸೇರಿಸುವ ನಿಟ್ಟಿನಲ್ಲಿ ಹೋರಾಟ ಅಗತ್ಯವಾಗಿದೆ ಎಂದು ನೇಕಾರ ಮುಖಂಡ ಮನೋಹರ ಶಿರೋಳ ಹೇಳಿದರು.
ಶನಿವಾರ ಸ್ಥಳೀಯ ಬಂಗಾರೆವ್ವ ತಟ್ಟಿಮನಿ ಸಭಾಭವನದಲ್ಲಿ ನಡೆದ ನೇಕಾರ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.ಈ ನಿಟ್ಟಿನಲ್ಲಿ ನೇಕಾರ ಸಮುದಾಯದ ಪ್ರಮುಖರು ಪಕ್ಷ ಬೇಧ ಮರೆತು ಒಂದಾಗಿಹೋರಾಟ ಮಾಡಬೇಕಾಗಿದೆ. ಪ್ರವರ್ಗ-1ಕ್ಕೆಸೇರಿದಾಗ ಮಾತ್ರ ಮುಂಬರುವ ನೇಕಾರರ ಮಕ್ಕಳಿಗೆ ಅನುಕೂಲವಾಗಲಿದೆ. ನೇಕಾರರು ಕೂಡಾ ಸಾಮಾಜಿಕ, ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಡಿ.ಎಸ್.ಮಾಚಕನೂರ ಮಾತನಾಡಿ, ಈಗಾಗಲೇ ನೇಕಾರ ಜಾತಿಯನ್ನುಪ್ರವರ್ಗ-2 ರಲ್ಲಿ ಸೇರಿಸಲಾಗಿದೆ. ಇಲ್ಲಿ ಒಟ್ಟು26 ಜಾತಿಗಳಿವೆ. ಇದರಿಂದಾಗಿ ನೇಕಾರರಿಗೆದೊರೆಯಬೇಕಾದ ಯಾವುದೆ ಸೌಲಭ್ಯಗಳುದೊರೆಯುತ್ತಿಲ್ಲ. ಆದ್ದರಿಂದ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಗಮನ ನೀಡಿ ನೇಕಾರ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದರು.
ಮುಖಂಡ ಶಂಕರ ಸೋರಗಾವಿ ಮಾತನಾಡಿ,ಮಹಾರಾಷ್ಟ್ರ ರಾಜ್ಯದಲ್ಲಿ ಈಗಾಗಲೇ ಅಲ್ಲಿರುವನೇಕಾರರಿಗೆ ವಿಶೇಷ ಸ್ಥಾನಮಾನ ನೀಡಿದ್ದಾರೆ. ರಾಜ್ಯದಲ್ಲೂ ಕೂಡಾ ನೇಕಾರರಿಗೆ ವಿಶೇಷ ಮೀಸಲಾತಿಯನ್ನು ನೀಡುವಲ್ಲಿ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯಾದಂತ ಹೋರಾಟ ಅಗತ್ಯವಾಗಿದೆ. ನೇಕಾರ ಸಮುದಾಯ ಜಾಗೃತವಾಗಬೇಕು ಎಂದರು.
ಜಿ.ಎಸ್.ಗೊಂಬಿ, ಶಂಕರ ಜುಂಜಪ್ಪನವರ ಸೇರಿದಂತೆ ಅನೇಕರು ಮಾತನಾಡಿದರು. ಮಂಗಳವಾರ ಪೇಟೆ ದೈವ ಮಂಡಳಿಯ ಅಧ್ಯಕ್ಷ ಶ್ರೀಶೈಲ ಧಬಾಡಿ ಅಧ್ಯಕ್ಷತೆ ವಹಿಸಿದ್ದರು. ಶಂಕರ ಜಾಲಿಗಿಡದ, ಓಂಪ್ರಕಾಶ ಬಾಗೇವಾಡಿ, ಪ್ರಭುಹಟ್ಟಿ, ಶ್ರೀನಿವಾಸ ಹುಬ್ಬಳ್ಳಿ, ನಗರಸಭಾ ಅಧ್ಯಕ್ಷ ಶ್ರೀಶೈಲ ಬೀಳಗಿ, ಮಲ್ಲಿನಾಥ ಕಕಮರಿ, ಈರಣ್ಣ ಚಿಂಚಕಂಡಿ, ರವಿ ಬಾಡಗಿ, ರವಿ ಚನಪನ್ನವರ, ರಾಜೇಂದ್ರ ಭದ್ರನವರ, ಬಸವರಾಜ ಗುಡೋಡಗಿ, ಶಿವಾನಂದ ಬುದ್ನಿ, ಡಾ| ಶಂಕರ ವಸ್ತ್ರದ ಇದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿಷ್ಟಾಚಾರ ಉಲ್ಲಂಘಿಸಿದ ತಹಶೀಲ್ದಾರ್ : ಶರಣು ಬೆಲ್ಲದ ಆರೋಪ
ರೈತರು- ಜನರ ಅಭಿವೃದ್ದಿಗೆ ಯಡಿಯೂರಪ್ಪ ಯಾವುದೇ ರೀತಿ ಹಿಂದೆ ಬಿದ್ದಿಲ್ಲ: ಅಮಿತ್ ಶಾ
ಮುಚ್ಚಿದ ಸಕ್ಕರೆ ಕಾರ್ಖಾನೆ ಆರಂಭಿಸಿ :ಕಾರ್ಖಾನೆ ಬಂದ್ನಿಂದ ಸಾವಿರಾರು ಕಾರ್ಮಿಕರು ಬೀದಿಪಾಲು
ರೈತರಿಗೆ ಅನ್ಯಾಯವಾಗಲು ಬಿಡಲ್ಲ: ಸಚಿವ ಮುರುಗೇಶ ನಿರಾಣಿ ಅಭಯ
ಹನಗಂಡಿಯಲ್ಲಿ “ವ್ಯೋಮಕಾಯ ಸಿದ್ಧ ಶ್ರೀ ಅಲ್ಲಮಪ್ರಭು’ ಚಿತ್ರೀಕರಣ